AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಎಣ್ಣೆಬಾಣಲೆಯಲ್ಲಿ ಮೀಯುತ್ತಿರುವ ಇಲಿ, ಪಾದಗಳಿಂದ ಹಿಟ್ಟು ನಾದುತ್ತಿರುವ ಯುವಕರು

Kneading Flour Dough with Feet : ಕಾಶ್ಮೀರದ ಬಡಗಾಮ್​ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಚಹಾ ಅಂಗಡಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಅಂಗಡಿಯನ್ನೂ ಸೀಲ್ ಮಾಡಿದ್ದಾರೆ.

Viral Video : ಎಣ್ಣೆಬಾಣಲೆಯಲ್ಲಿ ಮೀಯುತ್ತಿರುವ ಇಲಿ, ಪಾದಗಳಿಂದ ಹಿಟ್ಟು ನಾದುತ್ತಿರುವ ಯುವಕರು
ಕಾಲಿನಿಂದ ಹಿಟ್ಟು ನಾದುತ್ತಿರುವುದು, ಎಣ್ಣೆಬಾಣಲಿಯಲ್ಲಿ ಇಲಿ.
TV9 Web
| Edited By: |

Updated on:Sep 26, 2022 | 10:36 AM

Share

Viral Video : ಇಷ್ಟುವರ್ಷಗಳಲ್ಲಿ ಇಂಥ ಅದೆಷ್ಟು ವಿಡಿಯೋಗಳು ವೈರಲ್ ಆಗಿವೆಯೋ ಏನೋ. ಆದರೂ ನಮ್ಮ ಜನ ಪಾನಿಪುರಿ, ಗೋಲ್​ಗಪ್ಪಾ, ಸಮೋಸಾ, ದಹೀಪುರಿ ಹೀಗೆ ಸ್ಟ್ರೀಟ್​ ಚಾಟ್​ನ ವ್ಯಾಮೋಹದಿಂದ ಹೊರಬರಲು ಸಾಧ್ಯವಾಗುತ್ತಲೇ ಇಲ್ಲ. ಸಣ್ಣಪುಟ್ಟ ಅಂಗಡಿಗಳಿಗೆ ಪೂರೈಕೆಯಾಗುವ ಖಾದ್ಯಗಳನ್ನು ಎಂಥ ಸ್ಥಳದಲ್ಲಿ ತಯಾರಿಸುತ್ತಾರೆ ಎಂಬ ಚಿತ್ರಣವನ್ನು ಇಲ್ಲಿ ವಿವರಿಸುವುದು ಅನಗತ್ಯ ಎನ್ನಿಸುತ್ತದೆ. ಏಕೆಂದರೆ ಈ ಹಿಂದೆ ನೋಡಿದ ವಿಡಿಯೋಗಳ ತುಣುಕುಗಳು ನಿಮ್ಮ ನೆನಪಿನ ಕೋಶದಲ್ಲಿ ಚೆನ್ನಾಗಿಯೇ ಅಚ್ಚಾಗಿರಲು ಸಾಕು. ಈಗ ವೈರಲ್ ಆಗಿರುವ ದೃಶ್ಯಗಳನ್ನು ನೋಡಿ. ದೃಶ್ಯ 1 : ಇಬ್ಬರು ಯುವಕರು ಹಿಟ್ಟನ್ನು ಪಾದಗಳಿಂದ ತುಳಿದು ಹದ ಮಾಡುತ್ತಿದ್ದಾರೆ. ದೃಶ್ಯ 2 : ದೊಡ್ಡ ಬಾಣಲೆಯಲ್ಲಿರುವ ಎಣ್ಣೆಯಲ್ಲಿ ಬಿದ್ದ ಇಲಿ ಹೊರಬರಲು ಆಗದೆ ಬಿದ್ದು ಹೊರಳಾಡುತ್ತಿದೆ.

ಕಾಶ್ಮೀರದ ಬಡಗಾಮ್​ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಚಹಾ ಅಂಗಡಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ ಅಷ್ಟೇ ಅಲ್ಲ ಅಂಗಡಿಯನ್ನು ಸೀಲ್ ಮಾಡಿದ್ದಾರೆ. ಆರೋಪಿಯನ್ನು ಬಡಗಾಮ್​ನ ಓಂಪುರಾದ ಇಮ್ರಾನ್​ ಹೋಟೆಲ್​ನ ಇಮ್ರಾನ್​ ಹುಸೇನ್​ ಹಲ್ವಾಯಿ ಎಂದು ಗುರುತಿಸಲಾಗಿದೆ.

ಬಡಗಾಮ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಶುಚಿರಹಿತ ವಾತಾವರಣದಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಕ್ಕಾಗಿ ಸ್ಥಳೀಯರು ಪೊಲೀಸರನ್ನು ಶ್ಲಾಘಿಸಿದ್ದಾರೆ.

ರಸ್ತೆಬದಿಯ ತಿಂಡಿಗಳ ರುಚಿಗೆ ಮಾರುಹೋಗುವವರು ಇನ್ನಾದರೂ ಯೋಚಿಸಿ. ಎಲ್ಲಿ ಹೇಗೆ ತಯಾರಿಸುತ್ತಾರೆ ಎಂಬುದನ್ನು ತಿಳಿದುಕೊಂಡು ತಿನ್ನುವಂತಿದ್ದರೆ ಸರಿ. ಇಲ್ಲವಾದಲ್ಲಿ ಅನಾರೋಗ್ಯ ತಪ್ಪಿದ್ದಲ್ಲ.

ಒಂದು ಮಿಲಿಯನ್​ಗಿಂತಲೂ ಹೆಚ್ಚು ಜನ ಈ ವಿಡಿಯೋ ನೋಡಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:29 am, Mon, 26 September 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!