AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 68 ವರ್ಷದ ಇವರು ಮಾರುವ ಹಪ್ಪಳ ಕೇವಲ 20 ರೂಪಾಯಿ

Trending : ಈ ಅಜ್ಜಿಗೆ ನಾವು ಹೇಗೆ ಸಹಾಯ ಮಾಡಬಹುದು ದಯವಿಟ್ಟು ತಿಳಿಸಿ ಎನ್ನುತ್ತಿದ್ದಾರೆ ನೆಟ್ಟಿಗರು. ಈ ವಿಡಿಯೋ ನೋಡಿ...

Viral Video: 68 ವರ್ಷದ ಇವರು ಮಾರುವ ಹಪ್ಪಳ ಕೇವಲ 20 ರೂಪಾಯಿ
ಈ ವಯಸ್ಸನಲ್ಲಿ ಬೀದಿಯಲ್ಲಿ ಹಪ್ಪಳ ಮಾರುತ್ತಾ....
TV9 Web
| Edited By: |

Updated on: Aug 07, 2022 | 6:45 PM

Share

Viral : ಅರವತ್ತು ದಾಟಿದ ನಂತರ ವಿಶ್ರಾಂತಿ ಪಡೆಯಬೇಕಲ್ಲವೆ? ಆದರೆ ನಮ್ಮ ಸುತ್ತಮುತ್ತಲಿರುವ ಎಷ್ಟೋ ಹಿರಿಯ ನಾಗರಿಕರಿಗೆ ಎಲ್ಲಿದೆ ವಿಶ್ರಾಂತಿ? ಜೈಪುರದ ಜಂತರ್​ಮಂತರ್​ ಬಳಿ ಇರುವ ಜಿಲೇಬಿ ಚೌಕ್​ಗೆ ಬಂದರೆ 68 ವರ್ಷದ ಹಿರಿಯಮಹಿಳೆ ನಿಮ್ಮನ್ನು ಎದುರುಗೊಳ್ಳುತ್ತಾರೆ. ದೊಡ್ಡ ಬಿದಿರಿನ ಬುಟ್ಟಿಯಲ್ಲಿ ಎರಡೂ ಮೊಣಕೈಗಳ ತನಕ ಮುಟ್ಟುವಷ್ಟು ದೊಡ್ಡದಾದ ಗರಿಗರಿಯಾದ ಹಪ್ಪಳದ ಮೇಲೆ ಮಿತವಾಗಿ ಖಾರಪುಡಿ ಉದುರಿಸಿ ನಿಮ್ಮ ಕೈಗಿಡುತ್ತಾರೆ. ಒಂದು ಹಪ್ಪಳಕ್ಕೆ ಕೇವಲ ರೂ. 20! ಈ ವಿಡಿಯೋ ಈಗ ವೈರಲ್ ಆಗಿದೆ. ಈ ವಯಸ್ಸಿನಲ್ಲಿಯೂ ಸ್ವಾಭಿಮಾನ ಮತ್ತು ಘನತೆಯೊಂದಿಗೆ ಬದುಕುತ್ತಿರುವ ಇವರ ಪ್ರಾಮಾಣಿಕತೆಗೆ ನೆಟ್ಟಿಗರು ಶಭಾಷ್​ ಎಂದಿದ್ದಾರೆ!

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Street Food Recipes (@streetfoodrecipe)

ಇನ್​ಸ್ಟಾಗ್ರಾಮ್​ನಲ್ಲಿರುವ ಪೋಸ್ಟ್​ನಲ್ಲಿ, ‘68 ವರ್ಷದ ಈ ಮಹಿಳೆ ಈಗಲೂ ಕಷ್ಟಪಟ್ಟು ದುಡಿದು ತಮ್ಮ ಕುಟುಂಬವನ್ನು ನಡೆಸುತ್ತಿದ್ದಾರೆ. ಕೇವಲ 20 ರೂಪಾಯಿಗೆ ಹಪ್ಪಳವನ್ನು ಮಾರುತ್ತಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೂ ಶರವೇಗದಲ್ಲಿ ಇವರ ಹಪ್ಪಳಗಳು ಮಾರಾಟವಾಗುತ್ತಿವೆ. ಇಡೀ ಕುಟುಂಬವನ್ನು ಇಬರೊಬ್ಬರೇ ದುಡಿದು ಸಾಕುತ್ತಿದ್ದಾರೆ.’ ಎಂಬ ಒಕ್ಕಣೆ ಇದೆ.

ನೆಟ್ಟಿಗರು ಮನಕರಗಿ, ದಯವಿಟ್ಟು ಇವರಿಗೆ ಹೇಗೆ ಸಹಾಯ ಮಾಡಬೇಕೆಂದು ತಿಳಿಸಿ ಎಂದು ಕೇಳಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿಯ ನೆಟ್ಟಿಗರು ಹೇಗಾದರೂ ನಾವವರಿಗೆ ಸಹಾಯ ಮಾಡಲೇಬೇಕು, ಹೇಗೆಂದು ತಿಳಿಸಿ ಎಂದು ಕೋರಿಕೊಂಡಿದ್ದಾರೆ. ಅವರು ಮಾರುವ ಹಪ್ಪಳವನ್ನು ನಾನು ಮಾರಬಯಸುತ್ತೇನೆ ಎಂದೂ ಕೆಲವರು ಹೇಳಿದ್ದಾರೆ. ಅದಕ್ಕೆ ಕೆಲವರು ನೇರ ಜೈಪುರಕ್ಕೆ ಹೋಗಿ ಇವರನ್ನು ಭೇಟಿಮಾಡಿ ಎಂದಿದ್ದಾರೆ ಒಬ್ಬರು.

ಇದನ್ನು ನೋಡಿದ ನಾವು ಘನತೆ, ಸ್ವಾಭಿಮಾನ ಎಂದು ಕೊಂಡಾಡುತ್ತೇವೆ. ಆದರೆ ಈ ಇಳಿವಯಸ್ಸಿನಲ್ಲಿ ಇವರು ಇಂಥ ಪರಿಸ್ಥಿತಿಯಲ್ಲಿರಬೇಕೆ? ಎಂದು ಅವರು ಆರಾಮಾಗಿ ನಿಶ್ಚಿಂತೆಯಿಂದ ಬದುಕುವುದು? ಯೋಚಿಸಿ.

ಇನ್ನಷ್ಟು ವೈರಲ್ ವಿಡಯೋಗಳಿಗಾಗಿ ಕ್ಲಿಕ್ ಮಾಡಿ

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?