AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 68 ವರ್ಷದ ಇವರು ಮಾರುವ ಹಪ್ಪಳ ಕೇವಲ 20 ರೂಪಾಯಿ

Trending : ಈ ಅಜ್ಜಿಗೆ ನಾವು ಹೇಗೆ ಸಹಾಯ ಮಾಡಬಹುದು ದಯವಿಟ್ಟು ತಿಳಿಸಿ ಎನ್ನುತ್ತಿದ್ದಾರೆ ನೆಟ್ಟಿಗರು. ಈ ವಿಡಿಯೋ ನೋಡಿ...

Viral Video: 68 ವರ್ಷದ ಇವರು ಮಾರುವ ಹಪ್ಪಳ ಕೇವಲ 20 ರೂಪಾಯಿ
ಈ ವಯಸ್ಸನಲ್ಲಿ ಬೀದಿಯಲ್ಲಿ ಹಪ್ಪಳ ಮಾರುತ್ತಾ....
TV9 Web
| Updated By: ಶ್ರೀದೇವಿ ಕಳಸದ|

Updated on: Aug 07, 2022 | 6:45 PM

Share

Viral : ಅರವತ್ತು ದಾಟಿದ ನಂತರ ವಿಶ್ರಾಂತಿ ಪಡೆಯಬೇಕಲ್ಲವೆ? ಆದರೆ ನಮ್ಮ ಸುತ್ತಮುತ್ತಲಿರುವ ಎಷ್ಟೋ ಹಿರಿಯ ನಾಗರಿಕರಿಗೆ ಎಲ್ಲಿದೆ ವಿಶ್ರಾಂತಿ? ಜೈಪುರದ ಜಂತರ್​ಮಂತರ್​ ಬಳಿ ಇರುವ ಜಿಲೇಬಿ ಚೌಕ್​ಗೆ ಬಂದರೆ 68 ವರ್ಷದ ಹಿರಿಯಮಹಿಳೆ ನಿಮ್ಮನ್ನು ಎದುರುಗೊಳ್ಳುತ್ತಾರೆ. ದೊಡ್ಡ ಬಿದಿರಿನ ಬುಟ್ಟಿಯಲ್ಲಿ ಎರಡೂ ಮೊಣಕೈಗಳ ತನಕ ಮುಟ್ಟುವಷ್ಟು ದೊಡ್ಡದಾದ ಗರಿಗರಿಯಾದ ಹಪ್ಪಳದ ಮೇಲೆ ಮಿತವಾಗಿ ಖಾರಪುಡಿ ಉದುರಿಸಿ ನಿಮ್ಮ ಕೈಗಿಡುತ್ತಾರೆ. ಒಂದು ಹಪ್ಪಳಕ್ಕೆ ಕೇವಲ ರೂ. 20! ಈ ವಿಡಿಯೋ ಈಗ ವೈರಲ್ ಆಗಿದೆ. ಈ ವಯಸ್ಸಿನಲ್ಲಿಯೂ ಸ್ವಾಭಿಮಾನ ಮತ್ತು ಘನತೆಯೊಂದಿಗೆ ಬದುಕುತ್ತಿರುವ ಇವರ ಪ್ರಾಮಾಣಿಕತೆಗೆ ನೆಟ್ಟಿಗರು ಶಭಾಷ್​ ಎಂದಿದ್ದಾರೆ!

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Street Food Recipes (@streetfoodrecipe)

ಇನ್​ಸ್ಟಾಗ್ರಾಮ್​ನಲ್ಲಿರುವ ಪೋಸ್ಟ್​ನಲ್ಲಿ, ‘68 ವರ್ಷದ ಈ ಮಹಿಳೆ ಈಗಲೂ ಕಷ್ಟಪಟ್ಟು ದುಡಿದು ತಮ್ಮ ಕುಟುಂಬವನ್ನು ನಡೆಸುತ್ತಿದ್ದಾರೆ. ಕೇವಲ 20 ರೂಪಾಯಿಗೆ ಹಪ್ಪಳವನ್ನು ಮಾರುತ್ತಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೂ ಶರವೇಗದಲ್ಲಿ ಇವರ ಹಪ್ಪಳಗಳು ಮಾರಾಟವಾಗುತ್ತಿವೆ. ಇಡೀ ಕುಟುಂಬವನ್ನು ಇಬರೊಬ್ಬರೇ ದುಡಿದು ಸಾಕುತ್ತಿದ್ದಾರೆ.’ ಎಂಬ ಒಕ್ಕಣೆ ಇದೆ.

ನೆಟ್ಟಿಗರು ಮನಕರಗಿ, ದಯವಿಟ್ಟು ಇವರಿಗೆ ಹೇಗೆ ಸಹಾಯ ಮಾಡಬೇಕೆಂದು ತಿಳಿಸಿ ಎಂದು ಕೇಳಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿಯ ನೆಟ್ಟಿಗರು ಹೇಗಾದರೂ ನಾವವರಿಗೆ ಸಹಾಯ ಮಾಡಲೇಬೇಕು, ಹೇಗೆಂದು ತಿಳಿಸಿ ಎಂದು ಕೋರಿಕೊಂಡಿದ್ದಾರೆ. ಅವರು ಮಾರುವ ಹಪ್ಪಳವನ್ನು ನಾನು ಮಾರಬಯಸುತ್ತೇನೆ ಎಂದೂ ಕೆಲವರು ಹೇಳಿದ್ದಾರೆ. ಅದಕ್ಕೆ ಕೆಲವರು ನೇರ ಜೈಪುರಕ್ಕೆ ಹೋಗಿ ಇವರನ್ನು ಭೇಟಿಮಾಡಿ ಎಂದಿದ್ದಾರೆ ಒಬ್ಬರು.

ಇದನ್ನು ನೋಡಿದ ನಾವು ಘನತೆ, ಸ್ವಾಭಿಮಾನ ಎಂದು ಕೊಂಡಾಡುತ್ತೇವೆ. ಆದರೆ ಈ ಇಳಿವಯಸ್ಸಿನಲ್ಲಿ ಇವರು ಇಂಥ ಪರಿಸ್ಥಿತಿಯಲ್ಲಿರಬೇಕೆ? ಎಂದು ಅವರು ಆರಾಮಾಗಿ ನಿಶ್ಚಿಂತೆಯಿಂದ ಬದುಕುವುದು? ಯೋಚಿಸಿ.

ಇನ್ನಷ್ಟು ವೈರಲ್ ವಿಡಯೋಗಳಿಗಾಗಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ