AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಪೊಲೀಸ್ ಆಂಟೀ, ನಿಮ್ಮ ಲಾಠಿ ನನಗೆ ಬೇಕು ಅಂದ್ರೆ ಬೇಕು ಅಷ್ಟೆ!

Little Girl in Mumbai : ರಾತ್ರಿಯಾಗಿದೆ. ಮುಂಬೈನ ಮಹಿಳಾ ಪೊಲೀಸ್​ ತಮ್ಮಪಾಡಿಗೆ ತಾವು ಕರ್ತವ್ಯ ನಿರತರಾಗಿದ್ದಾರೆ. 21ತಿಂಗಳ ಈ ಹೆಣ್ಣುಮಗು, ತನಗೆ ಲಾಠಿ ಬೇಕು ಎಂದು ದುಂಬಾಲುಬಿದ್ದಿದೆ. ಎಂಟು ಮಿಲಿಯನ್ ನೆಟ್ಟಿಗರು ಈ ಮುದ್ದಾದ ವಿಡಿಯೋಗೆ ಫಿದಾ!

Viral Video : ಪೊಲೀಸ್ ಆಂಟೀ, ನಿಮ್ಮ ಲಾಠಿ ನನಗೆ ಬೇಕು ಅಂದ್ರೆ ಬೇಕು ಅಷ್ಟೆ!
ಕೋಲು ಬೇಕು!
TV9 Web
| Edited By: |

Updated on:Sep 05, 2022 | 11:32 AM

Share

Viral Video : ಪೊಲೀಸ್​ ಎಂದರೆ ಮಕ್ಕಳಲ್ಲಿ ಭಯಹುಟ್ಟಿಸಿದ ಪೋಷಕರು ಸಾಕಷ್ಟಿದ್ದಾರೆ. ಹಾಗೆಯೇ ಪೊಲೀಸ್​ ಎಂದರೆ ಫ್ರೆಂಡ್​ ಎಂದು ಪ್ರೀತಿಯಿಂದ ಅವರೊಂದಿಗೆ ಒಡನಾಟ ಹುಟ್ಟಿಸಿದ ಪೋಷಕರೂ ನಮ್ಮ ನಡುವೆ ಇದ್ದಾರೆ. ಆದರೆ ಕೆಲ ಮಕ್ಕಳು ತಾವಾಗಿಯೇ ಪೊಲೀಸರನ್ನು ಸ್ನೇಹಿತರನ್ನಾಗಿಸಿಕೊಳ್ಳುವ ಪ್ರಯತ್ನ ಮಾಡುತ್ತಾರಲ್ಲ! ಅದು ಬಹಳ ವಿಶೇಷ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋ ನೋಡಿ. ಮುಂಬೈನಲ್ಲಿ ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬರ ಕೈಯಲ್ಲಿರುವ ಲಾಠಿ ತನಗೆ ಬೇಕೇ ಬೇಕೆಂದು ಈ ಹೆಣ್ಣುಮಗು ಹಠ ಹಿಡಿದಿದೆ. 8 ಮಿಲಿಯನ್​ ವೀಕ್ಷಣೆಗೆ ಒಳಗಾಗಿರುವ ಈ ವಿಡಿಯೋ ಬಹಳ ಮುದ್ದಾಗಿದೆ.

ಇನ್​ಸ್ಟಾಗ್ರಾಮ್​ನಲ್ಲಿ ಕನಿಷ್ಕಾ ಬಿಷ್ಣೋಯ್ ಎಂಬ ಪುಟದಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಕನಿಷ್ಕಾಗೆ 21 ತಿಂಗಳು. ಲಾಠಿಯನ್ನು ಆಟಿಕೆ ಎಂದುಕೊಂಡಿದೆಯೋ ಏನೋ. ತನಗದು ಬೇಕು ಎಂದು ಕೇಳುವ ರೀತಿಗೆ ಪೊಲೀಸ್​ ಅದು ನಿನಗೆ ಯಾಕೆ ಬೇಕು, ಯಾರಿಗೆ ಹೊಡೆಯಲು ಬೇಕು ಎಂದು ತಮಾಷೆ ಮಾಡಿದ್ದಾರೆ. ಅಮ್ಮನಿಗಾ? ಎಂದಾಗ ಅಸ್ಪಷ್ಟವಾಗಿ ಹೂಂ ಎಂದ ಹಾಗಿದೆ.

ದಿನಗಟ್ಟಲೆ ನಿಂತು ಜಂಜಾಟದಲ್ಲಿ ಕಳೆದುಹೋಗುವ ಪೊಲೀಸ್​ ಮುಖದಲ್ಲಿ ಹೀಗೆ ಈ ಮುದ್ದುಕೂಸು ನಗುತರಿಸಿದೆ. ಸಾಕಷ್ಟು ನೆಟ್ಟಿಗರು ಈ ವಿಡಿಯೋ ಮೆಚ್ಚಿ ಕೊಂಡಾಡಿದ್ದಾರೆ. ಮತ್ತೆ ಮತ್ತೆ ನೋಡಿ ನಗುತ್ತಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:24 am, Mon, 5 September 22

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್