AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಾಳಿಗೆ ಸಿಲುಕಿದ ಸ್ಪೈಸ್​ಜೆಟ್​​​ ವಿಮಾನ ಅಲುಗಾಡಿದ ಭಯಾನಕ ದೃಶ್ಯ; ಚೆಲ್ಲಾಪಿಲ್ಲಿಯಾದ ವಸ್ತುಗಳು, ಪ್ರಯಾಣಿಕರು ಕಂಗಾಲು

ಘಟನೆಯಲ್ಲಿ 14 ಪ್ರಯಾಣಿಕರು, ಮೂವರು ಕ್ಯಾಬಿನ್​ ಸಿಬ್ಬಂದಿ ಸೇರಿ 17 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಕೆಲವರ ತಲೆಗೆ ಗಂಭೀರಸ್ವರೂಪದ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಹೊಲಿಗೆ ಹಾಕಿಸಲಾಗಿದೆ.

Video: ಗಾಳಿಗೆ ಸಿಲುಕಿದ ಸ್ಪೈಸ್​ಜೆಟ್​​​ ವಿಮಾನ ಅಲುಗಾಡಿದ ಭಯಾನಕ ದೃಶ್ಯ; ಚೆಲ್ಲಾಪಿಲ್ಲಿಯಾದ ವಸ್ತುಗಳು, ಪ್ರಯಾಣಿಕರು ಕಂಗಾಲು
ಸ್ಪೈಸ್​ಜೆಟ್​​ನ ಚಿತ್ರಣ
TV9 Web
| Edited By: |

Updated on:May 02, 2022 | 12:20 PM

Share

ಮುಂಬೈನಿಂದ, ಪಶ್ಚಿಮಬಂಗಾಳದ ದುರ್ಗಾಪುರಕ್ಕೆ ಹೊರಟಿದ್ದ ಸ್ಪೈಸ್​ ಜೆಟ್​ ವಿಮಾನ ಭಾನುವಾರ ಸಂಜೆ ಬಹುದೊಡ್ಡ ದುರಂತದಿಂದ ಪಾರಾಗಿದೆ. ಪೈಲಟ್​​ಗಳ ಸಮಯಪ್ರಜ್ಞೆಯಿಂದ 188 ಮಂದಿಯ ಪ್ರಾಣ ಉಳಿದಿದೆ. ದುರ್ಗಾಪುರ ಏರ್​​​ಪೋರ್ಟ್​ನಲ್ಲಿ ಲ್ಯಾಂಡ್​ ಆಗುವಾಗ ಸುಂಟರಗಾಳಿಯ ಪ್ರಭಾವಕ್ಕೆ ಸಿಲುಕಿ ವಿಮಾನ ತೀವ್ರ ಕುಲುಕಾಟಕ್ಕೆ ಒಳಗಾಯಿತು. ಗಾಳಿಯಿಂದ ಸಿಕ್ಕಾಪಟೆ ಅಲುಗಾಡಿದ ವಿಮಾನದ ಒಳಗಿನ ದೃಶ್ಯದ ವಿಡಿಯೋ ವೈರಲ್ ಆಗಿದೆ. ವಿಮಾನದೊಳಗೆ ಇದ್ದ ಪ್ರಯಾಣಿಕರಿಗೆ ಸೇರಿದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕ್ಯಾಬಿನ್ ಬ್ಯಾಗೇಜ್​ ಪ್ರಯಾಣಿಕರ ಮೇಲೆ ಕುಸಿದಿದೆ. ಆಕ್ಸಿಜನ್​ ಮಾಸ್ಕ್​ಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದು ವಿಡಿಯೋದಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ 14 ಪ್ರಯಾಣಿಕರು, ಮೂವರು ಕ್ಯಾಬಿನ್​ ಸಿಬ್ಬಂದಿ ಸೇರಿ 17 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಕೆಲವರ ತಲೆಗೆ ಗಂಭೀರಸ್ವರೂಪದ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಹೊಲಿಗೆ ಹಾಕಿಸಲಾಗಿದೆ. ಇನ್ನೊಬ್ಬ ಪ್ರಯಾಣಿಕನಿಗೆ ಬೆನ್ನುಮೂಳೆಗೆ ಹೊಡೆತ ಬಿದ್ದಿದೆ​ ಎಂದು ವಾಯುಯಾನ ನಿಯಂತ್ರಕ ಸಂಸ್ಥೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಮಾಹಿತಿ ನೀಡಿದೆ. ಹಾಗೇ, ಗಾಯಗೊಂಡ ಎಲ್ಲರಿಗೂ ದುರ್ಗಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಸ್ಪೈಸ್​ಜೆಟ್​ ವಕ್ತಾರ ಮಾಹಿತಿ ನೀಡಿದ್ದಾರೆ. ಇನ್ನು ತಲೆಗೆ ಬ್ಯಾಂಡೇಜ್​​ ಹಾಕಿದ್ದ ವ್ಯಕ್ತಿಯೊಬ್ಬ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕಾರು ಅಪಘಾತವಾಗುವ ಸಂದರ್ಭದಲ್ಲಿ ಯಾವ ಸನ್ನಿವೇಶ ಇರುತ್ತದೆಯೋ, ಅದರ ಎರಡು ಪಟ್ಟು ಭೀಕರ ಸನ್ನಿವೇಶ ವಿಮಾನದಲ್ಲಿ ಇತ್ತು ಎಂದಿದ್ದಾರೆ.

ಸ್ಪೈಸ್​ಜೆಟ್​​ನ ಬೋಯಿಂಗ್​ ಬಿ737 ನ SG-945 ವಿಮಾನ ಮೇ 1ರಂದು ಮುಂಬೈನಿಂದ ದುರ್ಗಾಪುರಕ್ಕೆ ಹೋಗುತ್ತಿತ್ತು.  ದುರ್ಗಾಪುರದಲ್ಲಿ ಲ್ಯಾಂಡ್ ಆಗುವ ಹೊತ್ತಿಗೆ ಗಾಳಿಯಿಂದಾಗಿ ವಿಮಾನ ಅಲುಗಾಡಲು ಶುರುವಾಯಿತು. ಈ ಘಟನೆಯಲ್ಲಿ ಸುಮಾರು 12 ಪ್ರಯಾಣಿಕರಿಗೆ ಗಾಯವಾಗಿದೆ. ಗಗನಸಖಿಯರು ಸಮಾಧಾನ ಹೇಳುತ್ತಿದ್ದರೂ, ಜನರು ತೀವ್ರ ಭಯಕ್ಕೆ ಒಳಗಾಗಿದ್ದರು.

ಇದನ್ನೂ ಓದಿ: Akshaya Tritiya Gold Purchase: ಅಕ್ಷಯ ತೃತೀಯಕ್ಕೆ ಭೌತಿಕ ಚಿನ್ನ ಖರೀದಿ ಉತ್ತಮವೋ ಅಥವಾ ಗೋಲ್ಡ್ ಇಟಿಎಫ್?

Published On - 12:13 pm, Mon, 2 May 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ