AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಾಳಿಗೆ ಸಿಲುಕಿದ ಸ್ಪೈಸ್​ಜೆಟ್​​​ ವಿಮಾನ ಅಲುಗಾಡಿದ ಭಯಾನಕ ದೃಶ್ಯ; ಚೆಲ್ಲಾಪಿಲ್ಲಿಯಾದ ವಸ್ತುಗಳು, ಪ್ರಯಾಣಿಕರು ಕಂಗಾಲು

ಘಟನೆಯಲ್ಲಿ 14 ಪ್ರಯಾಣಿಕರು, ಮೂವರು ಕ್ಯಾಬಿನ್​ ಸಿಬ್ಬಂದಿ ಸೇರಿ 17 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಕೆಲವರ ತಲೆಗೆ ಗಂಭೀರಸ್ವರೂಪದ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಹೊಲಿಗೆ ಹಾಕಿಸಲಾಗಿದೆ.

Video: ಗಾಳಿಗೆ ಸಿಲುಕಿದ ಸ್ಪೈಸ್​ಜೆಟ್​​​ ವಿಮಾನ ಅಲುಗಾಡಿದ ಭಯಾನಕ ದೃಶ್ಯ; ಚೆಲ್ಲಾಪಿಲ್ಲಿಯಾದ ವಸ್ತುಗಳು, ಪ್ರಯಾಣಿಕರು ಕಂಗಾಲು
ಸ್ಪೈಸ್​ಜೆಟ್​​ನ ಚಿತ್ರಣ
Follow us
TV9 Web
| Updated By: Lakshmi Hegde

Updated on:May 02, 2022 | 12:20 PM

ಮುಂಬೈನಿಂದ, ಪಶ್ಚಿಮಬಂಗಾಳದ ದುರ್ಗಾಪುರಕ್ಕೆ ಹೊರಟಿದ್ದ ಸ್ಪೈಸ್​ ಜೆಟ್​ ವಿಮಾನ ಭಾನುವಾರ ಸಂಜೆ ಬಹುದೊಡ್ಡ ದುರಂತದಿಂದ ಪಾರಾಗಿದೆ. ಪೈಲಟ್​​ಗಳ ಸಮಯಪ್ರಜ್ಞೆಯಿಂದ 188 ಮಂದಿಯ ಪ್ರಾಣ ಉಳಿದಿದೆ. ದುರ್ಗಾಪುರ ಏರ್​​​ಪೋರ್ಟ್​ನಲ್ಲಿ ಲ್ಯಾಂಡ್​ ಆಗುವಾಗ ಸುಂಟರಗಾಳಿಯ ಪ್ರಭಾವಕ್ಕೆ ಸಿಲುಕಿ ವಿಮಾನ ತೀವ್ರ ಕುಲುಕಾಟಕ್ಕೆ ಒಳಗಾಯಿತು. ಗಾಳಿಯಿಂದ ಸಿಕ್ಕಾಪಟೆ ಅಲುಗಾಡಿದ ವಿಮಾನದ ಒಳಗಿನ ದೃಶ್ಯದ ವಿಡಿಯೋ ವೈರಲ್ ಆಗಿದೆ. ವಿಮಾನದೊಳಗೆ ಇದ್ದ ಪ್ರಯಾಣಿಕರಿಗೆ ಸೇರಿದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕ್ಯಾಬಿನ್ ಬ್ಯಾಗೇಜ್​ ಪ್ರಯಾಣಿಕರ ಮೇಲೆ ಕುಸಿದಿದೆ. ಆಕ್ಸಿಜನ್​ ಮಾಸ್ಕ್​ಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದು ವಿಡಿಯೋದಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ 14 ಪ್ರಯಾಣಿಕರು, ಮೂವರು ಕ್ಯಾಬಿನ್​ ಸಿಬ್ಬಂದಿ ಸೇರಿ 17 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಕೆಲವರ ತಲೆಗೆ ಗಂಭೀರಸ್ವರೂಪದ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಹೊಲಿಗೆ ಹಾಕಿಸಲಾಗಿದೆ. ಇನ್ನೊಬ್ಬ ಪ್ರಯಾಣಿಕನಿಗೆ ಬೆನ್ನುಮೂಳೆಗೆ ಹೊಡೆತ ಬಿದ್ದಿದೆ​ ಎಂದು ವಾಯುಯಾನ ನಿಯಂತ್ರಕ ಸಂಸ್ಥೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಮಾಹಿತಿ ನೀಡಿದೆ. ಹಾಗೇ, ಗಾಯಗೊಂಡ ಎಲ್ಲರಿಗೂ ದುರ್ಗಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಸ್ಪೈಸ್​ಜೆಟ್​ ವಕ್ತಾರ ಮಾಹಿತಿ ನೀಡಿದ್ದಾರೆ. ಇನ್ನು ತಲೆಗೆ ಬ್ಯಾಂಡೇಜ್​​ ಹಾಕಿದ್ದ ವ್ಯಕ್ತಿಯೊಬ್ಬ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕಾರು ಅಪಘಾತವಾಗುವ ಸಂದರ್ಭದಲ್ಲಿ ಯಾವ ಸನ್ನಿವೇಶ ಇರುತ್ತದೆಯೋ, ಅದರ ಎರಡು ಪಟ್ಟು ಭೀಕರ ಸನ್ನಿವೇಶ ವಿಮಾನದಲ್ಲಿ ಇತ್ತು ಎಂದಿದ್ದಾರೆ.

ಸ್ಪೈಸ್​ಜೆಟ್​​ನ ಬೋಯಿಂಗ್​ ಬಿ737 ನ SG-945 ವಿಮಾನ ಮೇ 1ರಂದು ಮುಂಬೈನಿಂದ ದುರ್ಗಾಪುರಕ್ಕೆ ಹೋಗುತ್ತಿತ್ತು.  ದುರ್ಗಾಪುರದಲ್ಲಿ ಲ್ಯಾಂಡ್ ಆಗುವ ಹೊತ್ತಿಗೆ ಗಾಳಿಯಿಂದಾಗಿ ವಿಮಾನ ಅಲುಗಾಡಲು ಶುರುವಾಯಿತು. ಈ ಘಟನೆಯಲ್ಲಿ ಸುಮಾರು 12 ಪ್ರಯಾಣಿಕರಿಗೆ ಗಾಯವಾಗಿದೆ. ಗಗನಸಖಿಯರು ಸಮಾಧಾನ ಹೇಳುತ್ತಿದ್ದರೂ, ಜನರು ತೀವ್ರ ಭಯಕ್ಕೆ ಒಳಗಾಗಿದ್ದರು.

ಇದನ್ನೂ ಓದಿ: Akshaya Tritiya Gold Purchase: ಅಕ್ಷಯ ತೃತೀಯಕ್ಕೆ ಭೌತಿಕ ಚಿನ್ನ ಖರೀದಿ ಉತ್ತಮವೋ ಅಥವಾ ಗೋಲ್ಡ್ ಇಟಿಎಫ್?

Published On - 12:13 pm, Mon, 2 May 22

ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು