AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಾಳಿಗೆ ಸಿಲುಕಿದ ಸ್ಪೈಸ್​ಜೆಟ್​​​ ವಿಮಾನ ಅಲುಗಾಡಿದ ಭಯಾನಕ ದೃಶ್ಯ; ಚೆಲ್ಲಾಪಿಲ್ಲಿಯಾದ ವಸ್ತುಗಳು, ಪ್ರಯಾಣಿಕರು ಕಂಗಾಲು

ಘಟನೆಯಲ್ಲಿ 14 ಪ್ರಯಾಣಿಕರು, ಮೂವರು ಕ್ಯಾಬಿನ್​ ಸಿಬ್ಬಂದಿ ಸೇರಿ 17 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಕೆಲವರ ತಲೆಗೆ ಗಂಭೀರಸ್ವರೂಪದ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಹೊಲಿಗೆ ಹಾಕಿಸಲಾಗಿದೆ.

Video: ಗಾಳಿಗೆ ಸಿಲುಕಿದ ಸ್ಪೈಸ್​ಜೆಟ್​​​ ವಿಮಾನ ಅಲುಗಾಡಿದ ಭಯಾನಕ ದೃಶ್ಯ; ಚೆಲ್ಲಾಪಿಲ್ಲಿಯಾದ ವಸ್ತುಗಳು, ಪ್ರಯಾಣಿಕರು ಕಂಗಾಲು
ಸ್ಪೈಸ್​ಜೆಟ್​​ನ ಚಿತ್ರಣ
TV9 Web
| Edited By: |

Updated on:May 02, 2022 | 12:20 PM

Share

ಮುಂಬೈನಿಂದ, ಪಶ್ಚಿಮಬಂಗಾಳದ ದುರ್ಗಾಪುರಕ್ಕೆ ಹೊರಟಿದ್ದ ಸ್ಪೈಸ್​ ಜೆಟ್​ ವಿಮಾನ ಭಾನುವಾರ ಸಂಜೆ ಬಹುದೊಡ್ಡ ದುರಂತದಿಂದ ಪಾರಾಗಿದೆ. ಪೈಲಟ್​​ಗಳ ಸಮಯಪ್ರಜ್ಞೆಯಿಂದ 188 ಮಂದಿಯ ಪ್ರಾಣ ಉಳಿದಿದೆ. ದುರ್ಗಾಪುರ ಏರ್​​​ಪೋರ್ಟ್​ನಲ್ಲಿ ಲ್ಯಾಂಡ್​ ಆಗುವಾಗ ಸುಂಟರಗಾಳಿಯ ಪ್ರಭಾವಕ್ಕೆ ಸಿಲುಕಿ ವಿಮಾನ ತೀವ್ರ ಕುಲುಕಾಟಕ್ಕೆ ಒಳಗಾಯಿತು. ಗಾಳಿಯಿಂದ ಸಿಕ್ಕಾಪಟೆ ಅಲುಗಾಡಿದ ವಿಮಾನದ ಒಳಗಿನ ದೃಶ್ಯದ ವಿಡಿಯೋ ವೈರಲ್ ಆಗಿದೆ. ವಿಮಾನದೊಳಗೆ ಇದ್ದ ಪ್ರಯಾಣಿಕರಿಗೆ ಸೇರಿದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕ್ಯಾಬಿನ್ ಬ್ಯಾಗೇಜ್​ ಪ್ರಯಾಣಿಕರ ಮೇಲೆ ಕುಸಿದಿದೆ. ಆಕ್ಸಿಜನ್​ ಮಾಸ್ಕ್​ಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದು ವಿಡಿಯೋದಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ 14 ಪ್ರಯಾಣಿಕರು, ಮೂವರು ಕ್ಯಾಬಿನ್​ ಸಿಬ್ಬಂದಿ ಸೇರಿ 17 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಕೆಲವರ ತಲೆಗೆ ಗಂಭೀರಸ್ವರೂಪದ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಹೊಲಿಗೆ ಹಾಕಿಸಲಾಗಿದೆ. ಇನ್ನೊಬ್ಬ ಪ್ರಯಾಣಿಕನಿಗೆ ಬೆನ್ನುಮೂಳೆಗೆ ಹೊಡೆತ ಬಿದ್ದಿದೆ​ ಎಂದು ವಾಯುಯಾನ ನಿಯಂತ್ರಕ ಸಂಸ್ಥೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಮಾಹಿತಿ ನೀಡಿದೆ. ಹಾಗೇ, ಗಾಯಗೊಂಡ ಎಲ್ಲರಿಗೂ ದುರ್ಗಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಸ್ಪೈಸ್​ಜೆಟ್​ ವಕ್ತಾರ ಮಾಹಿತಿ ನೀಡಿದ್ದಾರೆ. ಇನ್ನು ತಲೆಗೆ ಬ್ಯಾಂಡೇಜ್​​ ಹಾಕಿದ್ದ ವ್ಯಕ್ತಿಯೊಬ್ಬ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕಾರು ಅಪಘಾತವಾಗುವ ಸಂದರ್ಭದಲ್ಲಿ ಯಾವ ಸನ್ನಿವೇಶ ಇರುತ್ತದೆಯೋ, ಅದರ ಎರಡು ಪಟ್ಟು ಭೀಕರ ಸನ್ನಿವೇಶ ವಿಮಾನದಲ್ಲಿ ಇತ್ತು ಎಂದಿದ್ದಾರೆ.

ಸ್ಪೈಸ್​ಜೆಟ್​​ನ ಬೋಯಿಂಗ್​ ಬಿ737 ನ SG-945 ವಿಮಾನ ಮೇ 1ರಂದು ಮುಂಬೈನಿಂದ ದುರ್ಗಾಪುರಕ್ಕೆ ಹೋಗುತ್ತಿತ್ತು.  ದುರ್ಗಾಪುರದಲ್ಲಿ ಲ್ಯಾಂಡ್ ಆಗುವ ಹೊತ್ತಿಗೆ ಗಾಳಿಯಿಂದಾಗಿ ವಿಮಾನ ಅಲುಗಾಡಲು ಶುರುವಾಯಿತು. ಈ ಘಟನೆಯಲ್ಲಿ ಸುಮಾರು 12 ಪ್ರಯಾಣಿಕರಿಗೆ ಗಾಯವಾಗಿದೆ. ಗಗನಸಖಿಯರು ಸಮಾಧಾನ ಹೇಳುತ್ತಿದ್ದರೂ, ಜನರು ತೀವ್ರ ಭಯಕ್ಕೆ ಒಳಗಾಗಿದ್ದರು.

ಇದನ್ನೂ ಓದಿ: Akshaya Tritiya Gold Purchase: ಅಕ್ಷಯ ತೃತೀಯಕ್ಕೆ ಭೌತಿಕ ಚಿನ್ನ ಖರೀದಿ ಉತ್ತಮವೋ ಅಥವಾ ಗೋಲ್ಡ್ ಇಟಿಎಫ್?

Published On - 12:13 pm, Mon, 2 May 22

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ