AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಾಳಿಗೆ ಸಿಲುಕಿದ ಸ್ಪೈಸ್​ಜೆಟ್​​​ ವಿಮಾನ ಅಲುಗಾಡಿದ ಭಯಾನಕ ದೃಶ್ಯ; ಚೆಲ್ಲಾಪಿಲ್ಲಿಯಾದ ವಸ್ತುಗಳು, ಪ್ರಯಾಣಿಕರು ಕಂಗಾಲು

ಘಟನೆಯಲ್ಲಿ 14 ಪ್ರಯಾಣಿಕರು, ಮೂವರು ಕ್ಯಾಬಿನ್​ ಸಿಬ್ಬಂದಿ ಸೇರಿ 17 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಕೆಲವರ ತಲೆಗೆ ಗಂಭೀರಸ್ವರೂಪದ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಹೊಲಿಗೆ ಹಾಕಿಸಲಾಗಿದೆ.

Video: ಗಾಳಿಗೆ ಸಿಲುಕಿದ ಸ್ಪೈಸ್​ಜೆಟ್​​​ ವಿಮಾನ ಅಲುಗಾಡಿದ ಭಯಾನಕ ದೃಶ್ಯ; ಚೆಲ್ಲಾಪಿಲ್ಲಿಯಾದ ವಸ್ತುಗಳು, ಪ್ರಯಾಣಿಕರು ಕಂಗಾಲು
ಸ್ಪೈಸ್​ಜೆಟ್​​ನ ಚಿತ್ರಣ
TV9 Web
| Edited By: |

Updated on:May 02, 2022 | 12:20 PM

Share

ಮುಂಬೈನಿಂದ, ಪಶ್ಚಿಮಬಂಗಾಳದ ದುರ್ಗಾಪುರಕ್ಕೆ ಹೊರಟಿದ್ದ ಸ್ಪೈಸ್​ ಜೆಟ್​ ವಿಮಾನ ಭಾನುವಾರ ಸಂಜೆ ಬಹುದೊಡ್ಡ ದುರಂತದಿಂದ ಪಾರಾಗಿದೆ. ಪೈಲಟ್​​ಗಳ ಸಮಯಪ್ರಜ್ಞೆಯಿಂದ 188 ಮಂದಿಯ ಪ್ರಾಣ ಉಳಿದಿದೆ. ದುರ್ಗಾಪುರ ಏರ್​​​ಪೋರ್ಟ್​ನಲ್ಲಿ ಲ್ಯಾಂಡ್​ ಆಗುವಾಗ ಸುಂಟರಗಾಳಿಯ ಪ್ರಭಾವಕ್ಕೆ ಸಿಲುಕಿ ವಿಮಾನ ತೀವ್ರ ಕುಲುಕಾಟಕ್ಕೆ ಒಳಗಾಯಿತು. ಗಾಳಿಯಿಂದ ಸಿಕ್ಕಾಪಟೆ ಅಲುಗಾಡಿದ ವಿಮಾನದ ಒಳಗಿನ ದೃಶ್ಯದ ವಿಡಿಯೋ ವೈರಲ್ ಆಗಿದೆ. ವಿಮಾನದೊಳಗೆ ಇದ್ದ ಪ್ರಯಾಣಿಕರಿಗೆ ಸೇರಿದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕ್ಯಾಬಿನ್ ಬ್ಯಾಗೇಜ್​ ಪ್ರಯಾಣಿಕರ ಮೇಲೆ ಕುಸಿದಿದೆ. ಆಕ್ಸಿಜನ್​ ಮಾಸ್ಕ್​ಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದು ವಿಡಿಯೋದಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ 14 ಪ್ರಯಾಣಿಕರು, ಮೂವರು ಕ್ಯಾಬಿನ್​ ಸಿಬ್ಬಂದಿ ಸೇರಿ 17 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಕೆಲವರ ತಲೆಗೆ ಗಂಭೀರಸ್ವರೂಪದ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಹೊಲಿಗೆ ಹಾಕಿಸಲಾಗಿದೆ. ಇನ್ನೊಬ್ಬ ಪ್ರಯಾಣಿಕನಿಗೆ ಬೆನ್ನುಮೂಳೆಗೆ ಹೊಡೆತ ಬಿದ್ದಿದೆ​ ಎಂದು ವಾಯುಯಾನ ನಿಯಂತ್ರಕ ಸಂಸ್ಥೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಮಾಹಿತಿ ನೀಡಿದೆ. ಹಾಗೇ, ಗಾಯಗೊಂಡ ಎಲ್ಲರಿಗೂ ದುರ್ಗಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಸ್ಪೈಸ್​ಜೆಟ್​ ವಕ್ತಾರ ಮಾಹಿತಿ ನೀಡಿದ್ದಾರೆ. ಇನ್ನು ತಲೆಗೆ ಬ್ಯಾಂಡೇಜ್​​ ಹಾಕಿದ್ದ ವ್ಯಕ್ತಿಯೊಬ್ಬ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕಾರು ಅಪಘಾತವಾಗುವ ಸಂದರ್ಭದಲ್ಲಿ ಯಾವ ಸನ್ನಿವೇಶ ಇರುತ್ತದೆಯೋ, ಅದರ ಎರಡು ಪಟ್ಟು ಭೀಕರ ಸನ್ನಿವೇಶ ವಿಮಾನದಲ್ಲಿ ಇತ್ತು ಎಂದಿದ್ದಾರೆ.

ಸ್ಪೈಸ್​ಜೆಟ್​​ನ ಬೋಯಿಂಗ್​ ಬಿ737 ನ SG-945 ವಿಮಾನ ಮೇ 1ರಂದು ಮುಂಬೈನಿಂದ ದುರ್ಗಾಪುರಕ್ಕೆ ಹೋಗುತ್ತಿತ್ತು.  ದುರ್ಗಾಪುರದಲ್ಲಿ ಲ್ಯಾಂಡ್ ಆಗುವ ಹೊತ್ತಿಗೆ ಗಾಳಿಯಿಂದಾಗಿ ವಿಮಾನ ಅಲುಗಾಡಲು ಶುರುವಾಯಿತು. ಈ ಘಟನೆಯಲ್ಲಿ ಸುಮಾರು 12 ಪ್ರಯಾಣಿಕರಿಗೆ ಗಾಯವಾಗಿದೆ. ಗಗನಸಖಿಯರು ಸಮಾಧಾನ ಹೇಳುತ್ತಿದ್ದರೂ, ಜನರು ತೀವ್ರ ಭಯಕ್ಕೆ ಒಳಗಾಗಿದ್ದರು.

ಇದನ್ನೂ ಓದಿ: Akshaya Tritiya Gold Purchase: ಅಕ್ಷಯ ತೃತೀಯಕ್ಕೆ ಭೌತಿಕ ಚಿನ್ನ ಖರೀದಿ ಉತ್ತಮವೋ ಅಥವಾ ಗೋಲ್ಡ್ ಇಟಿಎಫ್?

Published On - 12:13 pm, Mon, 2 May 22

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ