AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನ ಪ್ರಾಣಿವಲಯದಲ್ಲಿ ಘೇಂಡಾಮೃಗ ಟ್ರಕ್ ಮಧ್ಯೆ ಢಿಕ್ಕಿ, ನೆಟ್ಟಿಗರ ಕೋಪ ನೆತ್ತಿಗೆ

Assam : ಪ್ರಾಣಿವಲಯದಲ್ಲಿ ವೇಗದ ವಾಹನ ಚಾಲನೆಯಿಂದ ವರ್ಷಕ್ಕೆ ನೂರಾರು ವನ್ಯಮೃಗಗಳು ಅಪಘಾತಕ್ಕೆ ಈಡಾಗುತ್ತಿವೆ. ಎಚ್ಚರಿಕೆ ಒಂದೇ ಇದಕ್ಕೆ ಉಪಾಯ ಎಂದಿದ್ದಾರೆ ಐಎಎಸ್ ಅಧಿಕಾರಿ ಪರ್ವೀನ್ ಕಸ್ವಾನ್.

ಅಸ್ಸಾಂನ ಪ್ರಾಣಿವಲಯದಲ್ಲಿ ಘೇಂಡಾಮೃಗ ಟ್ರಕ್ ಮಧ್ಯೆ ಢಿಕ್ಕಿ, ನೆಟ್ಟಿಗರ ಕೋಪ ನೆತ್ತಿಗೆ
ಟ್ರಕ್​ ಮತ್ತು ಘೇಂಡಾಮೃಗದ ಮಧ್ಯೆ ಢಿಕ್ಕಿ
TV9 Web
| Updated By: ಶ್ರೀದೇವಿ ಕಳಸದ|

Updated on:Oct 10, 2022 | 1:05 PM

Share

Viral Video : ಐಎಫ್​ಎಸ್​ ಅಧಿಕಾರಿ ಪ್ರವೀಣ ಕಸ್ವಾನ್​ ಅಕ್ಟೋಬರ್ 9ರಂದು ಹಂಚಿಕೊಂಡ ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅಸ್ಸಾಮ್​ನಲ್ಲಿರುವ ಹಲ್ದಿಬಾರಿ ಪ್ರಾಣಿವಲಯದಲ್ಲಿ ಟ್ರಕ್​ವೊಂದು ಘೇಂಡಾಮೃಗಕ್ಕೆ ಢಿಕ್ಕಿ ಹೊಡೆದುಕೊಂಡು ಹೋಗುತ್ತದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘೇಂಡಾಮೃಗವು ತನ್ನಪಾಡಿಗೆ ತಾನು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಸರಕುಸಾಗಾಣೆ ಟ್ರಕ್​ವೊಂದು ಭಯಂಕರವಾಗಿ ಢಿಕ್ಕಿ ಹೊಡೆದು ಹೋಗಿದೆ.

‘ಪ್ರಾಣಿವಲಯದಲ್ಲಿ ಸಂಚರಿಸುವಾಗ ಕನಿಷ್ಟ ರೀತಿಯ ಎಚ್ಚರಿಕೆ ಇರಬೇಕು. ನನ್ನ ಈ ಕಾಳಜಿ ಕೇವಲ ಈ ವಿಡಿಯೋಗೆ ಸಂಬಂಧಿಸಿದ್ದಲ್ಲ. ವನ್ಯಜೀವಿ ವಲಯಗಳಲ್ಲಿ ಅತಿವೇಗದಲ್ಲಿ ಚಲಿಸುವ ವಾಹನಗಳಿಗೆ ಸಿಕ್ಕು ವರ್ಷಕ್ಕೆ ನೂರಾರು ಪ್ರಾಣಿಗಳು ಅಪಘಾತಕ್ಕೆ ಒಳಗಾಗುತ್ತಿವೆ. ಇಂತಹ ವಲಯಗಳಲ್ಲಿ ಅತಿವೇಗದ ಚಾಲನೆಯನ್ನು ನಿರ್ಬಂಧಿಸಲಾಗಿದೆ ಎನ್ನುವುದನ್ನು ನೆನಪಿನಲ್ಲಿಡಬೇಕು. ಎಚ್ಚರಿಕೆಯಿಂದ ಇದ್ದರೆ ಎಷ್ಟೋ ಅಪಘಾತಗಳನ್ನು ತಪ್ಪಿಸಬಹುದಾಗಿದೆ.’ ಎಂದು ಪರ್ವೀನ್​ ಕಸ್ವಾನ್​ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ವಿಡಿಯೋ ಒಂದು ದಿನದೊಳಗೆ 4 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಪ್ರಾಣಿಪ್ರಿಯರು ಈ ಘೇಂಡಾಮೃಗದ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ ಕೆಲ ನೆಟ್ಟಿಗರು ಡ್ರೈವರ್​ನ ತಪ್ಪಿಲ್ಲ ಎಂದಿದ್ದಾರೆ. ಮತ್ತೂ ಕೆಲವರು, ಘೇಂಡಾಮೃಗವನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡುತ್ತಾರೆಯೇ ಅಧಿಕಾರಿಗಳು? ಎಂದಿದ್ದಾರೆ. ಚಾಲಕನನ್ನು ಪತ್ತೆ ಹಚ್ಚಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ನಾನು ಭಾವಿಸಿದ್ದೇನೆ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಚಾಲಕ ಟ್ರಕ್​ ನಿಲ್ಲಿಸಲು ಅಲ್ಲಿ ಅವಕಾಶವಿರಲಿಲ್ಲ. ಇದೊಂದು ಅಪಘಾತ ಎಂದು ಮಗದೊಬ್ಬರು ಹೇಳಿದ್ದಾರೆ. ಇಲ್ಲಿ ಪ್ರಾಣಿಯದು ತಪ್ಪಿಲ್ಲ, ಚಾಲಕನದೂ. ಪ್ರಾಣಿಗಳ ಸಂಚಾರಕ್ಕೆ ನೆಲಮಹಡಿಯ ವಿಶೇಷ ವ್ಯವಸ್ಥೆ ರೂಪಿಸಬೇಕಾಗಿದೆ ಎಂದು ಅಭಿಪ್ರಾಯಿಸಿದ್ದಾರೆ ಮತ್ತೊಬ್ಬ ನೆಟ್ಟಿಗರು. ವನ್ಯಪ್ರಾಣಿಗಳ ವಲಯದಲ್ಲಿ ಹೆದ್ದಾರಿ ನಿರ್ಮಿಸುವುದು ಸರಿಯಲ್ಲ. ಘೇಂಡಾಮೃಗಕ್ಕೆ ಆದ ಗಾಯದ ಪ್ರಮಾಣವನ್ನು ಐಎಫ್​ಎಸ್​ ಅಧಿಕಾರಿ ಹಂಚಿಕೊಂಡಿಲ್ಲ ಎಂದು ಇನ್ನೊಬ್ಬರು ಹೇಳಿದ್ದಾರೆ. ಹೀಗೆ ವಿವಿಧ ಅಭಿಪ್ರಾಯಗಳಿಂದ ಈ ಪೋಸ್ಟ್​ ಕೂಡಿದೆ.

ಈ ಮಧ್ಯೆ ಕೆಲ ಗಂಟೆಗಳ ಹಿಂದೆ ಈ ಪೋಸ್ಟ್​ ನೋಡಿದ ಅಸ್ಸಾಮಿನ ಮುಖ್ಯಮಂತ್ರಿಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:04 pm, Mon, 10 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ