AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನೀರಿನಲ್ಲಿ ಮುಳುಗುತ್ತಿದ್ದ ಬಾಲಕನ ಪ್ರಾಣ ಕಾಪಾಡಿದ ಪೊಲೀಸ್; ವಿಡಿಯೊ ನೋಡಿ

ತಮ್ಮ ಪ್ರಾಣವನ್ನೂ ಪಣಕ್ಕಿಟ್ಟು ಪೊಲೀಸ್​ ಸಿಬ್ಬಂದಿ ಬಾಲಕನ ಜೀವ ಉಳಿಸಿದ್ದಾರೆ. ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ಜೀವ ರಕ್ಷಿಸಿದ ಪೊಲೀಸ್​ ಅಶೋಕ್​ ಯಾದವ್​ ಅವರಿಗೆ ಶ್ಲಾಘನೆ ವ್ಯಕ್ತವಾಗಿದೆ.

Video: ನೀರಿನಲ್ಲಿ ಮುಳುಗುತ್ತಿದ್ದ ಬಾಲಕನ ಪ್ರಾಣ ಕಾಪಾಡಿದ ಪೊಲೀಸ್; ವಿಡಿಯೊ ನೋಡಿ
ನೀರಿನಲ್ಲಿ ಮುಳುಗುತ್ತಿದ್ದ ಬಾಲಕನ ಪ್ರಾಣ ಕಾಪಾಡಿದ ಪೊಲೀಸ್
TV9 Web
| Edited By: |

Updated on: Oct 25, 2021 | 10:28 AM

Share

ಸಾಮಾಜಿಕ ಜಾಲತಾಣದಲ್ಲಿ ಕೇವಲ ತಮಾಷೆಯ ವಿಡಿಯೊಗಳು ಹೆಚ್ಚು ವೈರಲ್ ಆಗುತ್ತವೆ. ಆದರೆ ವೈರಲ್ ಆಗುವ ಹೃದಯಸ್ಪರ್ಶಿ ವಿಡಿಯೋಗಳು ಹೆಚ್ಚು ಮನ ಗೆಲ್ಲುತ್ತವೆ. ಕರ್ತವ್ಯಕ್ಕೆ ಬದ್ಧರಾಗಿ ಕೆಲಸ ಮಾಡುವ ಪೊಲೀಸರು ಅದೆಷ್ಟೋ ಜನರ ಪ್ರಾಣ ಉಳಿಸಿರುವ ದೃಶ್ಯಗಳನ್ನು ನೀವು ನೋಡಿರಬಹುದು ಅಥವಾ ಕೇಳಿರಬಹುದು. ಇದೀಗ ವೈರಲ್ ಆಗಿರುವ ವಿಡಿಯೊದಲ್ಲಿ ಗಮನಿಸುವಂತೆ ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ಪೊಲೀಸರು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪೊಲೀಸ್ ಅಶೋಕ್ ಯಾದವ್​ ಅವರಿಗೆ ಶ್ಲಾಘನೆ ವ್ಯಕ್ತವಾಗಿದೆ.

ಘಟನೆ ಉತ್ತರ ಪ್ರದೇಶದ ಸಿತಾಪುರದಲ್ಲಿ ನಡೆದಿದೆ ಎಂಬ ಮಾಹಿತಿ ವರದಿಗಳಿಂದ ಲಭ್ಯವಾಗಿದೆ. ವಿಡಿಯೋದಲ್ಲಿ, ಪೊಲೀಸ್ ಸಿಬ್ಬಂದಿ ನದಿಯಿಂದ ಬಾಲಕನನ್ನು ಕರೆತಂದ ದೃಶ್ಯವನ್ನು ನೋಡಬಹುದು. ಆಳವಾದ ನದಿಯಲ್ಲಿ ಬಾಲಕ ಮುಳುಗುತ್ತಿದ್ದ. ಇದನ್ನು ಗಮನಿಸಿದ ಪೊಲೀಸ್ ಅಶೋಕ್ ನದಿಗೆ ಹಾರಿ ಬಾಲಕನ ಪ್ರಾಣ ರಕ್ಷಿಸಿದ್ದಾರೆ. ಇವರಿಗೆ ಸ್ಥಳೀಯರು ಸಹ ಸಹಾಯ ಮಾಡಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದು.

ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ನದಿಯಲ್ಲಿ ಮುಳುಗುತ್ತಿದ್ದ ಮಗುವನ್ನು ಅಶೋಕ್ ರಕ್ಷಿಸಿದ್ದಾರೆ. ನಿಮ್ಮ ಬಗ್ಗೆ ಹೆಮ್ಮೆ ಇದೆ ಅಶೋಕ್ ಭಾಯ್ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೋ ಹಂಚಿಕೊಳ್ಳಲಾಗಿದೆ. ಪೊಲೀಸ್ ಅಶೋಕ್ ಅವರಿಗೆ ನೆಟ್ಟಿಗರು ಧನ್ಯವಾದ ತಿಳಿಸಿದ್ದಾರೆ. ತಮ್ಮ ಪ್ರಾಣವನ್ನೂ ಪಣಕ್ಕಿಟ್ಟು ಬಾಲಕನ ಜೀವ ಉಳಿಸಲು ನದಿಗೆ ಹಾರಿದ ಅಶೋಕ್ ಅವರಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಅತ್ಯುತ್ತಮ ಕೆಲಸ ಎಂದು ಹೊಗಳುವ ಮೂಲಕ ಪೊಲೀಸ್ ಅಶೋಕ್ ಯಾದವ್​ ಅವರಿಗೆ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Video: ಸಾಂಪ್ರದಾಯಿಕ ಉಡುಗೆ ತೊಟ್ಟು ಸ್ಕೇಟಿಂಗ್​ನಲ್ಲೇ ರಾಜಸ್ಥಾನಿ ಜಾನಪದ ನೃತ್ಯ ಮಾಡಿದ ಯುವತಿ; ಇಲ್ಲಿದೆ ವಿಡಿಯೋ

Viral Video: ಮೇಲೇರಲು ಸಹಾಯ ಮಾಡಿದ ಈ ಇರುವೆಗೆ ಕೊನೆಗೆ ಏನು ಉಳಿಯಿತು?; ಬದುಕಿನ ಪಾಠ ಹೇಳುವ ಈ ವಿಡಿಯೋ ನೋಡಿ

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ