AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನೀರಿನಲ್ಲಿ ಮುಳುಗುತ್ತಿದ್ದ ಬಾಲಕನ ಪ್ರಾಣ ಕಾಪಾಡಿದ ಪೊಲೀಸ್; ವಿಡಿಯೊ ನೋಡಿ

ತಮ್ಮ ಪ್ರಾಣವನ್ನೂ ಪಣಕ್ಕಿಟ್ಟು ಪೊಲೀಸ್​ ಸಿಬ್ಬಂದಿ ಬಾಲಕನ ಜೀವ ಉಳಿಸಿದ್ದಾರೆ. ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ಜೀವ ರಕ್ಷಿಸಿದ ಪೊಲೀಸ್​ ಅಶೋಕ್​ ಯಾದವ್​ ಅವರಿಗೆ ಶ್ಲಾಘನೆ ವ್ಯಕ್ತವಾಗಿದೆ.

Video: ನೀರಿನಲ್ಲಿ ಮುಳುಗುತ್ತಿದ್ದ ಬಾಲಕನ ಪ್ರಾಣ ಕಾಪಾಡಿದ ಪೊಲೀಸ್; ವಿಡಿಯೊ ನೋಡಿ
ನೀರಿನಲ್ಲಿ ಮುಳುಗುತ್ತಿದ್ದ ಬಾಲಕನ ಪ್ರಾಣ ಕಾಪಾಡಿದ ಪೊಲೀಸ್
TV9 Web
| Edited By: |

Updated on: Oct 25, 2021 | 10:28 AM

Share

ಸಾಮಾಜಿಕ ಜಾಲತಾಣದಲ್ಲಿ ಕೇವಲ ತಮಾಷೆಯ ವಿಡಿಯೊಗಳು ಹೆಚ್ಚು ವೈರಲ್ ಆಗುತ್ತವೆ. ಆದರೆ ವೈರಲ್ ಆಗುವ ಹೃದಯಸ್ಪರ್ಶಿ ವಿಡಿಯೋಗಳು ಹೆಚ್ಚು ಮನ ಗೆಲ್ಲುತ್ತವೆ. ಕರ್ತವ್ಯಕ್ಕೆ ಬದ್ಧರಾಗಿ ಕೆಲಸ ಮಾಡುವ ಪೊಲೀಸರು ಅದೆಷ್ಟೋ ಜನರ ಪ್ರಾಣ ಉಳಿಸಿರುವ ದೃಶ್ಯಗಳನ್ನು ನೀವು ನೋಡಿರಬಹುದು ಅಥವಾ ಕೇಳಿರಬಹುದು. ಇದೀಗ ವೈರಲ್ ಆಗಿರುವ ವಿಡಿಯೊದಲ್ಲಿ ಗಮನಿಸುವಂತೆ ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ಪೊಲೀಸರು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪೊಲೀಸ್ ಅಶೋಕ್ ಯಾದವ್​ ಅವರಿಗೆ ಶ್ಲಾಘನೆ ವ್ಯಕ್ತವಾಗಿದೆ.

ಘಟನೆ ಉತ್ತರ ಪ್ರದೇಶದ ಸಿತಾಪುರದಲ್ಲಿ ನಡೆದಿದೆ ಎಂಬ ಮಾಹಿತಿ ವರದಿಗಳಿಂದ ಲಭ್ಯವಾಗಿದೆ. ವಿಡಿಯೋದಲ್ಲಿ, ಪೊಲೀಸ್ ಸಿಬ್ಬಂದಿ ನದಿಯಿಂದ ಬಾಲಕನನ್ನು ಕರೆತಂದ ದೃಶ್ಯವನ್ನು ನೋಡಬಹುದು. ಆಳವಾದ ನದಿಯಲ್ಲಿ ಬಾಲಕ ಮುಳುಗುತ್ತಿದ್ದ. ಇದನ್ನು ಗಮನಿಸಿದ ಪೊಲೀಸ್ ಅಶೋಕ್ ನದಿಗೆ ಹಾರಿ ಬಾಲಕನ ಪ್ರಾಣ ರಕ್ಷಿಸಿದ್ದಾರೆ. ಇವರಿಗೆ ಸ್ಥಳೀಯರು ಸಹ ಸಹಾಯ ಮಾಡಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದು.

ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ನದಿಯಲ್ಲಿ ಮುಳುಗುತ್ತಿದ್ದ ಮಗುವನ್ನು ಅಶೋಕ್ ರಕ್ಷಿಸಿದ್ದಾರೆ. ನಿಮ್ಮ ಬಗ್ಗೆ ಹೆಮ್ಮೆ ಇದೆ ಅಶೋಕ್ ಭಾಯ್ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೋ ಹಂಚಿಕೊಳ್ಳಲಾಗಿದೆ. ಪೊಲೀಸ್ ಅಶೋಕ್ ಅವರಿಗೆ ನೆಟ್ಟಿಗರು ಧನ್ಯವಾದ ತಿಳಿಸಿದ್ದಾರೆ. ತಮ್ಮ ಪ್ರಾಣವನ್ನೂ ಪಣಕ್ಕಿಟ್ಟು ಬಾಲಕನ ಜೀವ ಉಳಿಸಲು ನದಿಗೆ ಹಾರಿದ ಅಶೋಕ್ ಅವರಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಅತ್ಯುತ್ತಮ ಕೆಲಸ ಎಂದು ಹೊಗಳುವ ಮೂಲಕ ಪೊಲೀಸ್ ಅಶೋಕ್ ಯಾದವ್​ ಅವರಿಗೆ ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Video: ಸಾಂಪ್ರದಾಯಿಕ ಉಡುಗೆ ತೊಟ್ಟು ಸ್ಕೇಟಿಂಗ್​ನಲ್ಲೇ ರಾಜಸ್ಥಾನಿ ಜಾನಪದ ನೃತ್ಯ ಮಾಡಿದ ಯುವತಿ; ಇಲ್ಲಿದೆ ವಿಡಿಯೋ

Viral Video: ಮೇಲೇರಲು ಸಹಾಯ ಮಾಡಿದ ಈ ಇರುವೆಗೆ ಕೊನೆಗೆ ಏನು ಉಳಿಯಿತು?; ಬದುಕಿನ ಪಾಠ ಹೇಳುವ ಈ ವಿಡಿಯೋ ನೋಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​