AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ

ಇತ್ತೀಚಿಗಂತೂ ರೀಲ್ಸ್‌ ಹುಚ್ಚು ಮಿತಿಮೀರಿಬಿಟ್ಟಿದೆ. ಲೈಕ್ಸ್‌, ಫಾಲೋವರ್ಸ್‌ ವೀವ್ಸ್‌ಗಾಗಿ ಜನ ಚಿತ್ರ ವಿಚಿತ್ರ ಸಾಹಸಗಳಿಗೆ ಕೈ ಹಾಕುತ್ತಿದ್ದಾರೆ. ಅದೇ ರೀತಿ ಇಲ್ಲೊಬ್ಬಳು ಮಹಿಳೆ ಕೂಡಾ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದು, ತೆರೆದ ಬಾವಿಯ ಅಂಚಲ್ಲಿ ಮಗುವನ್ನು ಕೈಯಲ್ಲಿ ಹಿಡಿದು ಡೇಂಜರಸ್‌ ರೀಲ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಮಗುವನ್ನು ಅಪಾಯಕ್ಕೆ ತಳ್ಳಿದ ಆ ಮಹಿಳೆಯ ಮೇಲೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

Viral: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ
ಮಾಲಾಶ್ರೀ ಅಂಚನ್​
| Edited By: |

Updated on: Sep 22, 2024 | 11:32 AM

Share

ರೀಲ್ಸ್‌ ರೀಲ್ಸ್‌ ರೀಲ್ಸ್‌… ಈಗಂತೂ ಎಲ್ಲಿ ನೋಡಿದ್ರೂ ರೀಲ್ಸ್‌ ವಿಡಿಯೋಗಳದ್ದೇ ಹವಾ. ಅದರಲ್ಲೂ ಕೆಲ ರೀಲ್ಸ್‌ ಹುಚ್ಚರು ಚಿತ್ರ ವಿಚಿತ್ರ ರೀಲ್ಸ್‌ ವಿಡಿಯೋ ಮಾಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಹೀಗೆ ಸಾರ್ವಜನಿಕರಿಗೆ ತೊಂದರೆ ಕೊಟ್ಟು ವಿಡಿಯೋ ಮಾಡುವ, ಪ್ರಾಣಕ್ಕೆ ಅಪಾಯ ತಂದೊಡ್ಡುವ ರೀಲ್ಸ್‌ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದವರು ಹಲವರಿದ್ದಾರೆ. ಇಲ್ಲೊಬ್ಬಳು ಮಹಿಳೆ ಕೂಡಾ ಲೈಕ್ಸ್‌ ವೀವ್ಸ್‌ಗಾಗಿ ತೆರೆದ ಬಾವಿಯ ಅಂಚಲ್ಲಿ ಮಗುವನ್ನು ಕೈಯಲ್ಲಿ ಹಿಡಿದು ಡೇಂಜರಸ್‌ ರೀಲ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಮಗುವನ್ನು ಅಪಾಯಕ್ಕೆ ತಳ್ಳಿದ ಆ ಮಹಿಳೆಯ ಮೇಲೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

RawAndRealMan ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ತೆರೆದ ಬಾವಿಯ ಅಂಚಲ್ಲಿ ಕುಳಿತ ಮಹಿಳೆಯೊಬ್ಬಳು ಪುಟಾಣಿ ಮಗುವನ್ನು ಬರೀ ಒಂದು ಕೈಯಲ್ಲಿ ಹಿಡಿದುಕೊಂಡು ಡೇಂಜರಸ್‌ ರೀಲ್ಸ್‌ ಮಾಡಿ ಹುಚ್ಚಾಟ ಮೆರೆಯುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಬೀದಿ ಬೀದಿ ಚಿಂದಿ ಆಯುತ್ತಾ ತಿಂಗಳಿಗೆ 1.5 ಲಕ್ಷ ರೂ. ಸಂಪಾದಿಸುತ್ತಾನೆ ಈ ವ್ಯಕ್ತಿ

ಸೆಪ್ಟೆಂಬರ್‌ 18 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 71 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆದಷ್ಟು ಬೇಗ ಈ ಮಹಿಳೆಯ ವಿರುದ್ಧ ಕ್ರಮ ಕೈಗೊಳ್ಳಬೇಕುʼ ಎಂದು ಕಿಡಿ ಕಾರಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈಕೆಗೆ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಅಗತ್ಯವಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೆಕರು ಇದೆಲ್ಲಾ ಎಂಥಾ ಹುಚ್ಚಾಟ ಎಂದು ಗರಂ ಆಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?