AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ

ಇತ್ತೀಚಿಗಂತೂ ರೀಲ್ಸ್‌ ಹುಚ್ಚು ಮಿತಿಮೀರಿಬಿಟ್ಟಿದೆ. ಲೈಕ್ಸ್‌, ಫಾಲೋವರ್ಸ್‌ ವೀವ್ಸ್‌ಗಾಗಿ ಜನ ಚಿತ್ರ ವಿಚಿತ್ರ ಸಾಹಸಗಳಿಗೆ ಕೈ ಹಾಕುತ್ತಿದ್ದಾರೆ. ಅದೇ ರೀತಿ ಇಲ್ಲೊಬ್ಬಳು ಮಹಿಳೆ ಕೂಡಾ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದು, ತೆರೆದ ಬಾವಿಯ ಅಂಚಲ್ಲಿ ಮಗುವನ್ನು ಕೈಯಲ್ಲಿ ಹಿಡಿದು ಡೇಂಜರಸ್‌ ರೀಲ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಮಗುವನ್ನು ಅಪಾಯಕ್ಕೆ ತಳ್ಳಿದ ಆ ಮಹಿಳೆಯ ಮೇಲೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

Viral: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ
ಮಾಲಾಶ್ರೀ ಅಂಚನ್​
| Edited By: |

Updated on: Sep 22, 2024 | 11:32 AM

Share

ರೀಲ್ಸ್‌ ರೀಲ್ಸ್‌ ರೀಲ್ಸ್‌… ಈಗಂತೂ ಎಲ್ಲಿ ನೋಡಿದ್ರೂ ರೀಲ್ಸ್‌ ವಿಡಿಯೋಗಳದ್ದೇ ಹವಾ. ಅದರಲ್ಲೂ ಕೆಲ ರೀಲ್ಸ್‌ ಹುಚ್ಚರು ಚಿತ್ರ ವಿಚಿತ್ರ ರೀಲ್ಸ್‌ ವಿಡಿಯೋ ಮಾಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಹೀಗೆ ಸಾರ್ವಜನಿಕರಿಗೆ ತೊಂದರೆ ಕೊಟ್ಟು ವಿಡಿಯೋ ಮಾಡುವ, ಪ್ರಾಣಕ್ಕೆ ಅಪಾಯ ತಂದೊಡ್ಡುವ ರೀಲ್ಸ್‌ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದವರು ಹಲವರಿದ್ದಾರೆ. ಇಲ್ಲೊಬ್ಬಳು ಮಹಿಳೆ ಕೂಡಾ ಲೈಕ್ಸ್‌ ವೀವ್ಸ್‌ಗಾಗಿ ತೆರೆದ ಬಾವಿಯ ಅಂಚಲ್ಲಿ ಮಗುವನ್ನು ಕೈಯಲ್ಲಿ ಹಿಡಿದು ಡೇಂಜರಸ್‌ ರೀಲ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಮಗುವನ್ನು ಅಪಾಯಕ್ಕೆ ತಳ್ಳಿದ ಆ ಮಹಿಳೆಯ ಮೇಲೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

RawAndRealMan ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ತೆರೆದ ಬಾವಿಯ ಅಂಚಲ್ಲಿ ಕುಳಿತ ಮಹಿಳೆಯೊಬ್ಬಳು ಪುಟಾಣಿ ಮಗುವನ್ನು ಬರೀ ಒಂದು ಕೈಯಲ್ಲಿ ಹಿಡಿದುಕೊಂಡು ಡೇಂಜರಸ್‌ ರೀಲ್ಸ್‌ ಮಾಡಿ ಹುಚ್ಚಾಟ ಮೆರೆಯುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಬೀದಿ ಬೀದಿ ಚಿಂದಿ ಆಯುತ್ತಾ ತಿಂಗಳಿಗೆ 1.5 ಲಕ್ಷ ರೂ. ಸಂಪಾದಿಸುತ್ತಾನೆ ಈ ವ್ಯಕ್ತಿ

ಸೆಪ್ಟೆಂಬರ್‌ 18 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 71 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆದಷ್ಟು ಬೇಗ ಈ ಮಹಿಳೆಯ ವಿರುದ್ಧ ಕ್ರಮ ಕೈಗೊಳ್ಳಬೇಕುʼ ಎಂದು ಕಿಡಿ ಕಾರಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈಕೆಗೆ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಅಗತ್ಯವಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೆಕರು ಇದೆಲ್ಲಾ ಎಂಥಾ ಹುಚ್ಚಾಟ ಎಂದು ಗರಂ ಆಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್