Viral: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ

ಇತ್ತೀಚಿಗಂತೂ ರೀಲ್ಸ್‌ ಹುಚ್ಚು ಮಿತಿಮೀರಿಬಿಟ್ಟಿದೆ. ಲೈಕ್ಸ್‌, ಫಾಲೋವರ್ಸ್‌ ವೀವ್ಸ್‌ಗಾಗಿ ಜನ ಚಿತ್ರ ವಿಚಿತ್ರ ಸಾಹಸಗಳಿಗೆ ಕೈ ಹಾಕುತ್ತಿದ್ದಾರೆ. ಅದೇ ರೀತಿ ಇಲ್ಲೊಬ್ಬಳು ಮಹಿಳೆ ಕೂಡಾ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದು, ತೆರೆದ ಬಾವಿಯ ಅಂಚಲ್ಲಿ ಮಗುವನ್ನು ಕೈಯಲ್ಲಿ ಹಿಡಿದು ಡೇಂಜರಸ್‌ ರೀಲ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಮಗುವನ್ನು ಅಪಾಯಕ್ಕೆ ತಳ್ಳಿದ ಆ ಮಹಿಳೆಯ ಮೇಲೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

Viral: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ
Follow us
| Updated By: ಅಕ್ಷತಾ ವರ್ಕಾಡಿ

Updated on: Sep 22, 2024 | 11:32 AM

ರೀಲ್ಸ್‌ ರೀಲ್ಸ್‌ ರೀಲ್ಸ್‌… ಈಗಂತೂ ಎಲ್ಲಿ ನೋಡಿದ್ರೂ ರೀಲ್ಸ್‌ ವಿಡಿಯೋಗಳದ್ದೇ ಹವಾ. ಅದರಲ್ಲೂ ಕೆಲ ರೀಲ್ಸ್‌ ಹುಚ್ಚರು ಚಿತ್ರ ವಿಚಿತ್ರ ರೀಲ್ಸ್‌ ವಿಡಿಯೋ ಮಾಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಹೀಗೆ ಸಾರ್ವಜನಿಕರಿಗೆ ತೊಂದರೆ ಕೊಟ್ಟು ವಿಡಿಯೋ ಮಾಡುವ, ಪ್ರಾಣಕ್ಕೆ ಅಪಾಯ ತಂದೊಡ್ಡುವ ರೀಲ್ಸ್‌ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದವರು ಹಲವರಿದ್ದಾರೆ. ಇಲ್ಲೊಬ್ಬಳು ಮಹಿಳೆ ಕೂಡಾ ಲೈಕ್ಸ್‌ ವೀವ್ಸ್‌ಗಾಗಿ ತೆರೆದ ಬಾವಿಯ ಅಂಚಲ್ಲಿ ಮಗುವನ್ನು ಕೈಯಲ್ಲಿ ಹಿಡಿದು ಡೇಂಜರಸ್‌ ರೀಲ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಮಗುವನ್ನು ಅಪಾಯಕ್ಕೆ ತಳ್ಳಿದ ಆ ಮಹಿಳೆಯ ಮೇಲೆ ನೆಟ್ಟಿಗರು ಫುಲ್‌ ಗರಂ ಆಗಿದ್ದಾರೆ.

RawAndRealMan ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ತೆರೆದ ಬಾವಿಯ ಅಂಚಲ್ಲಿ ಕುಳಿತ ಮಹಿಳೆಯೊಬ್ಬಳು ಪುಟಾಣಿ ಮಗುವನ್ನು ಬರೀ ಒಂದು ಕೈಯಲ್ಲಿ ಹಿಡಿದುಕೊಂಡು ಡೇಂಜರಸ್‌ ರೀಲ್ಸ್‌ ಮಾಡಿ ಹುಚ್ಚಾಟ ಮೆರೆಯುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಬೀದಿ ಬೀದಿ ಚಿಂದಿ ಆಯುತ್ತಾ ತಿಂಗಳಿಗೆ 1.5 ಲಕ್ಷ ರೂ. ಸಂಪಾದಿಸುತ್ತಾನೆ ಈ ವ್ಯಕ್ತಿ

ಸೆಪ್ಟೆಂಬರ್‌ 18 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 71 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆದಷ್ಟು ಬೇಗ ಈ ಮಹಿಳೆಯ ವಿರುದ್ಧ ಕ್ರಮ ಕೈಗೊಳ್ಳಬೇಕುʼ ಎಂದು ಕಿಡಿ ಕಾರಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈಕೆಗೆ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಅಗತ್ಯವಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೆಕರು ಇದೆಲ್ಲಾ ಎಂಥಾ ಹುಚ್ಚಾಟ ಎಂದು ಗರಂ ಆಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ