AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಹಿಳೆಯನ್ನು ಹತ್ಯೆಗೈದು ಮೃತದೇಹ ಗಂಗಾ ನದಿಗೆ ಎಸೆದ ದುಷ್ಕರ್ಮಿಗಳು; ವಿಡಿಯೋ ಇಲ್ಲಿದೆ ನೋಡಿ

ದೋಣಿಯ ಮುಂಭಾಗದಲ್ಲಿ ಇರಿಸಲಾದ ಶವದ ಪಕ್ಕದಲ್ಲಿ ವ್ಯಕ್ತಿಯೊಬ್ಬರು ನಿಂತು ಅದು ಸರಿಯಾಗಿ ಬಿಗಿಯಾಗಿದೆಯೇ ಎಂದು ಪರೀಕ್ಷಿಸುತ್ತಿರುವುದನ್ನು ಕಾಣಬಹುದು. ಬಳಿಕ ಮೂವರು ಪುರುಷರು ಸೇರಿ ಮಹಿಳೆಯ ದೇಹವನ್ನು ನೀರಿಗೆ ತಳ್ಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Viral Video: ಮಹಿಳೆಯನ್ನು ಹತ್ಯೆಗೈದು ಮೃತದೇಹ ಗಂಗಾ ನದಿಗೆ ಎಸೆದ ದುಷ್ಕರ್ಮಿಗಳು; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: Jul 31, 2024 | 10:58 AM

Share

ಉತ್ತರಪ್ರದೇಶ: ನಾಲ್ವರು ಪುರುಷರು ಮಹಿಳೆಯ ಶವವೊಂದನ್ನು ದೋಣಿಯಲ್ಲಿ ಸಾಗಿಸಿ ಗಂಗಾ ನದಿಗೆ ಎಸೆದಿರುವ ಘಟನೆ ಉತ್ತರ ಪ್ರದೇಶದ ಹಾಪುರ್‌ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ವೈರಲ್​ ಆದ ಬೆನ್ನಲ್ಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವೀಡಿಯೊದಲ್ಲಿ, ದೋಣಿಯ ಮುಂಭಾಗದಲ್ಲಿ ಇರಿಸಲಾದ ಶವದ ಪಕ್ಕದಲ್ಲಿ ವ್ಯಕ್ತಿಯೊಬ್ಬರು ನಿಂತು ಅದು ಸರಿಯಾಗಿ ಬಿಗಿಯಾಗಿದೆಯೇ ಎಂದು ಪರೀಕ್ಷಿಸುತ್ತಿರುವುದನ್ನು ಕಾಣಬಹುದು. ಬಳಿಕ ಮೂವರು ಪುರುಷರು ಮಹಿಳೆಯ ದೇಹವನ್ನು ನೀರಿಗೆ ತಳ್ಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

@SachinGuptaUP ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಜುಲೈ 30 ರಂದು ಹಂಚಿಕೊಳ್ಳಲಾಗಿರುವ ಈ ವಿಡಿಯೋ ಒಂದೇ ದಿನದಲ್ಲಿ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವಿಡಿಯೋ ಇಲ್ಲಿದೆ ನೋಡಿ:

ವರದಿಗಳ ಪ್ರಕಾರ, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಕಾಣಿಸಿಕೊಂಡ ಕೂಡಲೇ, ಹಾಪುರ್ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ವೀಡಿಯೊದಲ್ಲಿ ಕಂಡುಬರುವ ಜನರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮಕ್ಕಳ ಮುಂದೆಯೇ ಅಮ್ಮನಿಗೆ ಅವಮಾನ, ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದ ಗ್ರಾಮಸ್ಥರು

ಇಡೀ ಘಟನೆಯು ಮರ್ಯಾದಾ ಹತ್ಯೆಯ ವಿಷಯವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ. ಕೊಲೆಯನ್ನು ಬೇರೆ ಸ್ಥಳದಲ್ಲಿ ಮಾಡಿ ನಂತರ ಮೃತದೇಹವನ್ನು ದೋಣಿಯಲ್ಲಿ ಸಾಗಿಸಿ ಗಂಗಾ ನದಿಗೆ ಎಸೆಯಲಾಗಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?