AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾರ್ಸೆಲ್​​ ನೀಡಲು ಬಂದು ಮನೆಯ ಹೊರಗಿದ್ದ ಬೆಲೆ ಬಾಳುವ ಶೂ ಕದ್ದ ಸ್ವಿಗ್ಗಿ ಡೆಲಿವರಿ ಬಾಯ್​​

ಗುರುಗ್ರಾಮ್​​​ದಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್​​ ಪಾರ್ಸೆಲ್​​ ನೀಡಲು ಬಂದು ಮನೆಯ ಹೊರಗಿದ್ದ ಒಂದು ಜತೆ ಶೂವನ್ನು ಎಗರಿಸಿದ್ದಾನೆ. ಇದೀಗ ಈ ಕೃತ್ಯದ ಬಗ್ಗೆ ಒಂದು ವಿಡಿಯೋ ವೈರಲ್​​ ಆಗಿದೆ. ಏಪ್ರಿಲ್​​​ 9ರಂದು ಈ ವಿಡಿಯೋವನ್ನು ಎಕ್ಸ್​​ನಲ್ಲಿ ರೋಹಿತ್​​​ ಅರೋರಾ ಎಂಬುವವರು ಹಂಚಿಕೊಂಡಿದ್ದಾರೆ. ನನ್ನ ಸ್ನೇಹಿತನ ಮನೆಯ ಹೊರಗೆ ಇದ್ದ ಕಪ್ಪು ಬಣ್ಣದ ನೈಕ್​​​ ಶೂವನ್ನು ಸ್ವಿಗ್ಗಿ ಇನ್​​ಸ್ಟಾಮಾರ್ಟ್​​ ಡೆಲಿವರಿ ಎಕ್ಸಿಕ್ಯೂಟಿವ್​​​ ಕದ್ದಿದ್ದಾನೆ ಎಂದು ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

Follow us
ಅಕ್ಷಯ್​ ಪಲ್ಲಮಜಲು​​
|

Updated on: Apr 12, 2024 | 11:21 AM

ಆಹಾರ, ದಿನಸಿ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಡೆಲಿವರಿ ಬಾಯ್​​​ಗಳ ಬಗ್ಗೆ ಇರಬೇಕು ಈ ಎಚ್ಚರಿಕೆ. ಎಲ್ಲರೂ ಹೀಗೆ ಮಾಡುತ್ತಾರೆ ಎಂದಲ್ಲ, ಆದರೆ ಕೆಲವೊಂದು ಬಾರಿ ಆಸೆಯೂ ಅತೀರೇಕವಾದಾಗ ಈ ರೀತಿಯಲ್ಲಿ ವರ್ತಿಸುತ್ತಾರೆ. ಗುರುಗ್ರಾಮ್​​​ದಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್​​ ಪಾರ್ಸೆಲ್​​ ನೀಡಲು ಬಂದು ಮನೆಯ ಹೊರಗಿದ್ದ ಒಂದು ಜತೆ ಶೂವನ್ನು ಎಗರಿಸಿದ್ದಾನೆ. ಇದೀಗ ಈ ಕೃತ್ಯದ ಬಗ್ಗೆ ಒಂದು ವಿಡಿಯೋ ವೈರಲ್​​ ಆಗಿದೆ. ಏಪ್ರಿಲ್​​​ 9ರಂದು ಈ ವಿಡಿಯೋವನ್ನು ಎಕ್ಸ್​​ನಲ್ಲಿ ರೋಹಿತ್​​​ ಅರೋರಾ ಎಂಬುವವರು ಹಂಚಿಕೊಂಡಿದ್ದಾರೆ. ನನ್ನ ಸ್ನೇಹಿತನ ಮನೆಯ ಹೊರಗೆ ಇದ್ದ ಕಪ್ಪು ಬಣ್ಣದ ನೈಕ್​​​ ಶೂವನ್ನು ಸ್ವಿಗ್ಗಿ ಇನ್​​ಸ್ಟಾಮಾರ್ಟ್​​ ಡೆಲಿವರಿ ಎಕ್ಸಿಕ್ಯೂಟಿವ್​​​ ಕದ್ದಿದ್ದಾನೆ ಎಂದು ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಸ್ವಿಗ್ಗಿ ಡೆಲಿವರಿ ಬಾಯ್​​​​ ಶೂ ಕದ್ದಿತ್ತಿರುವುದು ಮನೆ ಮುಂದೆ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಒಬ್ಬ ಡೆಲಿವರಿ ಬಾಯ್ ಮನೆಯ ಮುಂದೆ ಬಂದು ಬೆಲ್​​ ಮಾಡುತ್ತಾನೆ. ಯಾರೂ ಕೂಡ ಇದಕ್ಕೆ ಪ್ರತಿಕ್ರಿಯಿಸುವುದಿಲ್ಲ. ಸ್ವಲ್ಪ ಸಮಯದ ನಂತರ ಒಬ್ಬ ಮಹಿಳೆ ಬಂದು ಬಾಗಿಲು ತೆರೆದಾಗ, ಪಾರ್ಸೆಲ್​​​ ಆ ಮಹಿಳೆಯ ಕೈಗೆ ನೀಡುತ್ತಾನೆ. ಮಹಿಳೆ ಬಾಗಿಲು ಮುಚ್ಚುವ ವರೆಗೆ ಅಲ್ಲಿ ನಿಂತು ನಂತರ ಕಪ್ಪು ಬಣ್ಣದ ನೈಕ್​​​ ಶೂವನ್ನು ಅಲ್ಲಿಂದ ಎಗರಿಸಿದ್ದಾನೆ.

ಇದನ್ನೂ ಓದಿ: ಆನ್​ಲೈನ್​ನಲ್ಲಿ ಕೇವಲ 50 ಸಾವಿರ ರೂ.ಗೆ ದೇಶ ಖರೀದಿಸಿದ ವ್ಯಕ್ತಿ, ಇರೋದು ಒಬ್ಬರೇ, ಪಾಸ್​ಪೋರ್ಟ್​ ಇಲ್ಲದೆ ಪ್ರವೇಶವಿಲ್ಲ

ಹಂಚಿಕೊಂಡಿರುವ ವಿಡಿಯೋವನ್ನು ಇಲ್ಲಿಯವರೆಗೆ 3.8 ಲಕ್ಷ ಜನ ವೀಕ್ಷಣೆ ಮಾಡಿದ್ದಾರೆ. ಈ ವಿಡಿಯೋ ನೋಡಿ ಅನೇಕರು ಕಳವಳ ವ್ಯಕ್ತಪಡಿಸಿದ್ದು, ಇನ್ನು ಕೆಲವರು ಹ್ಯಾಸವಾಗಿ ಕಮೆಂಟ್​​ ಮಾಡಿದ್ದಾರೆ. ಇನ್ನು ಈ ಘಟನೆಯ ಬಗ್ಗೆ ಸ್ವಿಗ್ಗಿ ವರದಿ ಮಾಡಲಾಗಿದೆ. ಆದರೆ ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ರೋಹಿತ್​​​ ಅರೋರಾ ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು