AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾರ್ಸೆಲ್​​ ನೀಡಲು ಬಂದು ಮನೆಯ ಹೊರಗಿದ್ದ ಬೆಲೆ ಬಾಳುವ ಶೂ ಕದ್ದ ಸ್ವಿಗ್ಗಿ ಡೆಲಿವರಿ ಬಾಯ್​​

ಗುರುಗ್ರಾಮ್​​​ದಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್​​ ಪಾರ್ಸೆಲ್​​ ನೀಡಲು ಬಂದು ಮನೆಯ ಹೊರಗಿದ್ದ ಒಂದು ಜತೆ ಶೂವನ್ನು ಎಗರಿಸಿದ್ದಾನೆ. ಇದೀಗ ಈ ಕೃತ್ಯದ ಬಗ್ಗೆ ಒಂದು ವಿಡಿಯೋ ವೈರಲ್​​ ಆಗಿದೆ. ಏಪ್ರಿಲ್​​​ 9ರಂದು ಈ ವಿಡಿಯೋವನ್ನು ಎಕ್ಸ್​​ನಲ್ಲಿ ರೋಹಿತ್​​​ ಅರೋರಾ ಎಂಬುವವರು ಹಂಚಿಕೊಂಡಿದ್ದಾರೆ. ನನ್ನ ಸ್ನೇಹಿತನ ಮನೆಯ ಹೊರಗೆ ಇದ್ದ ಕಪ್ಪು ಬಣ್ಣದ ನೈಕ್​​​ ಶೂವನ್ನು ಸ್ವಿಗ್ಗಿ ಇನ್​​ಸ್ಟಾಮಾರ್ಟ್​​ ಡೆಲಿವರಿ ಎಕ್ಸಿಕ್ಯೂಟಿವ್​​​ ಕದ್ದಿದ್ದಾನೆ ಎಂದು ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on: Apr 12, 2024 | 11:21 AM

Share

ಆಹಾರ, ದಿನಸಿ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಡೆಲಿವರಿ ಬಾಯ್​​​ಗಳ ಬಗ್ಗೆ ಇರಬೇಕು ಈ ಎಚ್ಚರಿಕೆ. ಎಲ್ಲರೂ ಹೀಗೆ ಮಾಡುತ್ತಾರೆ ಎಂದಲ್ಲ, ಆದರೆ ಕೆಲವೊಂದು ಬಾರಿ ಆಸೆಯೂ ಅತೀರೇಕವಾದಾಗ ಈ ರೀತಿಯಲ್ಲಿ ವರ್ತಿಸುತ್ತಾರೆ. ಗುರುಗ್ರಾಮ್​​​ದಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್​​ ಪಾರ್ಸೆಲ್​​ ನೀಡಲು ಬಂದು ಮನೆಯ ಹೊರಗಿದ್ದ ಒಂದು ಜತೆ ಶೂವನ್ನು ಎಗರಿಸಿದ್ದಾನೆ. ಇದೀಗ ಈ ಕೃತ್ಯದ ಬಗ್ಗೆ ಒಂದು ವಿಡಿಯೋ ವೈರಲ್​​ ಆಗಿದೆ. ಏಪ್ರಿಲ್​​​ 9ರಂದು ಈ ವಿಡಿಯೋವನ್ನು ಎಕ್ಸ್​​ನಲ್ಲಿ ರೋಹಿತ್​​​ ಅರೋರಾ ಎಂಬುವವರು ಹಂಚಿಕೊಂಡಿದ್ದಾರೆ. ನನ್ನ ಸ್ನೇಹಿತನ ಮನೆಯ ಹೊರಗೆ ಇದ್ದ ಕಪ್ಪು ಬಣ್ಣದ ನೈಕ್​​​ ಶೂವನ್ನು ಸ್ವಿಗ್ಗಿ ಇನ್​​ಸ್ಟಾಮಾರ್ಟ್​​ ಡೆಲಿವರಿ ಎಕ್ಸಿಕ್ಯೂಟಿವ್​​​ ಕದ್ದಿದ್ದಾನೆ ಎಂದು ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಸ್ವಿಗ್ಗಿ ಡೆಲಿವರಿ ಬಾಯ್​​​​ ಶೂ ಕದ್ದಿತ್ತಿರುವುದು ಮನೆ ಮುಂದೆ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಒಬ್ಬ ಡೆಲಿವರಿ ಬಾಯ್ ಮನೆಯ ಮುಂದೆ ಬಂದು ಬೆಲ್​​ ಮಾಡುತ್ತಾನೆ. ಯಾರೂ ಕೂಡ ಇದಕ್ಕೆ ಪ್ರತಿಕ್ರಿಯಿಸುವುದಿಲ್ಲ. ಸ್ವಲ್ಪ ಸಮಯದ ನಂತರ ಒಬ್ಬ ಮಹಿಳೆ ಬಂದು ಬಾಗಿಲು ತೆರೆದಾಗ, ಪಾರ್ಸೆಲ್​​​ ಆ ಮಹಿಳೆಯ ಕೈಗೆ ನೀಡುತ್ತಾನೆ. ಮಹಿಳೆ ಬಾಗಿಲು ಮುಚ್ಚುವ ವರೆಗೆ ಅಲ್ಲಿ ನಿಂತು ನಂತರ ಕಪ್ಪು ಬಣ್ಣದ ನೈಕ್​​​ ಶೂವನ್ನು ಅಲ್ಲಿಂದ ಎಗರಿಸಿದ್ದಾನೆ.

ಇದನ್ನೂ ಓದಿ: ಆನ್​ಲೈನ್​ನಲ್ಲಿ ಕೇವಲ 50 ಸಾವಿರ ರೂ.ಗೆ ದೇಶ ಖರೀದಿಸಿದ ವ್ಯಕ್ತಿ, ಇರೋದು ಒಬ್ಬರೇ, ಪಾಸ್​ಪೋರ್ಟ್​ ಇಲ್ಲದೆ ಪ್ರವೇಶವಿಲ್ಲ

ಹಂಚಿಕೊಂಡಿರುವ ವಿಡಿಯೋವನ್ನು ಇಲ್ಲಿಯವರೆಗೆ 3.8 ಲಕ್ಷ ಜನ ವೀಕ್ಷಣೆ ಮಾಡಿದ್ದಾರೆ. ಈ ವಿಡಿಯೋ ನೋಡಿ ಅನೇಕರು ಕಳವಳ ವ್ಯಕ್ತಪಡಿಸಿದ್ದು, ಇನ್ನು ಕೆಲವರು ಹ್ಯಾಸವಾಗಿ ಕಮೆಂಟ್​​ ಮಾಡಿದ್ದಾರೆ. ಇನ್ನು ಈ ಘಟನೆಯ ಬಗ್ಗೆ ಸ್ವಿಗ್ಗಿ ವರದಿ ಮಾಡಲಾಗಿದೆ. ಆದರೆ ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ರೋಹಿತ್​​​ ಅರೋರಾ ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ