AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರ್ ಬಾನೆಟ್‌ನೊಳಗೆ 7 ಅಡಿ ಉದ್ದದ ಬೃಹತ್ ಹೆಬ್ಬಾವು ಪತ್ತೆ; ವಿಡಿಯೋ ವೈರಲ್​

ರಿಪೇರಿಗಾಗಿ ಗ್ಯಾರೇಜ್‌ನೊಳಗೆ ನಿಲ್ಲಿಸಿದ್ದ ಕಾರಿನ ಬಾನೆಟ್ ತೆರೆದಾಗ ಬೃಹತ್ ಹೆಬ್ಬಾವು ಕಂಡು ಮೆಕ್ಯಾನಿಕ್‌ ಬೆಚ್ಚಿಬಿದ್ದಿದ್ದಾನೆ. ಗ್ಯಾರೇಜ್ ಮಾಲೀಕರು ಕೂಡಲೇ ಕರೆ ಮಾಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ತಂಡ ಹೆಬ್ಬಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.

Viral Video: ಕಾರ್ ಬಾನೆಟ್‌ನೊಳಗೆ 7 ಅಡಿ ಉದ್ದದ ಬೃಹತ್ ಹೆಬ್ಬಾವು ಪತ್ತೆ; ವಿಡಿಯೋ ವೈರಲ್​
ಅಕ್ಷತಾ ವರ್ಕಾಡಿ
|

Updated on: Sep 15, 2024 | 3:35 PM

Share

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗ್ಯಾರೇಜ್‌ನಲ್ಲಿದ್ದ ಕಾರಿನ ಬಾನೆಟ್‌ನೊಳಗೆ ಬೃಹತ್​​ ಹೆಬ್ಬಾವುವೊಂದು ಪತ್ತೆಯಾಗಿದೆ. ರಿಪೇರಿಗಾಗಿ ಗ್ಯಾರೇಜ್‌ನೊಳಗೆ ನಿಲ್ಲಿಸಿದ್ದ ಕಾರಿನ ಬಾನೆಟ್ ತೆರೆದಾಗ ಬೃಹತ್ ಹೆಬ್ಬಾವು ಕಂಡು ಮೆಕ್ಯಾನಿಕ್‌ ಬೆಚ್ಚಿಬಿದ್ದಿದ್ದಾನೆ. ಬಳಿಕ ಅರಣ್ಯ ಇಲಾಖೆಗೆ ಕರೆಮಾಡಿದ್ದು, ಅರಣ್ಯ ಅಧಿಕಾರಿಗಳು ಬಂದು ಹಾವನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಯಾಗ್‌ರಾಜ್‌ನ ಸಿವಿಲ್ ಲೈನ್ಸ್‌ನಲ್ಲಿರುವ ಹೋಟೆಲ್ ಅಜಯ್ ಇಂಟರ್‌ನ್ಯಾಶನಲ್ ಹೊರಗಿರುವ ಗ್ಯಾರೇಜ್‌ನಲ್ಲಿ ಈ ಘಟನೆ ನಡೆದಿದೆ.

ಹೆಬ್ಬಾವು ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುವಿಯ ಬಾನೆಟ್‌ನೊಳಗೆ ಬೆಚ್ಚನೆ ಕೂತಿದ್ದು, ಮೆಕ್ಯಾನಿಕ್ ಎಸ್‌ಯುವಿಯ ಬಾನೆಟ್ ತೆರೆದಾಗ 7 ಅಡಿಯ ಬೃಹತ್ ಹೆಬ್ಬಾವು ಕಂಡು ಬೆಚ್ಚಿಬಿದ್ದದ್ದಾನೆ. ಗ್ಯಾರೇಜ್ ಮಾಲೀಕರು ಕೂಡಲೇ 112ಕ್ಕೆ ಕರೆ ಮಾಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ತಂಡ ಹೆಬ್ಬಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸರ ಸರನೆ ಬಂದು ಗಣಪನ ಕೊರಳಲ್ಲಿ ಹೆಡೆ ಎತ್ತಿ ಕುಳಿತ ನಾಗಪ್ಪ; ರೋಮಾಂಚನಕಾರಿ ವಿಡಿಯೋ ವೈರಲ್‌

ರಕ್ಷಣಾ ಕಾರ್ಯಾಚರಣೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಸದ್ಯ ವಿಡಿಯೋ ವೈರಲ್ ಆಗಿದೆ. ಸೆ. 14 ರಂದು @bstvlive ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಹಾವಿನ ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸಲು ಅನೇಕ ಜನರು ಸ್ಥಳದಲ್ಲಿ ಸೇರಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ