AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಮದುವೆಯ ನಂತರ ಒಂಟಿಯಾಗಿದ್ದೇನೆ ಎಂದು 25ರ ಯುವತಿಯನ್ನು ವರಿಸಿದ 70ರ ವೃದ್ದ

ಮಕ್ಕಳ ಮದುವೆಯ ನಂತರ ಒಂಟಿಯಾಗಿದ್ದೇನೆ, ನನಗೆ ಆಸರೆಯಾಗಿ ಯಾರು ಇಲ್ಲ ಎಂಬ ಕಾರಣಕ್ಕೆ  70ರ ವೃದ್ದನೊಬ್ಬ 25ರ ಹರೆಯದ ಯುವತಿಯನ್ನು ಮದುವೆಯಾಗಿರುವ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಇವರಿಬ್ಬರು ಮದುವೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಮಕ್ಕಳ ಮದುವೆಯ ನಂತರ ಒಂಟಿಯಾಗಿದ್ದೇನೆ ಎಂದು 25ರ ಯುವತಿಯನ್ನು ವರಿಸಿದ 70ರ ವೃದ್ದ
25ರ ಯುವತಿಯನ್ನು ವರಿಸಿದ 70ರ ವೃದ್ದ
ಅಕ್ಷತಾ ವರ್ಕಾಡಿ
|

Updated on:Jul 28, 2024 | 3:05 PM

Share

ಬಿಹಾರದ 70 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಸಾವಿನ ನಂತರ 25 ವರ್ಷದ ಯುವತಿಯೊಂದಿಗೆ ಮರುಮದುವೆ ಮಾಡಿಕೊಂಡಿರುವ ಘಟನೆ ಗಯಾ ಜಿಲ್ಲೆಯ ಬೈದಾ ಗ್ರಾಮದಲ್ಲಿ ನಡೆದಿದೆ. ಮೊಹಮ್ಮದ್ ಸಲೀಮುಲ್ಲಾ ನೂರಾನಿ(70) ಹಮ್ಜಾಪುರದ ಇಸ್ಲಾಂನಗರ ನಿವಾಸಿ ರೇಷ್ಮಾ ಪರ್ವೀನ್(25)ಅವರನ್ನು ವಿವಾಹವಾಗಿದ್ದಾರೆ. ವೃದ್ಧ ರೈತನಾಗಿದ್ದು, ಆತನ ಮೊದಲ ಹೆಂಡತಿ ನಾಲ್ಕು ವರ್ಷಗಳ ಹಿಂದೆ ನಿಧನರಾಗಿದ್ದರು.

ತನ್ನ ಮಕ್ಕಳಿಗೆ ಮದುವೆ ಮಾಡಿದ ನಂತರ ನಾನು ಒಂಟಿ ಜೀವನ ನಡೆಸುತ್ತಿದ್ದೇನೆ. ನನಗೆ ಆಸರೆಯಾಗಲು ಯಾರೂ ಇರಲಿಲ್ಲ. ಅದೇ ಸಮಯದಲ್ಲಿ, ಸ್ಥಳೀಯ ಜನರು ವಧು ರೇಷ್ಮಾ ಪರ್ವೀನ್ ಅವರನ್ನ ಮದುವೆ ಮಾಡಿಕೊಳ್ಳುವ ಪ್ರಸ್ತಾಪ ಮುಂದಿಟ್ಟರು. ಅದಕ್ಕೊಪ್ಪಿ ಮದುವೆಯಾದೆ ಎಂದು ಮೊಹಮ್ಮದ್ ಸಲೀಮುಲ್ಲಾ ಹೇಳಿಕೊಂಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಫೇಸ್​​ ಬುಕ್​​ ಲವ್​​; 2 ಮಕ್ಕಳ ತಂದೆಯಾಗಿರುವ ಪ್ರಿಯಕರನ ಭೇಟಿಗೆ ಭಾರತಕ್ಕೆ ಓಡೋಡಿ ಬಂದ ಪಾಕಿಸ್ತಾನಿ ಯುವತಿ

ದಂಪತಿಗಳು ಇಸ್ಲಾಮಿಕ್ ಆಚರಣೆಗಳ ಪ್ರಕಾರ ವಿವಾಹವಾಗಿದ್ದು, ವದು-ವರ ಇಬ್ಬರೂ ಸ್ವ ಇಚ್ಚೆಯಿಂದಲೇ ವಿವಾಹವಾಗಿದ್ದಾರೆ ಎಂದು ವರದಿಯಾಗಿದೆ. ವಿವಾಹದ ನಂತರದ ಇವರ ಸಂದರ್ಶನದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. “ಅಕ್ರಮ ಸಂಬಂಧಗಳನ್ನು ಹೊಂದುವುದಕ್ಕಿಂತ ಇದು ಉತ್ತಮ, ಅವರು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ” ಎಂದು ಒಬ್ಬರು ಕಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Sun, 28 July 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ