AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral : ಆಸ್ತಿಯ ವ್ಯಾಮೋಹ, ಸಾವನ್ನಪ್ಪಿದ ವೃದ್ಧೆ ಕೈಯಿಂದ ಆಸ್ತಿ ಪತ್ರಕ್ಕೆ ಹೆಬ್ಬೆಟ್ಟು ಹಾಕಿಸಿಕೊಂಡ ಸಂಬಂಧಿಕರು

ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆದ ವಿಡಿಯೋ ತುಣುಕೊಂದು ಹರಿದಾಡುತ್ತಿದ್ದು, ವ್ಯಕ್ತಿಯೊಬ್ಬ ಮೃತ ವೃದ್ಧೆಯ ಹೆಬ್ಬೆರೆಳಿನ ಗುರುತೊಂದನ್ನು ತೆಗೆದಿರುವುದು ಕಂಡುಬಂದಿದೆ.

Video Viral : ಆಸ್ತಿಯ ವ್ಯಾಮೋಹ, ಸಾವನ್ನಪ್ಪಿದ ವೃದ್ಧೆ  ಕೈಯಿಂದ ಆಸ್ತಿ ಪತ್ರಕ್ಕೆ ಹೆಬ್ಬೆಟ್ಟು ಹಾಕಿಸಿಕೊಂಡ ಸಂಬಂಧಿಕರು
Image Credit source: Twitter
ಅಕ್ಷತಾ ವರ್ಕಾಡಿ
|

Updated on: Apr 11, 2023 | 4:53 PM

Share

ಆಸ್ತಿಗೋಸ್ಕರ ಸತ್ತ ಹೆಣವನ್ನು ಬಿಡದೆ ಆಸ್ತಿ ಪತ್ರಗಳ ಮೇಲೆ ಹೆಬ್ಬೆಟ್ಟು ಹಾಕಿಸಿಕೊಂಡಿರುವ ಫಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.  ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆದ ವಿಡಿಯೋ ತುಣುಕೊಂದು ಹರಿದಾಡುತ್ತಿದ್ದು, ವ್ಯಕ್ತಿಯೊಬ್ಬ ಮೃತ ವೃದ್ಧೆಯ ಹೆಬ್ಬೆರೆಳಿನ ಗುರುತೊಂದನ್ನು ತೆಗೆದಿರುವುದು ಕಂಡುಬಂದಿದೆ. ಮೃತ ವೃದ್ಧೆಯ ಶವವನ್ನು ಕಾರಿನ ಹಿಂಬದಿಯ ಸೀಟ್​ನಲ್ಲಿ ಮಲಗಿಸಿರುವುದನ್ನು ಕಾಣಬಹುದು. 45 ಸೆಕೆಂಡುಗಳ ವೀಡಿಯೊದಲ್ಲಿ ವ್ಯಕ್ತಿಯೊರ್ವ ಶವದ ಹೆಬ್ಬೆರಳಿನ ಮುದ್ರೆಯನ್ನು ಬಲವಂತವಾಗಿ ತೆಗೆದುಕೊಳ್ಳುವುದನ್ನು ಕಾಣುತ್ತದೆ.  ಏಕೆಂದರೆ ವೃದ್ಧೆ ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಾಣಬಹುದು. ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ನೆಪದಲ್ಲಿ ಹೆಬ್ಬೆರಳಿನ ಗುರುತನ್ನು ವಂಚನೆಯಿಂದ ತೆಗೆದುಕೊಂಡು ವೃದ್ದೆಯ ಆಸ್ತಿಯನ್ನು ಕಸಿದುಕೊಳ್ಳಲು ಪ್ರಯತ್ನಿಸಿಸುತ್ತಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ.

ಇದನ್ನೂ ಓದಿ: ಅಂದು ಎಲ್ಲರೂ ಅಬ್ಬಾ ಇದೇನ್ ವಿಚಿತ್ರ ಬುದ್ಧಿ ಇಲ್ವಾ ಅಂದಿದ್ರು: ದೆವ್ವದ ಜತೆ ಮದುವೆಯಾಗಿದ್ದ ಮಹಿಳೆಗೆ ಈಗ ವಿಚ್ಛೇಧನ ಬೇಕಂತೆ!

ಈ ಘಟನೆಯು ಮೇ.08 2021 ಹಿಂದಿನದ್ದು, ಆದರೆ ಇದೀಗಾ ಟ್ವಿಟರ್​​ನಲ್ಲಿ ಭಾರೀ ವೈರಲ್​ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಆಗ್ರಾ ಮೂಲದ ಜಿತೇಂದ್ರ ಶರ್ಮ ಅಂದರೆ ಮೃತ ವೃದ್ಧೆಯ ಮೊಮ್ಮಗ ಪೋಲಿಸರಿಗೆ ದೂರು ನೀಡಿದ್ದರೂ ಏನೂ ಪ್ರಯೋಜನವಾಗಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ನನ್ನ ಸಂಬಂಧಿಕರು ಸಂಚು ರೂಪಿಸಿ ಅಜ್ಜಿಯನ್ನು ಕೊಂದಿದ್ದಾರೆ. ಅಜ್ಜಿ ಬದುಕಿರುವಾಗ ಆಸ್ತಿಯನ್ನು ಕಬಳಿಸಲು ಪ್ರಯತ್ನಿಸಿದ್ದರು, ಆದರೆ ಅದು ಸಾಧ್ಯವಾಗಲಿಲ್ಲ, ಅದಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮೇ.08 2021 ನನ್ನ ಅಜ್ಜಿಯ ಸ್ಥಿತಿ ಗಂಭೀರವಾಗಿದೆ. ಆ ಸಮಯದಲ್ಲಿ ನನ್ನ ಸಂಬಂಧಿಕರಾದ ಬೈಜನಾಥ್ ಹಾಗೂ ಅನ್ಶುಲ್​​​ ಅಜ್ಜಿಯನ್ನು ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಕಾರಿನಲ್ಲಿ ಕರೆದುಹೋಗಿದ್ದಾರೆ. ಮಾರ್ಗ ಮಧ್ಯೆದಲ್ಲೇ ಅಜ್ಜಿ ತೀರಿಕೊಂಡಿದ್ದಾರೆ. ಆ ಸಮಯದಲ್ಲಿ ಕಾರನ್ನು ನಡು ರಸ್ತೆಯಲ್ಲೇ ನಿಲ್ಲಿಸಿ ಆಸ್ತಿ ಪತ್ರಗಳಿಗೆ ಬೆರಳಿನ ಗುರುತನ್ನು ತೆಗೆದುಕೊಂಡಿದ್ದಾರೆ ಜಿತೇಂದ್ರ ಶರ್ಮ ಆರೋಪಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!