AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ

ಮಹಿಳೆ ಬೈಕ್​​ನ ಹಿಂಭಾಗದಲ್ಲಿ ಕುಳಿತಿದ್ದು, ಚಳಿ ತಾಳಲಾರದೆ ಜೋಳ ಬೇಯಿಸುವ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ
Video Viral_
ಅಕ್ಷತಾ ವರ್ಕಾಡಿ
|

Updated on: Jan 26, 2024 | 12:52 PM

Share

ದೇಶದ ರಾಜಧಾನಿ ದೆಹಲಿ ಸೇರಿದಂತೆ, ಇಡೀ ಉತ್ತರ ಭಾರತದಾದ್ಯಂತ ವಿಪರೀತ ಚಳಿ. ಈ ಚಳಿಯಿಂದಾಗಿ ಬೈಕ್​​ ಸವಾರಿ ಮಾಡುವುದು ಅಷ್ಟು ಸುಲಭವಲ್ಲ. ಆದರೆ ಇಲ್ಲೊಬ್ಬಳು ಮಹಿಳೆ ಸಖತ್​ ಆಗಿ ಪ್ಲಾನ್​​ ಮಾಡಿ ಬೈಕ್​​​ನಲ್ಲಿ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ ಬೈಕ್​​ನ ಹಿಂಭಾಗದಲ್ಲಿ ಕುಳಿತಿದ್ದು, ಚಳಿ ತಾಳಲಾರದೆ ಜೋಳ ಬೇಯಿಸುವ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಕಷ್ಟು ನೆಟ್ಟಿಗರನ್ನು ತಲುಪಿದೆ. ಈ ಘಟನೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋದಲ್ಲಿ ಮಹಿಳೆ ತನ್ನ ಪತಿ ಮತ್ತು ಮಗುವಿನೊಂದಿಗೆ ಬೈಕ್​​ನಲ್ಲಿ ಹೋಗುತ್ತಿರುವುದು ಕಾಣಬಹುದು. ಜೊತೆಗೆ ಮಹಿಳೆ ಮಹಿಳೆ ಬಾಣಲೆಯಲ್ಲಿ ಕೆಂಡ ಹಾಕಿ ತನ್ನ ಮಡಿಲಲ್ಲಿ ಇಟ್ಟುಕೊಂಡಿರುವಂತೆ ಕಾಣುತ್ತದೆ. ಈ ಮೂಲಕ ತನ್ನ ಪತಿ ಹಾಗೂ ಮಗುವನ್ನು ಚಳಿಯಿಂದ ರಕ್ಷಿಸಲು ಸಖತ್​​ ಆಗಿ ಪ್ಲಾನ್​ ಮಾಡಿದ್ದಾರೆ. ಒಂದೆಡೆ ಮಹಿಳೆಯನ್ನು ಕಂಡು ಆ ದಾರಿಯಲ್ಲಿ ಹೋಗುತ್ತಿದ್ದ ಸವಾರರು ಅಚ್ಚರಿಗೊಂಡಿದ್ದಾರೆ. ಇನ್ನೊಂದೆಡೆ ಮತ್ತೊಂದು ಸವಾರರು ಈ ದೃಶ್ಯವನ್ನು ಮೊಬೈಲ್​​ನಲ್ಲಿ ಸೆರೆಹಿಡಿದ್ದಿದ್ದಾರೆ.

ವೈರಲ್​ ವಿಡಿಯೋ  ಇಲ್ಲಿದೆ ನೋಡಿ:

ಇದನ್ನೂ ಓದಿ: ಮಕ್ಕಳ ನಡವಳಿಕೆಗೆ ನೊಂದು ಸಾಕು ಪ್ರಾಣಿಯ ಹೆಸರಿಗೆ ಕೋಟಿಗಟ್ಟಲೆ ಆಸ್ತಿ ವರ್ಗಾವಣೆ ಮಾಡಿದ ವೃದ್ಧೆ

ವಿಡಿಯೋವನ್ನು @aseem2008 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದು, ಈಗಾಗಲೇ ಈ ವಿಡಿಯೋ ಸಖತ್​ ಆಗಿ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬರು ‘ಹಿಂದಿನಿಂದ ಬರುವ ಸವಾರರ ಕಣ್ಣಿಗೆ ಕೆಂಡ ಬಿದ್ದರೆ ಗತಿಯೇನು?’ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ