AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ

ಮಹಿಳೆ ಬೈಕ್​​ನ ಹಿಂಭಾಗದಲ್ಲಿ ಕುಳಿತಿದ್ದು, ಚಳಿ ತಾಳಲಾರದೆ ಜೋಳ ಬೇಯಿಸುವ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ
Video Viral_
ಅಕ್ಷತಾ ವರ್ಕಾಡಿ
|

Updated on: Jan 26, 2024 | 12:52 PM

Share

ದೇಶದ ರಾಜಧಾನಿ ದೆಹಲಿ ಸೇರಿದಂತೆ, ಇಡೀ ಉತ್ತರ ಭಾರತದಾದ್ಯಂತ ವಿಪರೀತ ಚಳಿ. ಈ ಚಳಿಯಿಂದಾಗಿ ಬೈಕ್​​ ಸವಾರಿ ಮಾಡುವುದು ಅಷ್ಟು ಸುಲಭವಲ್ಲ. ಆದರೆ ಇಲ್ಲೊಬ್ಬಳು ಮಹಿಳೆ ಸಖತ್​ ಆಗಿ ಪ್ಲಾನ್​​ ಮಾಡಿ ಬೈಕ್​​​ನಲ್ಲಿ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ ಬೈಕ್​​ನ ಹಿಂಭಾಗದಲ್ಲಿ ಕುಳಿತಿದ್ದು, ಚಳಿ ತಾಳಲಾರದೆ ಜೋಳ ಬೇಯಿಸುವ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಕಷ್ಟು ನೆಟ್ಟಿಗರನ್ನು ತಲುಪಿದೆ. ಈ ಘಟನೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋದಲ್ಲಿ ಮಹಿಳೆ ತನ್ನ ಪತಿ ಮತ್ತು ಮಗುವಿನೊಂದಿಗೆ ಬೈಕ್​​ನಲ್ಲಿ ಹೋಗುತ್ತಿರುವುದು ಕಾಣಬಹುದು. ಜೊತೆಗೆ ಮಹಿಳೆ ಮಹಿಳೆ ಬಾಣಲೆಯಲ್ಲಿ ಕೆಂಡ ಹಾಕಿ ತನ್ನ ಮಡಿಲಲ್ಲಿ ಇಟ್ಟುಕೊಂಡಿರುವಂತೆ ಕಾಣುತ್ತದೆ. ಈ ಮೂಲಕ ತನ್ನ ಪತಿ ಹಾಗೂ ಮಗುವನ್ನು ಚಳಿಯಿಂದ ರಕ್ಷಿಸಲು ಸಖತ್​​ ಆಗಿ ಪ್ಲಾನ್​ ಮಾಡಿದ್ದಾರೆ. ಒಂದೆಡೆ ಮಹಿಳೆಯನ್ನು ಕಂಡು ಆ ದಾರಿಯಲ್ಲಿ ಹೋಗುತ್ತಿದ್ದ ಸವಾರರು ಅಚ್ಚರಿಗೊಂಡಿದ್ದಾರೆ. ಇನ್ನೊಂದೆಡೆ ಮತ್ತೊಂದು ಸವಾರರು ಈ ದೃಶ್ಯವನ್ನು ಮೊಬೈಲ್​​ನಲ್ಲಿ ಸೆರೆಹಿಡಿದ್ದಿದ್ದಾರೆ.

ವೈರಲ್​ ವಿಡಿಯೋ  ಇಲ್ಲಿದೆ ನೋಡಿ:

ಇದನ್ನೂ ಓದಿ: ಮಕ್ಕಳ ನಡವಳಿಕೆಗೆ ನೊಂದು ಸಾಕು ಪ್ರಾಣಿಯ ಹೆಸರಿಗೆ ಕೋಟಿಗಟ್ಟಲೆ ಆಸ್ತಿ ವರ್ಗಾವಣೆ ಮಾಡಿದ ವೃದ್ಧೆ

ವಿಡಿಯೋವನ್ನು @aseem2008 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದು, ಈಗಾಗಲೇ ಈ ವಿಡಿಯೋ ಸಖತ್​ ಆಗಿ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬರು ‘ಹಿಂದಿನಿಂದ ಬರುವ ಸವಾರರ ಕಣ್ಣಿಗೆ ಕೆಂಡ ಬಿದ್ದರೆ ಗತಿಯೇನು?’ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು