AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ

ಮಹಿಳೆ ಬೈಕ್​​ನ ಹಿಂಭಾಗದಲ್ಲಿ ಕುಳಿತಿದ್ದು, ಚಳಿ ತಾಳಲಾರದೆ ಜೋಳ ಬೇಯಿಸುವ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಚಳಿ ತಾಳಲಾರದೆ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ ಸವಾರಿ ಮಾಡಿದ ಮಹಿಳೆ
Video Viral_
ಅಕ್ಷತಾ ವರ್ಕಾಡಿ
|

Updated on: Jan 26, 2024 | 12:52 PM

Share

ದೇಶದ ರಾಜಧಾನಿ ದೆಹಲಿ ಸೇರಿದಂತೆ, ಇಡೀ ಉತ್ತರ ಭಾರತದಾದ್ಯಂತ ವಿಪರೀತ ಚಳಿ. ಈ ಚಳಿಯಿಂದಾಗಿ ಬೈಕ್​​ ಸವಾರಿ ಮಾಡುವುದು ಅಷ್ಟು ಸುಲಭವಲ್ಲ. ಆದರೆ ಇಲ್ಲೊಬ್ಬಳು ಮಹಿಳೆ ಸಖತ್​ ಆಗಿ ಪ್ಲಾನ್​​ ಮಾಡಿ ಬೈಕ್​​​ನಲ್ಲಿ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ ಬೈಕ್​​ನ ಹಿಂಭಾಗದಲ್ಲಿ ಕುಳಿತಿದ್ದು, ಚಳಿ ತಾಳಲಾರದೆ ಜೋಳ ಬೇಯಿಸುವ ಬಾಣಲೆಯಲ್ಲಿ ಕೆಂಡ ಹಾಕಿ ಬೈಕ್​​ನಲ್ಲಿ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಕಷ್ಟು ನೆಟ್ಟಿಗರನ್ನು ತಲುಪಿದೆ. ಈ ಘಟನೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋದಲ್ಲಿ ಮಹಿಳೆ ತನ್ನ ಪತಿ ಮತ್ತು ಮಗುವಿನೊಂದಿಗೆ ಬೈಕ್​​ನಲ್ಲಿ ಹೋಗುತ್ತಿರುವುದು ಕಾಣಬಹುದು. ಜೊತೆಗೆ ಮಹಿಳೆ ಮಹಿಳೆ ಬಾಣಲೆಯಲ್ಲಿ ಕೆಂಡ ಹಾಕಿ ತನ್ನ ಮಡಿಲಲ್ಲಿ ಇಟ್ಟುಕೊಂಡಿರುವಂತೆ ಕಾಣುತ್ತದೆ. ಈ ಮೂಲಕ ತನ್ನ ಪತಿ ಹಾಗೂ ಮಗುವನ್ನು ಚಳಿಯಿಂದ ರಕ್ಷಿಸಲು ಸಖತ್​​ ಆಗಿ ಪ್ಲಾನ್​ ಮಾಡಿದ್ದಾರೆ. ಒಂದೆಡೆ ಮಹಿಳೆಯನ್ನು ಕಂಡು ಆ ದಾರಿಯಲ್ಲಿ ಹೋಗುತ್ತಿದ್ದ ಸವಾರರು ಅಚ್ಚರಿಗೊಂಡಿದ್ದಾರೆ. ಇನ್ನೊಂದೆಡೆ ಮತ್ತೊಂದು ಸವಾರರು ಈ ದೃಶ್ಯವನ್ನು ಮೊಬೈಲ್​​ನಲ್ಲಿ ಸೆರೆಹಿಡಿದ್ದಿದ್ದಾರೆ.

ವೈರಲ್​ ವಿಡಿಯೋ  ಇಲ್ಲಿದೆ ನೋಡಿ:

ಇದನ್ನೂ ಓದಿ: ಮಕ್ಕಳ ನಡವಳಿಕೆಗೆ ನೊಂದು ಸಾಕು ಪ್ರಾಣಿಯ ಹೆಸರಿಗೆ ಕೋಟಿಗಟ್ಟಲೆ ಆಸ್ತಿ ವರ್ಗಾವಣೆ ಮಾಡಿದ ವೃದ್ಧೆ

ವಿಡಿಯೋವನ್ನು @aseem2008 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದು, ಈಗಾಗಲೇ ಈ ವಿಡಿಯೋ ಸಖತ್​ ಆಗಿ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬರು ‘ಹಿಂದಿನಿಂದ ಬರುವ ಸವಾರರ ಕಣ್ಣಿಗೆ ಕೆಂಡ ಬಿದ್ದರೆ ಗತಿಯೇನು?’ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ