AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆ ಬಾಗಿಲಿನ ಮುಂದೆಯೇ ರಾಜಾರೋಷವಾಗಿ ಹಾದು ಹೋದ ಕರಿಚಿರತೆ; ಇಲ್ಲಿದೆ ನೋಡಿ ವಿಡಿಯೋ

ಕರಿಚಿರತೆಯೊಂದು ರಾಜಾರೋಷವಾಗಿ ಮನೆ ಬಾಗಿಲಿನ ಮುಂದೆಯೇ ಹಾದುಹೋಗುತ್ತಿರುವ ದೃಶ್ಯಾವಳಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮನೆಯ ಪ್ರವೇಶದ್ವಾರದ ಹೊರಗೆ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಈ ದೃಶ್ಯ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

Viral Video: ಮನೆ ಬಾಗಿಲಿನ ಮುಂದೆಯೇ ರಾಜಾರೋಷವಾಗಿ ಹಾದು ಹೋದ ಕರಿಚಿರತೆ; ಇಲ್ಲಿದೆ ನೋಡಿ ವಿಡಿಯೋ
Black PantherImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 18, 2024 | 11:27 AM

Share

ತಮಿಳುನಾಡಿನ ನೀಲಗಿರಿಯ ಕುನ್ನೂರಿನ ಮನೆಯೊಂದರ ಮುಂಭಾಗದಲ್ಲಿ ರಾಜಾರೋಷವಾಗಿ ಹಾದು ಹೋಗುತ್ತಿದ್ದ ಕರಿಚಿರತೆ(Black Panther)ಯ ವಿಡಿಯೋ ಮನೆಯ ಮುಂಭಾಗದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಇದೀಗಾ ಎಲ್ಲೆಡೆ ವೈರಲ್​ ಆಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಮನೆಯ ಪ್ರವೇಶದ್ವಾರದ ಹೊರಗೆ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಿಂದ ಸೆರೆಹಿಡಿಯಲಾದ ದೃಶ್ಯಾವಳಿಗಳಲ್ಲಿ ಕರಿಚಿರತೆ ಮನೆಯ ಮುಂಭಾಗದಿಂದಲೇ ಹಾದು ಹೋಗುತ್ತಿರುವುದನ್ನು ಕಾಣಬಹುದು. ಬಹುಶಃ ರಾತ್ರಿಯ ಹೊತ್ತು ಆಹಾರ ಹುಡುಕಿಕೊಂಡು ಬಂದಂತೆ ತೋರುತ್ತದೆ.

ರಾಜಾರೋಷವಾಗಿ ಹಾದು ಹೋದ ಕರಿಚಿರತೆ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೈ ಹಿಡಿದು ಸುತ್ತುವುದು ಪ್ರೇಮವಲ್ಲ, ಜೀವನದ ಪ್ರತಿ ಹಂತದಲ್ಲೂ ಈ ರಿಯಲ್ ಜೋಡಿಯಂತಿರಬೇಕು

ಈ ವಿಡಿಯೋವನ್ನು ಫೆಬ್ರವರಿ 16 ರಂದು ಐಎಫ್​​​ಎಸ್​​​ ಅಧಿಕಾರಿ ಪರ್ವೀನ್​​​​ ಕಸ್ವಾನ್​​​(@ParveenKaswan) ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಇದೀಗಾಗಲೇ 2ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 4 ಸಾವಿರಕ್ಕೂ ಅಧಿಕ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ