AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: Hershey’s ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ

ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ.

Video Viral: Hershey's ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ
Hershey's ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಪತ್ತೆ
ಅಕ್ಷತಾ ವರ್ಕಾಡಿ
|

Updated on: Jun 19, 2024 | 3:21 PM

Share

ಹರ್ಷಿಸ್​​​​​ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಸ್ವತಃ ಹರ್ಷಿಸ್​​​​​ ಕಂಪೆನಿ ವಿಡಿಯೋಗೆ ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿ ಕ್ಷಮೆಯಾಚಿಸಿದೆ. ಇತ್ತೀಚೆಗಷ್ಟೇ ಮುಂಬೈನ ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ತುಂಡರಿಸಿದ ಮಾನವನ ಬೆರಳು ಪತ್ತೆಯಾಗಿದ್ದು,ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇದೀಗ Hershey’s ಚಾಕೊಲೇಟ್ ಸಿರಪ್‌ನ ವಿಡಿಯೋ ಎಲ್ಲೆಡೆ ಸಂಚಲನವನ್ನು ಮೂಡಿಸಿದೆ.

ಕ್ವಿಕ್ ಇ-ಕಾಮರ್ಸ್ ಕಂಪನಿ ಝೆಪ್ಟೊದಿಂದ ಆರ್ಡರ್ ಮಾಡಿದ ಹರ್ಷಿಸ್​​​​ ಕಂಪೆನಿಯ ಚಾಕೊಲೇಟ್ ಸಿರಪ್‌ನಲ್ಲಿ ಸತ್ತ ಇಲಿ ಕಂಡುಬಂದಿದ್ದು,ಪ್ರಮಿ ಶ್ರೀಧರ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿರುವುದು ತಿಳಿದುಬಂದಿದೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮುದ್ದು ಕಂದನ ಬಾಯಲ್ಲಿ ಐಗಿರಿ ನಂದಿನಿ ಸ್ತೋತ್ರ, ನೀವು ಮಂತ್ರಮುಗ್ಧರಾಗುವುದು ಖಂಡಿತ

@pramisridhar ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ತಮ್ಮ ಪೋಸ್ಟ್‌ನ ಕೊನೆಯಲ್ಲಿ, ಯಾವುದೇ ಉತ್ಪನ್ನವನ್ನು ಮನೆಯಲ್ಲಿ ಮಕ್ಕಳಿಗೆ ನೀಡುವ ಮೊದಲು ಅದನ್ನು ಪರೀಕ್ಷಿಸಲು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕಂಪನಿಯು ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಮುಂದೆ ಹೀಗಾಗದಂತೆ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ