AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ರೆಸ್ಟೋರೆಂಟ್‌ನ ಸಾಂಬಾರ್ ನಲ್ಲಿ ಸತ್ತ ಇಲಿ ಪತ್ತೆ

ಇತ್ತೀಚಿಗಷ್ಟೇ ಹರ್ಷಿಸ್​​​​​ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿತ್ತು. ಇದೀಗ ಅಹಮದಾಬಾದ್‌ನ ರೆಸ್ಟೋರೆಂಟ್​​ವೊಂದರ ಸಾಂಬಾರ್​​​​​ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಜೂನ್ 20 ರಂದು ಗುರುವಾರ, ಈ ಘಟನೆ ಬೆಳಕಿಗೆ ಬಂದಿದೆ.

Video Viral: ರೆಸ್ಟೋರೆಂಟ್‌ನ ಸಾಂಬಾರ್ ನಲ್ಲಿ ಸತ್ತ ಇಲಿ ಪತ್ತೆ
Follow us
ಅಕ್ಷತಾ ವರ್ಕಾಡಿ
|

Updated on: Jun 21, 2024 | 2:56 PM

ಅಹಮದಾಬಾದ್: ಅಹಮದಾಬಾದ್‌ನ ನಿಕೋಲ್‌ನಲ್ಲಿರುವ ದೇವಿ ದೋಸೆ ರೆಸ್ಟೋರೆಂಟ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ರೆಸ್ಟೋರೆಂಟ್‌ನ ಸಾಂಬಾರ್​​​​​ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಜೂನ್ 20 ರಂದು ಗುರುವಾರ, ಈ ಘಟನೆ ಬೆಳಕಿಗೆ ಬಂದಿದೆ. ಟೈಮ್ಸ್ ನೌ ವರದಿಯ ಪ್ರಕಾರ, ಸಾಂಬಾರ್​​​​​ನಲ್ಲಿ ಸತ್ತ ಇಲಿ ಬಿದ್ದಿರುವುದನ್ನು ಕಂಡು ಗ್ರಾಹಕರು ರೆಸ್ಟೋರೆಂಟ್ ಮಾಲೀಕ ಅಲ್ಪೇಶ್ ಕೆವಾಡಿಯಾ ಅವರಿಗೆ ತಿಳಿಸಿದರೂ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದರಿಂದ ಗ್ರಾಹಕರು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (AMC) ಯ ಆರೋಗ್ಯ ಇಲಾಖೆಗೆ ದೂರು ನೀಡಿದ್ದಾರೆ.

AMC ಯ ಆರೋಗ್ಯ ಇಲಾಖೆ ಮಾಲೀಕ ಕೆವಾಡಿಯಾಗೆ ನೋಟಿಸ್ ನೀಡಿ, ನಂತರ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿದೆ. @4th_pillarnews ಟ್ವಿಟರ್​​​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Hershey’s ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆ

ಇತ್ತೀಚಿಗಷ್ಟೇ ಹರ್ಷಿಸ್​​​​​ ಚಾಕೊಲೇಟ್ ಸಿರಪ್‌ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿತ್ತು. ಇದಲ್ಲದೇ ಮುಂಬೈನ ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ತುಂಡರಿಸಿದ ಮಾನವನ ಬೆರಳು ಪತ್ತೆಯಾಗಿದ್ದು,ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಇಂತಹ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿರುವುದು ವಿಷಾದದ ಸಂಗಂತಿ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು