AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿ ಏನು ಫುಟ್ಬಾಲ್ ಅಲ್ಲ, ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಶ್ವಾನವನ್ನು ಕಾಲಲ್ಲಿ ಒದ್ದ ಭದ್ರತಾ ಸಿಬ್ಬಂದಿ

ಮೊನ್ನೆ ಭಾನುವಾರ (MI) ವರ್ಸಸ್  ಗುಜರಾತ್ ವರ್ಸಸ್  ಟೈಟಾನ್ (GT) ನಡುವಿನ ಐಪಿಎಲ್  ಪಂದ್ಯ ನಡೆದಿತ್ತು. ಈ ಪಂದ್ಯಾವಳಿಯ ವೇಳೆ ಮೈದಾನಕ್ಕೆ ನುಗ್ಗಿದಂತಹ ಬೀದಿನಾಯಿಯನ್ನು ಹೊರ ಓಡಿಸುವ ಭರದಲ್ಲಿ ಅಲ್ಲಿನ ಭದ್ರತಾ ಸಿಬ್ಬಂದಿಗಳು ನಾಯಿಗೆ ಮನಸೋಇಚ್ಛೆ ಒದ್ದಿದ್ದಾರೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇವರುಗಳ ಅಮಾನವೀಯ ವರ್ತನೆಯನ್ನು ಪ್ರಾಣಿಪ್ರಿಯರು ತೀವ್ರವಾಗಿ ಖಂಡಿಸಿದ್ದಾರೆ. 

Viral Video: ನಾಯಿ ಏನು ಫುಟ್ಬಾಲ್ ಅಲ್ಲ, ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಶ್ವಾನವನ್ನು ಕಾಲಲ್ಲಿ ಒದ್ದ ಭದ್ರತಾ ಸಿಬ್ಬಂದಿ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Mar 27, 2024 | 12:37 PM

Share

ಮೊನ್ನೆ ಭಾನುವಾರ ಅಹಮದಬಾದಿನ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ  ಮುಂಬೈ ಇಂಡಿಯನ್ಸ್ (MI) ವರ್ಸಸ್  ಗುಜರಾತ್ ಟೈಟಾನ್ (GT) ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ನಡೆದಿತ್ತು. ಈ ಪಂದ್ಯಾವಳಿಯ ವೇಳೆ ಶ್ವಾನವೊಂದು ಇದ್ದಕ್ಕಿದ್ದಂತೆ ಮೈದಾನಕ್ಕೆ ಎಂಟ್ರಿಕೊಟ್ಟ ವಿಡಿಯೋ ತುಣುಕುಗಳು  ಸಿಕ್ಕಾಪಟ್ಟೆ ವೈರಲ್ ಆಗಿದ್ದವು. ಅಷ್ಟೇ ಅಲ್ಲದೆ ಮೈದಾನಕ್ಕೆ ಬಂದಂತಹ ನಾಯಿಯನ್ನು ಅಲ್ಲಿನ ಭದ್ರತಾ  ಸಿಬ್ಬಂದಿಗಳು  ಫುಟ್ಬಾಲ್ ನಂತೆ ಕಾಲಲ್ಲಿ ಒದ್ದು ಓಡಿಸಿದಂತಹ ವಿಡಿಯೋ ದೃಶ್ಯಾವಳಿಗಳು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ವೈರಲ್ ಆಗಿದ್ದು, ಭದ್ರತಾ ಸಿಬ್ಬಂದಿಗಳ ಅಮಾನವೀಯ ವರ್ತನೆಗೆ  ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಹೌದು ನಾಯಿಯನ್ನು ಕ್ರೀಡಾಂಗಣದಿಂದ ಹೊರ ಓಡಿಸುವ  ಭರದಲ್ಲಿ ಭದ್ರತಾ ಸಿಬ್ಬಂದಿ ಅದನ್ನು ಮನಸೋಇಚ್ಛೆ ಒದ್ದಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪ್ರಾಣಿ ಪ್ರಿಯರು ಭದ್ರತಾ ಸಿಬ್ಬಂದಿಗಳು ಹಾಗೂ ಪೊಲೀಸರ  ಅಮಾನವೀಯ ವರ್ತನೆಯನ್ನು ಟೀಕಿಸಿದ್ದು, ಕಾಲಲ್ಲಿ ಒದೆಯಲು ಶ್ವಾನವೇನು ಫುಟ್ಬಾಲ್ ಅಂತ ಭಾವಿಸಿದ್ದೀರಾ ನೀವುಗಳು ಎಂದು  ಪ್ರಶ್ನೆ ಮಾಡಿದ್ದಾರೆ.   ಅಷ್ಟೇ ಅಲ್ಲದೆ ನಟ ವರುಣ್ ಧವನ್ ಕೂಡಾ ಈ ವಿರುದ್ಧ ಧ್ವನಿ ಎತ್ತಿದ್ದು,  “ಕಾಲಲ್ಲಿ ಒದ್ದು ಓಡಿಸಲು  ನಾಯಿ ಏನು ಫುಟ್ಬಾಲ್ ಅಲ್ಲ; ಅಲ್ಲದೆ ಶ್ವಾನ ಅಷ್ಟಾಗಿ  ಯಾರನ್ನೂ ಕಚ್ಚುವುದು ಕೂಡಾ ಇಲ್ಲ. ಅದರ ಜೊತೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳಬಹುದಿತ್ತು”  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವೊಂದನ್ನು  ವಿದಿತ್ ಶರ್ಮ (TheViditsharma)  ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಐಪಿಎಲ್ ಪಂದ್ಯದ ವೇಳೆ ಅಮಾನುಷವಾಗಿ ವರ್ತಿಸಿ ಭದ್ರತಾ ಸಿಬ್ಬಂದಿಗಳು ಶ್ವಾನವನ್ನು ಒದ್ದು ಓಡಿಸಿದ ದೃಶ್ಯ. ಈ ಘಟನೆಯು ಜನರು ಪ್ರಾಣಿಗಳ ಮೇಲೆ ಎಷ್ಟು ದೌರ್ಜನ್ಯವೆಸಗುತ್ತಾರೆ ಎಂಬುದರ ಮೇಲೆ ಬೆಳಕು ಚೆಲ್ಲುತ್ತದೆ. ಪ್ರಾಣಿಗಳ ಬಗ್ಗೆ ಸ್ವಲ್ಪ ಸಹಾನುಭೂತಿಯನ್ನು ಬೆಳೆಸೋಣ ಮತ್ತು ಅವುಗಳ ಮೇಲೆ ನಡೆಯುವ ಕ್ರೌರ್ಯದ ವಿರುದ್ಧ ಧ್ವನಿ ಎತ್ತೋಣ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನನ್ನ ಮಗಳನ್ನು 1 ವಾರದೊಳಗೆ ಮದುವೆಯಾದರೆ ಬ್ಲ್ಯಾಂಕ್ ಚೆಕ್ ನೀಡುವೆ’, ಗಂಡ್​​​​ ಹೈಕ್ಳಿಗೆ ಬಿಗ್ ಆಫರ್​​ ನೀಡಿದ ತಂದೆ

ವೈರಲ್ ವಿಡಿಯೋದಲ್ಲಿ ಐಪಿಎಲ್ ಪಂದ್ಯದ ವೇಳೆ ಮೈದಾನಕ್ಕೆ ಬಂದಂತಹ ಬೀದಿನಾಯಿಯಲ್ಲಿ ಅಲ್ಲಿನ ಭದ್ರತಾ ಸಿಬ್ಬಂದಿಗಳು ಮತ್ತು ಪೊಲೀಸರು ಮಾನವೀಯತೆಯನ್ನು ಮರೆತು ಫುಟ್ಬಾಲ್ ಒದ್ದಂತೆ ನಾಯಿಯನ್ನು ಮನಸೋಇಚ್ಛೆ ಒದ್ದು, ಮೈದಾನದಿಂದ ಹೊರ ಓಡಿಸುವ ಆಘಾತಕಾರಿ ದೃಶ್ಯವನ್ನು ಕಾಣಬಹುದು.

ಮಾರ್ಚ್ 25 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಮೂರುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದಿದ್ದು, ಇದು ನಿಜಕ್ಕೂ  ನಾಚಿಕೆಗೇಡಿನ ಸಂಗತಿ,  ಮಾನವೀಯತೆಯನ್ನು ಮರೆತು ಈ ರೀತಿ ವರ್ತಿಸುವುದು ಎಷ್ಟು ಸರಿ. ಇವರುಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Wed, 27 March 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ