AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ದೃಶ್ಯ ಸೆರೆಯಾಗಿದೆ. ಈ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುವುದಂತೂ ಖಂಡಿತಾ. ಈ ದೃಶ್ಯ ಕಂಡು ಸ್ಥಳೀಯರು ದಂಗಾಗಿ ಹೋಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Jun 28, 2024 | 12:03 PM

Share

ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಸಮಸ್ಯೆ ಎಂದರೆ ಅದು ಟ್ರಾಫಿಕ್ ಜಾಮ್. ಎಲ್ಲಿ ಹೋಗ್ಬೇಕಾದ್ರೂ ಒಂದೆರಡು ಗಂಟೆ ಮುಂಚೆಯೇ ಹೊರಡಬೇಕು. ಟ್ರಾಫಿಕ್​​ ಜಾಮ್​ನಿಂದ ಎಷ್ಟೇ ಕೋಪ ಬಂದರೂ ಕೂಡ ಗಂಟೆಗಟ್ಟಲೆ ಕಾಯುವುದನ್ನು ಮಾತ್ರ ಏನು ಮಾಡಲು ಸಾಧ್ಯವಿಲ್ಲ. ಇದೀಗ ಟ್ರಾಫಿಕ್ ಜಾಮ್‌ನಿಂದಾಗಿ ವ್ಯಕ್ತಿಯೊಬ್ಬರು ತೀವ್ರ ಅಸಮಾಧಾನಗೊಂಡು ಬಹುಬಲಿಯಂತೆ ತನ್ನ ಬೈಕ್​​ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಯೊಬ್ಬ ಅಷ್ಟು ವಾಹನ ದಟ್ಟನೆಯ ನಡುವೆ ತನ್ನ ಬೈಕ್​​ ಎತ್ತಿಕೊಂಡು ನಡೆಯುತ್ತಿರುವ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುತ್ತದೆ. ಸಾಕಷ್ಟು ದೂರದ ವರೆಗೆ ಟ್ರಾಫಿಕ್​​ ಜಾಮ್​​ನಲಿ ಸಿಲುಕಿರುವ ಜನರು ಏಕಾಏಕಿ ಈ ದೃಶ್ಯ ಕಂಡು ದಂಗಾಗಿ ಹೋಗಿದ್ದಾರೆ. ಸ್ಥಳದಲ್ಲೇ ಇದ್ದ ವ್ಯಕ್ತಿಯೊಬ್ಬರು ಬೈಕ್​​ ಎತ್ತಿಕೊಂಡು ಬರುವ ದೃಶ್ಯವನ್ನು ತಮ್ಮ ಮೊಬೈಲ್​​​ ಫೋನಿನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ

@basit_ki_memes ಎಂಬ ಹೆಸರಿನ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​ 18ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 3.5 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 231,489 ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ