AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ದೃಶ್ಯ ಸೆರೆಯಾಗಿದೆ. ಈ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುವುದಂತೂ ಖಂಡಿತಾ. ಈ ದೃಶ್ಯ ಕಂಡು ಸ್ಥಳೀಯರು ದಂಗಾಗಿ ಹೋಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Jun 28, 2024 | 12:03 PM

Share

ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಸಮಸ್ಯೆ ಎಂದರೆ ಅದು ಟ್ರಾಫಿಕ್ ಜಾಮ್. ಎಲ್ಲಿ ಹೋಗ್ಬೇಕಾದ್ರೂ ಒಂದೆರಡು ಗಂಟೆ ಮುಂಚೆಯೇ ಹೊರಡಬೇಕು. ಟ್ರಾಫಿಕ್​​ ಜಾಮ್​ನಿಂದ ಎಷ್ಟೇ ಕೋಪ ಬಂದರೂ ಕೂಡ ಗಂಟೆಗಟ್ಟಲೆ ಕಾಯುವುದನ್ನು ಮಾತ್ರ ಏನು ಮಾಡಲು ಸಾಧ್ಯವಿಲ್ಲ. ಇದೀಗ ಟ್ರಾಫಿಕ್ ಜಾಮ್‌ನಿಂದಾಗಿ ವ್ಯಕ್ತಿಯೊಬ್ಬರು ತೀವ್ರ ಅಸಮಾಧಾನಗೊಂಡು ಬಹುಬಲಿಯಂತೆ ತನ್ನ ಬೈಕ್​​ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಯೊಬ್ಬ ಅಷ್ಟು ವಾಹನ ದಟ್ಟನೆಯ ನಡುವೆ ತನ್ನ ಬೈಕ್​​ ಎತ್ತಿಕೊಂಡು ನಡೆಯುತ್ತಿರುವ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುತ್ತದೆ. ಸಾಕಷ್ಟು ದೂರದ ವರೆಗೆ ಟ್ರಾಫಿಕ್​​ ಜಾಮ್​​ನಲಿ ಸಿಲುಕಿರುವ ಜನರು ಏಕಾಏಕಿ ಈ ದೃಶ್ಯ ಕಂಡು ದಂಗಾಗಿ ಹೋಗಿದ್ದಾರೆ. ಸ್ಥಳದಲ್ಲೇ ಇದ್ದ ವ್ಯಕ್ತಿಯೊಬ್ಬರು ಬೈಕ್​​ ಎತ್ತಿಕೊಂಡು ಬರುವ ದೃಶ್ಯವನ್ನು ತಮ್ಮ ಮೊಬೈಲ್​​​ ಫೋನಿನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ

@basit_ki_memes ಎಂಬ ಹೆಸರಿನ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​ 18ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 3.5 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 231,489 ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್