AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ದೃಶ್ಯ ಸೆರೆಯಾಗಿದೆ. ಈ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುವುದಂತೂ ಖಂಡಿತಾ. ಈ ದೃಶ್ಯ ಕಂಡು ಸ್ಥಳೀಯರು ದಂಗಾಗಿ ಹೋಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Jun 28, 2024 | 12:03 PM

Share

ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಸಮಸ್ಯೆ ಎಂದರೆ ಅದು ಟ್ರಾಫಿಕ್ ಜಾಮ್. ಎಲ್ಲಿ ಹೋಗ್ಬೇಕಾದ್ರೂ ಒಂದೆರಡು ಗಂಟೆ ಮುಂಚೆಯೇ ಹೊರಡಬೇಕು. ಟ್ರಾಫಿಕ್​​ ಜಾಮ್​ನಿಂದ ಎಷ್ಟೇ ಕೋಪ ಬಂದರೂ ಕೂಡ ಗಂಟೆಗಟ್ಟಲೆ ಕಾಯುವುದನ್ನು ಮಾತ್ರ ಏನು ಮಾಡಲು ಸಾಧ್ಯವಿಲ್ಲ. ಇದೀಗ ಟ್ರಾಫಿಕ್ ಜಾಮ್‌ನಿಂದಾಗಿ ವ್ಯಕ್ತಿಯೊಬ್ಬರು ತೀವ್ರ ಅಸಮಾಧಾನಗೊಂಡು ಬಹುಬಲಿಯಂತೆ ತನ್ನ ಬೈಕ್​​ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಯೊಬ್ಬ ಅಷ್ಟು ವಾಹನ ದಟ್ಟನೆಯ ನಡುವೆ ತನ್ನ ಬೈಕ್​​ ಎತ್ತಿಕೊಂಡು ನಡೆಯುತ್ತಿರುವ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುತ್ತದೆ. ಸಾಕಷ್ಟು ದೂರದ ವರೆಗೆ ಟ್ರಾಫಿಕ್​​ ಜಾಮ್​​ನಲಿ ಸಿಲುಕಿರುವ ಜನರು ಏಕಾಏಕಿ ಈ ದೃಶ್ಯ ಕಂಡು ದಂಗಾಗಿ ಹೋಗಿದ್ದಾರೆ. ಸ್ಥಳದಲ್ಲೇ ಇದ್ದ ವ್ಯಕ್ತಿಯೊಬ್ಬರು ಬೈಕ್​​ ಎತ್ತಿಕೊಂಡು ಬರುವ ದೃಶ್ಯವನ್ನು ತಮ್ಮ ಮೊಬೈಲ್​​​ ಫೋನಿನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ

@basit_ki_memes ಎಂಬ ಹೆಸರಿನ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​ 18ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 3.5 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 231,489 ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್