AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ದೃಶ್ಯ ಸೆರೆಯಾಗಿದೆ. ಈ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುವುದಂತೂ ಖಂಡಿತಾ. ಈ ದೃಶ್ಯ ಕಂಡು ಸ್ಥಳೀಯರು ದಂಗಾಗಿ ಹೋಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಟ್ರಾಫಿಕ್​ ಜಾಮ್​ಗೆ ಬೇಸತ್ತು ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಬೈಕನ್ನು ಹೆಗಲ ಮೇಲೆ ಹೊತ್ತು ಹೊರಟ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Jun 28, 2024 | 12:03 PM

Share

ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಸಮಸ್ಯೆ ಎಂದರೆ ಅದು ಟ್ರಾಫಿಕ್ ಜಾಮ್. ಎಲ್ಲಿ ಹೋಗ್ಬೇಕಾದ್ರೂ ಒಂದೆರಡು ಗಂಟೆ ಮುಂಚೆಯೇ ಹೊರಡಬೇಕು. ಟ್ರಾಫಿಕ್​​ ಜಾಮ್​ನಿಂದ ಎಷ್ಟೇ ಕೋಪ ಬಂದರೂ ಕೂಡ ಗಂಟೆಗಟ್ಟಲೆ ಕಾಯುವುದನ್ನು ಮಾತ್ರ ಏನು ಮಾಡಲು ಸಾಧ್ಯವಿಲ್ಲ. ಇದೀಗ ಟ್ರಾಫಿಕ್ ಜಾಮ್‌ನಿಂದಾಗಿ ವ್ಯಕ್ತಿಯೊಬ್ಬರು ತೀವ್ರ ಅಸಮಾಧಾನಗೊಂಡು ಬಹುಬಲಿಯಂತೆ ತನ್ನ ಬೈಕ್​​ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿ ಯೊಬ್ಬ ಅಷ್ಟು ವಾಹನ ದಟ್ಟನೆಯ ನಡುವೆ ತನ್ನ ಬೈಕ್​​ ಎತ್ತಿಕೊಂಡು ನಡೆಯುತ್ತಿರುವ ದೃಶ್ಯ ಒಮ್ಮೆಗೆ ಬಾಹುಬಲಿ ಸಿನಿಮಾ ನೆನಪಿಸುತ್ತದೆ. ಸಾಕಷ್ಟು ದೂರದ ವರೆಗೆ ಟ್ರಾಫಿಕ್​​ ಜಾಮ್​​ನಲಿ ಸಿಲುಕಿರುವ ಜನರು ಏಕಾಏಕಿ ಈ ದೃಶ್ಯ ಕಂಡು ದಂಗಾಗಿ ಹೋಗಿದ್ದಾರೆ. ಸ್ಥಳದಲ್ಲೇ ಇದ್ದ ವ್ಯಕ್ತಿಯೊಬ್ಬರು ಬೈಕ್​​ ಎತ್ತಿಕೊಂಡು ಬರುವ ದೃಶ್ಯವನ್ನು ತಮ್ಮ ಮೊಬೈಲ್​​​ ಫೋನಿನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಲಿಂಗ ವಿವಾಹ; ಮೇಕಪ್ ಮಾಡಲು ಬಂದ ಯುವತಿಯನ್ನೇ ಪ್ರೀತಿಸಿ ಮದುವೆಯಾದ ನಟಿ

@basit_ki_memes ಎಂಬ ಹೆಸರಿನ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​ 18ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 3.5 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 231,489 ನೆಟ್ಟಿಗರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ