AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಏಕಾಏಕಿ ಎಸ್ಕಲೇಟರ್‌ನಲ್ಲಿ ಸಿಲುಕಿಕೊಂಡ ಬಾಲಕಿಯ ಕಾಲು; ವಿಡಿಯೋ ವೈರಲ್​​

ವೈರಲ್​​ ಆಗಿರುವ ವಿಡಿಯೋದಲ್ಲಿ ಪುಟ್ಟ ಬಾಲಕಿ ತನ್ನ ಕುಟುಂಬದೊಂದಿಗೆ ಮಾಲ್​ಗೆ ಹೋಗಿರುವುದನ್ನು ಕಾಣಬಹುದು. ಎಸ್ಕಲೇಟರ್‌ನಲ್ಲಿ ಹೋಗಿದ್ದ ಬಾಲಕಿಯ ಕಾಲು ಎಸ್ಕಲೇಟರ್‌ನ ಒಳಗೆ ಸಿಲುಕಿಕೊಂಡಿದೆ. ಬಾಲಕಿ ಕಿರುಚಾಡಲು ಪ್ರಾರಂಭಿಸಿದಾಗ ಪೋಷಕರು ರಕ್ಷಿಸಲು ಯತ್ನಿಸಿದ್ದಾರೆ.

Video Viral: ಏಕಾಏಕಿ ಎಸ್ಕಲೇಟರ್‌ನಲ್ಲಿ ಸಿಲುಕಿಕೊಂಡ ಬಾಲಕಿಯ ಕಾಲು; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Jun 18, 2024 | 4:25 PM

Share

ಮಕ್ಕಳನ್ನು ಹೊರಗಡೆ ತಮ್ಮೊಂದಿಗೆ ಕರೆದುಕೊಂಡು ಹೋದಾಗ ಮಕ್ಕಳ ಬಗ್ಗೆ ಕಾಳಜಿ ವಹಿಸುವುದು ಪೋಷಕರ ಆದ್ಯ ಕರ್ತವ್ಯ. ಮಕ್ಕಳನ್ನು ಅವರ ಪಾಡಿಗೆ ಅವರನ್ನು ಬಿಟ್ಟು ನೀವು ಶಾಪಿಂಗ್​ನಲ್ಲಿ ಬ್ಯೂಸಿಯಾಗಿ ಬಿಟ್ಟರೆ ಆಘಾತಕಾರಿ ಘಟನೆಗಳಿಗೆ ಕಾರಣವಾಗಬಹುದು. ಸದ್ಯ ಇದೀಗ ಅಂತದ್ದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ವಿಡಿಯೋ ಒಂದು ಕ್ಷಣ ನಿಮ್ಮ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್​​ ಆಗಿರುವ ವಿಡಿಯೋದಲ್ಲಿ ಪುಟ್ಟ ಬಾಲಕಿ ತನ್ನ ಕುಟುಂಬದೊಂದಿಗೆ ಮಾಲ್​ಗೆ ಹೋಗಿರುವುದನ್ನು ಕಾಣಬಹುದು. ಮಾಲ್​​ನ ಎಸ್ಕಲೇಟರ್‌ನಲ್ಲಿ ಹೋಗಿದ್ದ ಬಾಲಕಿಯ ಕಾಲು ಎಸ್ಕಲೇಟರ್‌ನ ಒಳಗೆ ಸಿಲುಕಿಕೊಂಡಿದೆ. ಬಾಲಕಿ ಕಿರುಚಾಡಲು ಪ್ರಾರಂಭಿಸಿದಾಗ ಪೋಷಕರು ಹಿಂದಿರುಗಿ ನೋಡಿ, ರಕ್ಷಿಸಲು ಯತ್ನಿಸಿದ್ದಾರೆ. ಅದೇ ಸಮಯಕ್ಕೆ ಅಲ್ಲಿಂದ ಜೋಕರ್​​ ವೇಷ ಹಾಕಿಕೊಂಡಿದ್ದ ವ್ಯಕ್ತಿ ಚಲಿಸುತ್ತಿರುವ ಎಸ್ಕಲೇಟರನ್ನು ನಿಲ್ಲಿಸಿದ್ದಾರೆ. ಬಳಿಕ ಮಾಲ್‌ನ ಇತರ ಉದ್ಯೋಗಿಗಳು ಸಹ ಅಲ್ಲಿಗೆ ತಲುಪಿದ್ದು, ಮತ್ತು ಸಾಕಷ್ಟು ಪ್ರಯತ್ನದ ನಂತರ ಬಾಲಕಿಯ ಕಾಲನ್ನು ಒಳಗಿನಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ಮನೆಯಿಂದಲೇ ವಧುವನ್ನು ಹೊತ್ಯೊಯ್ದ ನಾಲ್ವರು ಯುವಕರು

@farhan.safdar.01 ಎಂಬ ಹೆಸರಿನ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಜೂನ್​​ 04ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ ವಿಡಿಯೋ 2.2ಮಿಲಿಯನ್​​ ಅಂದರೆ 20ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:26 pm, Tue, 18 June 24

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ