AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಏಕಾಏಕಿ ಎಸ್ಕಲೇಟರ್‌ನಲ್ಲಿ ಸಿಲುಕಿಕೊಂಡ ಬಾಲಕಿಯ ಕಾಲು; ವಿಡಿಯೋ ವೈರಲ್​​

ವೈರಲ್​​ ಆಗಿರುವ ವಿಡಿಯೋದಲ್ಲಿ ಪುಟ್ಟ ಬಾಲಕಿ ತನ್ನ ಕುಟುಂಬದೊಂದಿಗೆ ಮಾಲ್​ಗೆ ಹೋಗಿರುವುದನ್ನು ಕಾಣಬಹುದು. ಎಸ್ಕಲೇಟರ್‌ನಲ್ಲಿ ಹೋಗಿದ್ದ ಬಾಲಕಿಯ ಕಾಲು ಎಸ್ಕಲೇಟರ್‌ನ ಒಳಗೆ ಸಿಲುಕಿಕೊಂಡಿದೆ. ಬಾಲಕಿ ಕಿರುಚಾಡಲು ಪ್ರಾರಂಭಿಸಿದಾಗ ಪೋಷಕರು ರಕ್ಷಿಸಲು ಯತ್ನಿಸಿದ್ದಾರೆ.

Video Viral: ಏಕಾಏಕಿ ಎಸ್ಕಲೇಟರ್‌ನಲ್ಲಿ ಸಿಲುಕಿಕೊಂಡ ಬಾಲಕಿಯ ಕಾಲು; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Jun 18, 2024 | 4:25 PM

Share

ಮಕ್ಕಳನ್ನು ಹೊರಗಡೆ ತಮ್ಮೊಂದಿಗೆ ಕರೆದುಕೊಂಡು ಹೋದಾಗ ಮಕ್ಕಳ ಬಗ್ಗೆ ಕಾಳಜಿ ವಹಿಸುವುದು ಪೋಷಕರ ಆದ್ಯ ಕರ್ತವ್ಯ. ಮಕ್ಕಳನ್ನು ಅವರ ಪಾಡಿಗೆ ಅವರನ್ನು ಬಿಟ್ಟು ನೀವು ಶಾಪಿಂಗ್​ನಲ್ಲಿ ಬ್ಯೂಸಿಯಾಗಿ ಬಿಟ್ಟರೆ ಆಘಾತಕಾರಿ ಘಟನೆಗಳಿಗೆ ಕಾರಣವಾಗಬಹುದು. ಸದ್ಯ ಇದೀಗ ಅಂತದ್ದೇ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ವಿಡಿಯೋ ಒಂದು ಕ್ಷಣ ನಿಮ್ಮ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್​​ ಆಗಿರುವ ವಿಡಿಯೋದಲ್ಲಿ ಪುಟ್ಟ ಬಾಲಕಿ ತನ್ನ ಕುಟುಂಬದೊಂದಿಗೆ ಮಾಲ್​ಗೆ ಹೋಗಿರುವುದನ್ನು ಕಾಣಬಹುದು. ಮಾಲ್​​ನ ಎಸ್ಕಲೇಟರ್‌ನಲ್ಲಿ ಹೋಗಿದ್ದ ಬಾಲಕಿಯ ಕಾಲು ಎಸ್ಕಲೇಟರ್‌ನ ಒಳಗೆ ಸಿಲುಕಿಕೊಂಡಿದೆ. ಬಾಲಕಿ ಕಿರುಚಾಡಲು ಪ್ರಾರಂಭಿಸಿದಾಗ ಪೋಷಕರು ಹಿಂದಿರುಗಿ ನೋಡಿ, ರಕ್ಷಿಸಲು ಯತ್ನಿಸಿದ್ದಾರೆ. ಅದೇ ಸಮಯಕ್ಕೆ ಅಲ್ಲಿಂದ ಜೋಕರ್​​ ವೇಷ ಹಾಕಿಕೊಂಡಿದ್ದ ವ್ಯಕ್ತಿ ಚಲಿಸುತ್ತಿರುವ ಎಸ್ಕಲೇಟರನ್ನು ನಿಲ್ಲಿಸಿದ್ದಾರೆ. ಬಳಿಕ ಮಾಲ್‌ನ ಇತರ ಉದ್ಯೋಗಿಗಳು ಸಹ ಅಲ್ಲಿಗೆ ತಲುಪಿದ್ದು, ಮತ್ತು ಸಾಕಷ್ಟು ಪ್ರಯತ್ನದ ನಂತರ ಬಾಲಕಿಯ ಕಾಲನ್ನು ಒಳಗಿನಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ಮನೆಯಿಂದಲೇ ವಧುವನ್ನು ಹೊತ್ಯೊಯ್ದ ನಾಲ್ವರು ಯುವಕರು

@farhan.safdar.01 ಎಂಬ ಹೆಸರಿನ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಜೂನ್​​ 04ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ ವಿಡಿಯೋ 2.2ಮಿಲಿಯನ್​​ ಅಂದರೆ 20ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:26 pm, Tue, 18 June 24

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು