AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಹಸಿ ಮೆಣಸಿನ ಕಾಯಿ ಹಲ್ವಾ; ಹೇಗೆ ತಯಾರಿಸುತ್ತಿದ್ದಾರೆ ನೋಡಿ!

ಇದೀಗ ವಿಡಿಯೋವೊಂದು ವೈರಲ್​​ ಆಗಿದ್ದು, ಫ್ಯಾಕ್ಟರಿಯೊಂದರಲ್ಲಿ ಮೆಣಸಿನಕಾಯಿಯನ್ನು ನುಣ್ಣಗೆ ಕತ್ತರಿಸಿ ಹಲ್ವಾ ತಯಾರಿಸುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಹಲ್ವಾ ಪ್ರಿಯರು ಈ ವಿಡಿಯೋ ನೋಡಿದರೆ ಶಾಕ್​ ಆಗುವುದಂತೂ ಖಂಡಿತಾ.

Video Viral: ಹಸಿ ಮೆಣಸಿನ ಕಾಯಿ ಹಲ್ವಾ; ಹೇಗೆ ತಯಾರಿಸುತ್ತಿದ್ದಾರೆ ನೋಡಿ!
Green Mirchi Halwa
ಅಕ್ಷತಾ ವರ್ಕಾಡಿ
|

Updated on: May 24, 2024 | 1:44 PM

Share

ಇತ್ತೀಚಿನ ದಿನಗಳಲ್ಲಿ ಆಹಾರ ಪದಾರ್ಥಗಳ ಬಗ್ಗೆ ಅನೇಕ ಅಪಾಯಕಾರಿ ಪ್ರಯೋಗಗಳನ್ನು ಮಾಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುತ್ತವೆ. ಕೆಲವು ವಿಡಿಯೋ ನೋಡಿದಾಗ ಅಸಹ್ಯ ಅನಿಸುವುದು ಸಹಜ. ಇದೀಗ ಅಂತದ್ದೇ ವಿಡಿಯೋವೊಂದು ವೈರಲ್​​ ಆಗಿದ್ದು, ಹಲ್ವಾ ಪ್ರಿಯರು ಈ ವಿಡಿಯೋ ನೋಡಿದರೆ ಶಾಕ್​ ಆಗುವುದಂತೂ ಖಂಡಿತಾ.

ಫ್ಯಾಕ್ಟರಿಯೊಂದರಲ್ಲಿ ಹಲ್ವಾ ತಯಾರಿಸುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.ಮೊದಲು ಹಸಿರು ಮೆಣಸಿನಕಾಯಿಯನ್ನು ನುಣ್ಣಗೆ ಕತ್ತರಿಸಲಾಗುತ್ತದೆ. ಇದರ ನಂತರ, ಮೆಣಸಿನಕಾಯಿಯನ್ನು ಕುಲುಮೆಯಲ್ಲಿ ಬಾಣಲೆಯಲ್ಲಿ ಹಾಕಲಾಗುತ್ತದೆ. ಅದರ ನಂತರ ಸಕ್ಕರೆ, ಹಸಿರು ಬಣ್ಣ, ಹಾಲು ಮತ್ತು ಅಂತಿಮವಾಗಿ ತೆಂಗಿನ ನೀರನ್ನು ಸೇರಿಸಲಾಗುತ್ತದೆ. ಇದನ್ನೆಲ್ಲ ಸೇರಿಸಿದ ನಂತರ ಹಲ್ವಾ ಬೇಯಿಸುತ್ತಾರೆ. ಇದರ ನಂತರ, ಅದು ಸಿದ್ಧವಾದಾಗ, ಅದನ್ನು ಅಚ್ಚಿನಲ್ಲಿ ಸುರಿದು, ಹಲ್ವಾ ರೀತಿಯಲ್ಲಿ ಕತ್ತರಿಸುವುದನ್ನು ಕಾಣಬಹುದು.

ಇದನ್ನೂ ಓದಿ: ಭಿಕ್ಷಾಟನೆಯಿಂದಲೇ ತಿಂಗಳಿಗೆ 75 ಸಾವಿರ ರೂ. ಆದಾಯ ಗಳಿಸುವ ಭಾರತದ ಅತ್ಯಂತ ಶ್ರೀಮಂತ ಭಿಕ್ಷುಕ

ಈ ವೀಡಿಯೊವನ್ನು @indian_street_food_5 ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮೇ 20ರಂದು ಹಂಚಿಕೊಂಡಿರುವ ವಿಡಿಯೋ ಕೇವಲ ನಾಲ್ಕು ದಿನದಲ್ಲಿ 10ಲಕ್ಷಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ 14 ಸಾವಿರಕ್ಕೂ ಹೆಚ್ಚಿನ ಜನರು ಲೈಕ್ ಮಾಡಿದ್ದಾರೆ. ಸಾಕಷ್ಟು ಹಲ್ವಾ ಪ್ರಿಯರು ಕಾಮೆಂಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!