AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಮಾನ ವಿಳಂಬ; ಕೋಪಗೊಂಡು ಪೈಲಟ್‌ನನ್ನೇ ಥಳಿಸಿದ ಪ್ರಯಾಣಿಕ

ದಟ್ಟ ಮಂಜಿನ ಹಿನ್ನೆಲೆ ವಿಮಾನಗಳ ಹಾರಾಟ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದ ಕ್ಯಾಪ್ಟನ್​ ಮೇಲೆ ಕೋಪಗೊಂಡ ಪ್ರಯಾಣಿಕ ಹಲ್ಲೆ ನಡೆಸಿದ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪೈಲೆಟ್​ ಮೇಲೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

Viral Video: ವಿಮಾನ ವಿಳಂಬ; ಕೋಪಗೊಂಡು ಪೈಲಟ್‌ನನ್ನೇ ಥಳಿಸಿದ ಪ್ರಯಾಣಿಕ
Indigo Passenger Attacks pilot
ಅಕ್ಷತಾ ವರ್ಕಾಡಿ
|

Updated on:Jan 16, 2024 | 12:39 PM

Share

ದೆಹಲಿ, ಉತ್ತರ ಭಾರತದ ಹಲವೆಡೆ ದಟ್ಟ ಮಂಜು ಹಿನ್ನೆಲೆ 100 ವಿಮಾನಗಳ ಹಾರಾಟ ಹಲವೆಡೆ ವಿಳಂಬವಾಗುತ್ತಿದೆ. ತೀವ್ರ ಚಳಿಯಿಂದಾಗಿ ಗೋಚರತೆ ಅಸ್ಪಷ್ಟವಾಗಿದ್ದಕ್ಕೆ, ವಿಮಾನ ಸಂಚಾರ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದ ಕ್ಯಾಪ್ಟನ್​ ಮೇಲೆ ಕೋಪಗೊಂಡ ಪ್ರಯಾಣಿಕ ಹಲ್ಲೆ ನಡೆಸಿದ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಭಾನುವಾರ ಸಂಜೆ 7 ಗಂಟೆಗೆ ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ವಿಮಾನದಲ್ಲಿ (6ಇ 2175) ಈ ಘಟನೆ ನಡೆದಿದೆ. ಪೈಲೆಟ್​​​​ ಘೋಷಣೆ ಮಾಡುತ್ತಿದ್ದಂತೆ ಕೋಪಗೊಂಡ ಪ್ರಯಾಣಿಕ ಪೈಲೆಟ್​ ಮೇಲೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

ಪೈಲಟ್ ಮೇಲೆ ಹಲ್ಲೆ ನಡೆಸಿರುವ ಪ್ರಯಾಣಿಕನನ್ನು ಸಾಹಿಲ್ ಕತ್ರಿಯಾ ಎಂದು ಗುರುತಿಸಲಾಗಿದ್ದು, ಈತ ಪೈಲಟ್ ಅನೂಪ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾನೆ. ಇಂಡಿಗೋ ವಿಮಾನದ ಸಹ ಪೈಲಟ್ ಅನುಪ್ ಕುಮಾರ್ ಅವರ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿಯ ಸೆಕ್ಷನ್ 323, 341, 290 ಮತ್ತು ಸೆಕ್ಷನ್ 22 ಏರ್ ಕ್ರಾಫ್ಟ್ ರೂಲ್ಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ವಿಮಾನ ಅಪಘಾತ, ಸ್ನೇಹಿತನ ಮೃತದೇಹ ತಿಂದು ಬದುಕುಳಿದ ವ್ಯಕ್ತಿ ಹೇಳಿದ ಕಥೆ

ಉತ್ತರ ಭಾರತದ ಹಲವೆಡೆ ಮಂಜಿನ ವಾತಾವರಣ ಭಾರೀ ಪ್ರಮಾಣದಲ್ಲಿ ಹೆಚ್ಚಿದೆ.ಇದರಿಂದಾಗಿ ಹಲವು ವಿಮಾನಗಳು ತಡವಾಗಿ ಸಂಚರಿಸುತ್ತಿದ್ದು, ಕೆಲವು ವಿಮಾನಗಳನ್ನು ಅಧಿಕಾರಿಗಳು ರದ್ದುಗೊಳಿಸಿದ್ದಾರೆ. ಇದುವರೆಗೆ 100 ವಿಮಾನಗಳು ವಿಳಂಬವಾಗಿದ್ದು, 10 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:25 am, Tue, 16 January 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!