AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ವೈರಲ್​​

ಇಲ್ಲೊಬ್ಬ ರೈತ ತಾನು ಸಾಕಿದ ಎಮ್ಮೆಗಳ ಕೊಟ್ಟಿಗೆಗೆ ಎಸಿ ಹಾಕಿಸಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಸಾಕಿದ ಎಮ್ಮೆಗಳನ್ನು ಕೇವಲ ಕೆಲಸಕ್ಕೆ ಮಾತ್ರ ಬಳಸದೇ ಅವುಗಳ ಬಗ್ಗೆಯೂ ಕಾಳಜಿ ತೋರಿಸಿರುವುದು ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

Video Viral: ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ವೈರಲ್​​
ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ
ಅಕ್ಷತಾ ವರ್ಕಾಡಿ
|

Updated on: May 05, 2024 | 3:36 PM

Share

ತಾಪಮಾನ ದಿನದಿಂದ ದಿನಕ್ಕೆ ನಿರಂತರವಾಗಿ ಹೆಚ್ಚುತ್ತಿದೆ. ಸುಡು ಬಿಸಿಲಿನಲ್ಲಿ ಜನ ಮನೆಯಿಂದ ಹೊರಗೆ ಕಾಲಿಡಲು ಹಿಂದೇಟು ಹಾಕುತ್ತಿದ್ದಾರೆ. ಹೆಚ್ಚಿನವರು ಫ್ಯಾನ್, ಕೂಲರ್ ಅಥವಾ ಎಸಿಯಂತಹ ವಸ್ತುಗಳ ಸಹಾಯದಿಂದ ತಮ್ಮ ಮನೆಗಳಲ್ಲಿನ ಶಾಖದಿಂದ ಪರಿಹಾರವನ್ನು ಪಡೆಯುತ್ತಾರೆ. ಈ ಋತುವಿನಲ್ಲಿ ಮನುಷ್ಯರಷ್ಟೇ ಅಲ್ಲ ಪ್ರಾಣಿಗಳಿಗೂ ಬಿಸಿಲಿನ ಬೇಗೆ ಎದುರಾಗಿದೆ. ಆದ್ದರಿಂದ ಇಲ್ಲೊಬ್ಬ ರೈತ ತಾನು ಸಾಕಿದ ಎಮ್ಮೆಗಳ ಕೊಟ್ಟಿಗೆಗೆ ಎಸಿ ಹಾಕಿಸಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಸಾಕಿದ ಎಮ್ಮೆಗಳನ್ನು ಕೇವಲ ಕೆಲಸಕ್ಕೆ ಮಾತ್ರ ಬಳಸದೇ ಅವುಗಳ ಬಗ್ಗೆಯೂ ಕಾಳಜಿ ತೋರಿಸಿರುವುದು ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಸಾಕಷ್ಟು ನೆಟ್ಟಿಗರು ಲೈಕ್ಸ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಒಂದು ಕೋಣೆಯಲ್ಲಿ ಮೂರು ಎಮ್ಮೆಗಳು ಮತ್ತು ಎರಡು ಕರುಗಳು ಇರುವುದನ್ನು ನೋಡಬಹುದು. ಅಚ್ಚರಿಯ ಸಂಗತಿಯೆಂದರೆ ಎಸಿಯ ಜೊತೆಗೆ ಲೈಟ್, ಫ್ಯಾನ್ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಈ ವಿಡಿಯೋ ನೋಡಿದ ಸೋಶಿಯಲ್ ಮೀಡಿಯಾ ಬಳಕೆದಾರರೂ ಅಚ್ಚರಿಗೊಂಡಿದ್ದು, ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Bullet 350cc Price: 1986ರಲ್ಲಿ ಬುಲೆಟ್ 350cc ಬೆಲೆ ಎಷ್ಟಿತ್ತು ಗೊತ್ತಾ?

manjeetmalik567 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 10ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 50 ಸಾವಿರಕ್ಕೂ ಹೆಚ್ಚು ಲೈಕ್ಸ್​​ ಪಡೆದುಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು