AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈತ್ಯಾಕಾರದ ಆನೆ ಕ್ರಿಕೆಟ್​ ಆಡುವುದನ್ನು ನೋಡಿದರೆ ನೀವೂ ಆಶ್ಚರ್ಯಪಡ್ತೀರಾ; ಇಲ್ಲಿದೆ ವಿಡಿಯೋ

ದೈತ್ಯಾಕಾರದ ಆನೆ ಸ್ಟೈಲ್ ಆಗಿ ಬ್ಯಾಟ್​ ಹಿಡಿದು ಕ್ರಿಕೆಟ್​ ಆಡಲು ನಿಂತಿದೆ. ಚೆಂಡು ಎದುರು ಬರುತ್ತಿದ್ದಂತೆ ತನ್ನ ಸೊಂಡಿಲಿನಿಂದ ಹಿಡಿದ ಬ್ಯಾಟ್​ ಮೂಲಕ ಬೀಸಿ ಬೀಸಿ ಚೆಂಡನ್ನು ಹೊಡೆಯುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.

ದೈತ್ಯಾಕಾರದ ಆನೆ ಕ್ರಿಕೆಟ್​ ಆಡುವುದನ್ನು ನೋಡಿದರೆ ನೀವೂ ಆಶ್ಚರ್ಯಪಡ್ತೀರಾ; ಇಲ್ಲಿದೆ ವಿಡಿಯೋ
ಕ್ರಿಕೆಟ್​ ಆಡುತ್ತಿರುವ ದೈತ್ಯಾಕಾರದ ಆನೆ
shruti hegde
|

Updated on: May 10, 2021 | 3:30 PM

Share

ದೇಶದೆಲ್ಲೆಡೆ ಕೊರೊನಾ ವೈರಸ್​ ವ್ಯಾಪಕವಾಗಿ ಹರಡುವಿಕೆಯಿಂದ ಈ ಬಾರಿಯ ಐಪಿಎಲ್​ ಕ್ರಿಕೆಟ್​ ಪಂದ್ಯಾವಳಿಯನ್ನು ಮುಂದೂಡಲಾಯಿತು. ಹೀಗಿರುವಾಗ ಗುಂಪೊಂದು ಸೇರಿ ಕ್ರಿಕೆಟ್​ ಆಡುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಕ್ರಿಕೆಟ್​ ಟೀಂನಲ್ಲಿ ಬ್ಯಾಟಿಂಗ್​ ಮಾಡುತ್ತಿರುವ ದೈತ್ಯಾಕಾರನನ್ನು ನೋಡಿ ನೆಟ್ಟಿಗರು ಆಶ್ಚರ್ಯಪಟ್ಟಿದ್ದಾರೆ. ಹಾಗಾದರೆ ಯಾರಿರಬಹುದು ಅಂತಹ ದೈತ್ಯ ಆಟಗಾರ? ವಿಡಿಯೋ ಇಲ್ಲಿದೆ ನೀವೂ ನೋಡಿ.

ದೈತ್ಯಾಕಾರದ ಆನೆ ಸ್ಟೈಲ್ ಆಗಿ ಬ್ಯಾಟ್​ ಹಿಡಿದು ಕ್ರಿಕೆಟ್​ ಆಡಲು ನಿಂತಿದೆ. ಚೆಂಡು ಎದುರು ಬರುತ್ತಿದ್ದಂತೆ ತನ್ನ ಸೊಂಡಿಲಿನಿಂದ ಹಿಡಿದ ಬ್ಯಾಟ್​ ಮೂಲಕ ಬೀಸಿ ಬೀಸಿ ಚೆಂಡನ್ನು ಹೊಡೆಯುತ್ತಿದೆ. ಪ್ರತಿ ಚೆಂಡು ಕೂಡಾ ಸಿಕ್ಸ್​ ಗಡಿಯಾಚೆಗೆ ಹೋಗಿ ಬೀಳುತ್ತಿದೆ. 30 ಸೆಕೆಂಡುಗಳಿರುವ ವಿಡಿಯೋವನ್ನು 6 ಲಕ್ಷಕ್ಕೂ ಹೆಚ್ಚು ನೆಟ್ಟಿಗರು ವೀಕ್ಷಿಸಿದ್ದಾರೆ. ಬ್ಯಾಟ್​ ಹಿಡಿದು ನಿಂತ ಅನೆಯನ್ನು ನೋಡಿದ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ.

ಸ್ಥಳದಲ್ಲಿ ಆನೆ ಹೊಡೆದ ಚೆಂಡನ್ನು ಹಿಡಿಯಲು, ಮತ್ತು ಆನೆಯನ್ನು ಔಟ್​ ಮಾಡಲು ಆಟಗಾರರು ನಿಂತಿದ್ದಾರೆ. ಅತಿ ಚಾಣುಕ್ಯತನದಿಂದ ಆನೆ ಸಿಕ್ಸರ್​ ಹೊಡೆಯುವ ದೃಶ್ಯ ನೋಡಿದ ನೆಟ್ಟಿಗರು ಆನೆಯ ಸಾಮರ್ಥ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ವಿಟರ್​ ಪುಟವೊಂದರಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ವಿಡಿಯೋಕ್ಕೆ ಕಮೆಂಟ್ಸ್​ಗಳ ಸುರಿಮಳೆಯೇ ಬಂದಿದೆ. ಮುಂದಿನ ಐಪಿಲ್​ಗೆ ಗಜರಾಜನನ್ನು ಆಯ್ಕೆ ಮಾಡುವುದಾಗಿ ನೆಟ್ಟಿಗರು ಪ್ರಶಂಸೆ ಪಟ್ಟಿದ್ದಾರೆ.

ಕ್ರಿಕೆಟ್​ ಅಂದಾಕ್ಷಣ ಜನರ ಕಿವಿ ನೆಟ್ಟಗಾಗುತ್ತದೆ. ಅಷ್ಟು ಇಷ್ಟದ ಕ್ರಿಕೆಟ್​ ಆಟಕ್ಕೆ ಸಂಬಂಧಿಸಿದ ವಿಷಯವಂತೂ ಹೆಚ್ಚು ಚರ್ಚೆಯಾಗುವುದು ಸಾಮಾನ್ಯ. ಇಲ್ಲಿ, ಆನೆ ಬ್ಯಾಟ್​ ಹಿಡಿದು ಕ್ರಿಕೆಟ್​ ಆಡುತ್ತಿರುವ ದೃಶ್ಯ ಮತ್ತು ಆನೆಗೆ ಕ್ರಿಕೆಟ್​ ಆಟದ ಮೇಲಿರುವ ಪ್ರೀತಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ವೈರಲ್ ವಿಡಿಯೋ: ವಿಷಕಾರಿ ಹಾವಿನೆದುರು ಕಾಳಗಕ್ಕಿಳಿದು ಗೆದ್ದ ಸಣ್ಣ ಜೇಡ..!

ಪೆಟ್ರೋಲ್, ಡೀಸೆಲ್ ಖರ್ಚೇ ಇಲ್ಲ, ಟೈರ್​ ಹತ್ತಿ ರಸ್ತೆಯಲ್ಲಿ ಚಲಿಸಿದ ಬಾಲಕ! ಸ್ಟಂಟ್ ವಿಡಿಯೋ ವೈರಲ್​

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ