AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ರಿಪೋರ್ಟರ್​​ಗೆ ಬಲವಂತವಾಗಿ ಹಿಜಾಬ್​​ ಹಾಕಿದ ಮುಸ್ಲಿಂ ಯುವಕ, ಆಕೆಯ ಪ್ರತ್ಯುತ್ತರಕ್ಕೆ ನೆಟ್ಟಿಗರು ಫಿದಾ

ವೈರಲ್​​ ವಿಡಿಯೋದಲ್ಲಿ ವ್ಯಕ್ತಿ ಬಲವಂತವಾಗಿ ಮಹಿಳೆಯ ತಲೆಯ ಮೇಲೆ ಶಾಲು ಹಾಕುತ್ತಿರುವುದನ್ನು ಕಾಣಬಹುದು. ಆದರೆ, ಮಹಿಳೆ ಕೂಡಲೇ ಶಾಲನ್ನು ತೆಗೆದು ಖಡಕ್ಕಾಗಿ ಪ್ರತ್ಯುತ್ತರ ಕೊಟ್ಟಿದ್ದಾಳೆ. ಮಹಿಳೆಯ ತೀಕ್ಷ್ಣವಾದ ಮತ್ತು ಕಟುವಾದ ಉತ್ತರವು ಸಾಮಾಜಿಕ ಮಾಧ್ಯಮದಲ್ಲಿ ನೆಟ್ಟಿಗರ ಹೃದಯವನ್ನು ಗೆದ್ದಿದೆ.

ಮಹಿಳಾ ರಿಪೋರ್ಟರ್​​ಗೆ ಬಲವಂತವಾಗಿ ಹಿಜಾಬ್​​ ಹಾಕಿದ ಮುಸ್ಲಿಂ ಯುವಕ, ಆಕೆಯ ಪ್ರತ್ಯುತ್ತರಕ್ಕೆ ನೆಟ್ಟಿಗರು ಫಿದಾ
ಅಕ್ಷತಾ ವರ್ಕಾಡಿ
|

Updated on:Apr 20, 2024 | 3:40 PM

Share

ಪಾಕಿಸ್ತಾನದಲ್ಲಿ ಮಹಿಳಾ ಸಂದರ್ಶಕಿಯೊಬ್ಬಳು ಹಿಜಾಬ್​​ ಧರಿಸದೇ ಸಾರ್ವಜನಿಕ ಪ್ರದೇಶದಲ್ಲಿ ಸಂದರ್ಶನ ಮಾಡುತ್ತಿರುವ ಮಾಡುವ ವೇಳೆ ವ್ಯಕ್ತಿಯೊಬ್ಬ ಬಂದು ಆಕೆಯ ತಲೆಯ ಮೇಲೆ ಬಲವಂತವಾಗಿ ಶಾಲು ಹೊದಿಸಿದ್ದಾನೆ. ಆತನ ಯುವತಿಯ ಕೂದಲನ್ನು ಬಟ್ಟೆಯಿಂದ ಮುಚ್ಚುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದಲ್ಲದೇ ವ್ಯಕ್ತಿಯ ಈ ನಡವಳಿಕೆ ಕಂಡು ಯುವತಿ ಸರಿಯಾಗಿ ಪ್ರತ್ಯುತ್ತರ ನೀಡಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ವೈರಲ್​​ ವಿಡಿಯೋದಲ್ಲಿ ವ್ಯಕ್ತಿ ಬಲವಂತವಾಗಿ ಮಹಿಳೆಯ ತಲೆಯ ಮೇಲೆ ಶಾಲು ಹಾಕುತ್ತಿರುವುದನ್ನು ಕಾಣಬಹುದು. ಆದರೆ, ಮಹಿಳೆ ಕೂಡಲೇ ಶಾಲನ್ನು ತೆಗೆದು ಖಡಕ್ಕಾಗಿ ಪ್ರತ್ಯುತ್ತರ ಕೊಟ್ಟಿದ್ದಾಳೆ. ಮಹಿಳೆಯ ತೀಕ್ಷ್ಣವಾದ ಮತ್ತು ಕಟುವಾದ ಉತ್ತರವು ಸಾಮಾಜಿಕ ಮಾಧ್ಯಮದಲ್ಲಿ ನೆಟ್ಟಿಗರ ಹೃದಯವನ್ನು ಗೆದ್ದಿದೆ.

ಇದನ್ನೂ ಓದಿ: ಚಿತ್ರದಲ್ಲಿ ಅಡಗಿರುವ ಜಿಂಕೆಯನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?

” ಮಹಿಳೆಯ ಅನುಮತಿಯಿಲ್ಲದೇ ಪರಪುರುಷ ಮಹಿಳೆಯನ್ನು ಮುಟ್ಟುವುದು ಇಸ್ಲಾಂ ನಲ್ಲಿ ದೊಡ್ಡ ಅಪರಾಧ ಎಂದು ನಿಮಗೆ ತಿಳಿದಿಲ್ಲವೇ?” ಎಂದು ವ್ಯಕ್ತಿಯನ್ನು ಕೇಳಿದ್ದಾಳೆ. ಇದಲ್ಲದೇ “ಅನುಮತಿಯಿಲ್ಲದೆ ಮಹಿಳೆಯನ್ನು ಸ್ಪರ್ಶಿಸುವುದು. ಇದು ಸಾಮಾಜಿಕ ಕಿರುಕುಳ,” ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಮಹಿಳೆಯ ಉತ್ತರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಯಾವುದೇ ಹೆಣ್ಣಿನ ಮೇಲೆ ದುಪ್ಪಟ್ಟಾ ಹಾಕುವ ಅಧಿಕಾರ ಯಾರಿಗೂ ಇಲ್ಲ. ಅದನ್ನು ಧರಿಸುವುದು ಅಥವಾ ಧರಿಸದಿರುವುದು ಸಂಪೂರ್ಣವಾಗಿ ಅವಳ ಆಯ್ಕೆಯಾಗಿದೆ” ಎಂದು ನೆಟ್ಟಿಗರೊಬ್ಬರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Sat, 20 April 24

Follow Us
ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್
ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್
‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಕಾರಣ ನೀಡಿದ ಶೆಲ್ವಪಿಳ್ಳೈ ಅಯ್ಯಂಗಾರ್!
‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಕಾರಣ ನೀಡಿದ ಶೆಲ್ವಪಿಳ್ಳೈ ಅಯ್ಯಂಗಾರ್!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ