AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಆಟವಾಡುತ್ತಿದ್ದ ಬಾಲಕಿಯ ಮೇಲೆ ಸಾಕು ನಾಯಿ ದಾಳಿ; ವಿಡಿಯೋ

ವನ್ಯಾ ಚೌಹಾಣ್ ಎಂದು ಗುರುತಿಸಲಾಗಿರುವ 6 ವರ್ಷದ ಬಾಲಕಿ ಸೊಸೈಟಿಯ ಕಾಂಪೌಂಡ್‌ನಲ್ಲಿ ಆಟವಾಡುತ್ತಿರುವ ವೇಳೆ ಏಕಾಏಕಿ ನಾಯಿ ಬಾಲಕಿಯ ಮೇಲೆ ದಾಳಿ ಮಾಡಿದೆ. ನಾಯಿಯ ದಾಳಿಯಿಂದ ಬಾಲಕಿಯ ಕೈಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ಷತಾ ವರ್ಕಾಡಿ
|

Updated on: Apr 30, 2024 | 11:45 AM

Share

ಗಾಜಿಯಾಬಾದ್ : ಸಾಕು ನಾಯಿಯೊಂದು 6 ವರ್ಷದ  ಬಾಲಕಿಯ ಮೇಲೆ ದಾಳಿ ನಡೆಸಿ ಕೈ ಕಚ್ಚಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಪಾಶ್ ಸೊಸೈಟಿಯೊಂದರಲ್ಲಿ ನಡೆದಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ. ನಾಯಿಯ ಮಾಲೀಕರು ಇರುವಾಗಲೇ ಸಾಕು ನಾಯಿ ಅಪ್ರಾಪ್ತ ಬಾಲಕಿಯ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿ ಕಂಡು ಬರುತ್ತಿದೆ.

ಬುಧವಾರ (ಏಪ್ರಿಲ್ 24) ಈ ಘಟನೆ ಸಂಭವಿಸಿದ್ದು, ವನ್ಯಾ ಚೌಹಾಣ್ ಎಂದು ಗುರುತಿಸಲಾಗಿರುವ ಅಪ್ರಾಪ್ತ ಬಾಲಕಿ ಸೊಸೈಟಿಯ ಕಾಂಪೌಂಡ್‌ನಲ್ಲಿ ಆಟವಾಡುತ್ತಿರುವ ವೇಳೆ ಏಕಾಏಕಿ ನಾಯಿ ಬಾಲಕಿಯ ಮೇಲೆ ದಾಳಿ ಮಾಡಿದೆ. ಜರ್ಮನ್ ಶೆಫರ್ಡ್ ತಳಿಯ ಶ್ವಾನವಾಗಿದ್ದು, ಬಾಲಕಿಯ ಮೇಲೆ ಕಚ್ಚಲು ಮುಂದಾದ ವೇಳೆ ಶ್ವಾನದ ಮಾಲೀಕಿ ಎಳೆದೊಯ್ದಲು ಪ್ರಯತ್ನಿಸಿದ್ದು, ವಿಡಿಯೋದಲ್ಲಿ ಸೆರೆಯಾಗಿದೆ. ನಾಯಿಯ ದಾಳಿಯಿಂದ ಬಾಲಕಿಯ ಕೈಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಅತ್ತೆ ಜೊತೆಗೆ ಮಾರ್ವಾಡಿ ಭಾಷೆ ಮಾತನಾಡುವ ರೋಬೋಟ್ ಸೊಸೆ, ಇವಳು ಸೂರ್ಯಪ್ರಕಾಶನ ಪತ್ನಿ

ವಿಡಿಯೋ ಎಲ್ಲೆಡೆ ವೈರಲ್​​ ಆಗಿದ್ದು, ನಾಯಿ ಮಾಲೀಕರು ತಮ್ಮ ನಾಯಿಗಳನ್ನು ಸಾಕುಪ್ರಾಣಿಗಳಾಗಿ ಇಟ್ಟುಕೊಳ್ಳುವ ಮೊದಲು ಅವುಗಳನ್ನು ನಿಯಂತ್ರಿಸಲು ಕಲಿಯಬೇಕು. ಅವರು ನಾಯಿಯ ಗಾತ್ರವನ್ನು ಗಣನೆಗೆ ತೆಗೆದುಕೊಳ್ಳಬೇಕು ಮತ್ತು ಅದನ್ನು ಸಾರ್ವಜನಿಕವಾಗಿ ತೆಗೆದುಕೊಳ್ಳುವ ಮೊದಲು ಅದನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಅವರು ಗಣನೆಗೆ ತೆಗೆದುಕೊಳ್ಳಬೇಕು ಎಂದು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ