AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಆಟವಾಡುತ್ತಿದ್ದ ಬಾಲಕಿಯ ಮೇಲೆ ಸಾಕು ನಾಯಿ ದಾಳಿ; ವಿಡಿಯೋ

ವನ್ಯಾ ಚೌಹಾಣ್ ಎಂದು ಗುರುತಿಸಲಾಗಿರುವ 6 ವರ್ಷದ ಬಾಲಕಿ ಸೊಸೈಟಿಯ ಕಾಂಪೌಂಡ್‌ನಲ್ಲಿ ಆಟವಾಡುತ್ತಿರುವ ವೇಳೆ ಏಕಾಏಕಿ ನಾಯಿ ಬಾಲಕಿಯ ಮೇಲೆ ದಾಳಿ ಮಾಡಿದೆ. ನಾಯಿಯ ದಾಳಿಯಿಂದ ಬಾಲಕಿಯ ಕೈಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ಷತಾ ವರ್ಕಾಡಿ
|

Updated on: Apr 30, 2024 | 11:45 AM

Share

ಗಾಜಿಯಾಬಾದ್ : ಸಾಕು ನಾಯಿಯೊಂದು 6 ವರ್ಷದ  ಬಾಲಕಿಯ ಮೇಲೆ ದಾಳಿ ನಡೆಸಿ ಕೈ ಕಚ್ಚಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಪಾಶ್ ಸೊಸೈಟಿಯೊಂದರಲ್ಲಿ ನಡೆದಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ. ನಾಯಿಯ ಮಾಲೀಕರು ಇರುವಾಗಲೇ ಸಾಕು ನಾಯಿ ಅಪ್ರಾಪ್ತ ಬಾಲಕಿಯ ಮೇಲೆ ದಾಳಿ ಮಾಡಿರುವುದು ವಿಡಿಯೋದಲ್ಲಿ ಕಂಡು ಬರುತ್ತಿದೆ.

ಬುಧವಾರ (ಏಪ್ರಿಲ್ 24) ಈ ಘಟನೆ ಸಂಭವಿಸಿದ್ದು, ವನ್ಯಾ ಚೌಹಾಣ್ ಎಂದು ಗುರುತಿಸಲಾಗಿರುವ ಅಪ್ರಾಪ್ತ ಬಾಲಕಿ ಸೊಸೈಟಿಯ ಕಾಂಪೌಂಡ್‌ನಲ್ಲಿ ಆಟವಾಡುತ್ತಿರುವ ವೇಳೆ ಏಕಾಏಕಿ ನಾಯಿ ಬಾಲಕಿಯ ಮೇಲೆ ದಾಳಿ ಮಾಡಿದೆ. ಜರ್ಮನ್ ಶೆಫರ್ಡ್ ತಳಿಯ ಶ್ವಾನವಾಗಿದ್ದು, ಬಾಲಕಿಯ ಮೇಲೆ ಕಚ್ಚಲು ಮುಂದಾದ ವೇಳೆ ಶ್ವಾನದ ಮಾಲೀಕಿ ಎಳೆದೊಯ್ದಲು ಪ್ರಯತ್ನಿಸಿದ್ದು, ವಿಡಿಯೋದಲ್ಲಿ ಸೆರೆಯಾಗಿದೆ. ನಾಯಿಯ ದಾಳಿಯಿಂದ ಬಾಲಕಿಯ ಕೈಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಅತ್ತೆ ಜೊತೆಗೆ ಮಾರ್ವಾಡಿ ಭಾಷೆ ಮಾತನಾಡುವ ರೋಬೋಟ್ ಸೊಸೆ, ಇವಳು ಸೂರ್ಯಪ್ರಕಾಶನ ಪತ್ನಿ

ವಿಡಿಯೋ ಎಲ್ಲೆಡೆ ವೈರಲ್​​ ಆಗಿದ್ದು, ನಾಯಿ ಮಾಲೀಕರು ತಮ್ಮ ನಾಯಿಗಳನ್ನು ಸಾಕುಪ್ರಾಣಿಗಳಾಗಿ ಇಟ್ಟುಕೊಳ್ಳುವ ಮೊದಲು ಅವುಗಳನ್ನು ನಿಯಂತ್ರಿಸಲು ಕಲಿಯಬೇಕು. ಅವರು ನಾಯಿಯ ಗಾತ್ರವನ್ನು ಗಣನೆಗೆ ತೆಗೆದುಕೊಳ್ಳಬೇಕು ಮತ್ತು ಅದನ್ನು ಸಾರ್ವಜನಿಕವಾಗಿ ತೆಗೆದುಕೊಳ್ಳುವ ಮೊದಲು ಅದನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಅವರು ಗಣನೆಗೆ ತೆಗೆದುಕೊಳ್ಳಬೇಕು ಎಂದು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ