AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿ ಮಾಡಿದ ಕಿತಾಪತಿಯಿಂದ ಹೊತ್ತಿ ಉರಿದ ಮನೆ; ವಿಡಿಯೋ ಇಲ್ಲಿದೆ ನೋಡಿ

ಮನೆಯೊಳಗೆ ಆಟವಾಡುತ್ತಿದ್ದ ನಾಯಿ ಸೋಫಾದ ಮೇಲೆ ಇರಿಸಲಾದ ಲಿಥಿಯಂ ಬ್ಯಾಟರಿಯನ್ನು ಅಗಿಯಲು ಪ್ರಾರಂಭಿಸಿದೆ. ಇದಕ್ಕಿದ್ದಂತೆ ಬ್ಯಾಟರಿಯಿಂದ ಸ್ಪಾರ್ಕ್ ಉಂಟಾಗಿದ್ದು, ಕೆಲ ಕ್ಷಣದಲ್ಲಿ ಹಾಸಿಗೆ ಸೋಫಾ ಸುಟ್ಟು ಭಸ್ಮವಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on:Aug 09, 2024 | 11:15 AM

Share

ಅನೇಕರಿಗೆ ಮನೆಯಲ್ಲಿ ಎಲ್ಲೆಂದರಲ್ಲಿ ವಸ್ತುಗಳನ್ನು ಇಡುವ ಅಭ್ಯಾಸವಿರುತ್ತದೆ. ನಿಮಗೂ ಇಂತಹ ಅಭ್ಯಾಸವಿದ್ದರೆ ಜಾಗರೂಕರಾಗಿರಿ. ಏಕೆಂದರೆ, ಇದು ಗಂಭೀರ ಪರಿಣಾಮಗಳನ್ನೂ ಉಂಟುಮಾಡಬಹುದು. ಅಮೆರಿಕದ ಒಕ್ಲಹೋಮಾದಿಂದ ಇಂತಹದೊಂದು ವಿಡಿಯೋ ಹೊರಬಿದ್ದಿದ್ದು, ಒಂದು ಕ್ಷಣ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ಅಮೆರಿಕದ ಒಕ್ಲಹೋಮ ರಾಜ್ಯದ ತುಲ್ಸಾ ನಗರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ವೀಡಿಯೊದ ಆರಂಭದಲ್ಲಿ, ಎರಡು ಸಾಕು ನಾಯಿಗಳು ಮತ್ತು ಬೆಕ್ಕು ಲಿವಿಂಗ್ ರೂಮ್‌ನಲ್ಲಿ ಆಟವಾಡುತ್ತಿರುವುದು ಕಂಡುಬಂದಿದೆ. ಈ ಮಧ್ಯೆ, ನಾಯಿಯೊಂದು ಸೋಫಾದ ಮುಂಭಾಗದ ಹಾಸಿಗೆಯ ಮೇಲೆ ಇರಿಸಲಾದ ಲಿಥಿಯಂ ಬ್ಯಾಟರಿಯನ್ನು ಅಗಿಯಲು ಪ್ರಾರಂಭಿಸುತ್ತದೆ. ಇದಕ್ಕಿದ್ದಂತೆ ಬ್ಯಾಟರಿಯಿಂದ ಸ್ಪಾರ್ಕ್ ಉಂಟಾಗಿದ್ದು, ಕೆಲ ಕ್ಷಣದಲ್ಲಿ ಹಾಸಿಗೆ ಸೋಫಾ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ನಾಯಿ ಹಾಗೂ ಬೆಕ್ಕಿಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ಇದನ್ನೂ ಓದಿ: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ

ಈ 37 ಸೆಕೆಂಡುಗಳ ವೀಡಿಯೊ ಕ್ಲಿಪ್ ಅನ್ನು ತುಲ್ಸಾ ಅಗ್ನಿಶಾಮಕ ಇಲಾಖೆ ಬಿಡುಗಡೆ ಮಾಡಿದೆ. ಇದರೊಂದಿಗೆ ಲಿಥಿಯಂ-ಐಯಾನ್ ಬ್ಯಾಟರಿಗಳ ಅಪಾಯದ ಬಗ್ಗೆಯೂ ಇಲಾಖೆ ಜನರಿಗೆ ಅರಿವು ಮೂಡಿಸಿದೆ. ಅಗಸ್ಟ್​​​ 7ರಂದು ಹಂಚಿಕೊಂಡಿರುವ ಈ ವಿಡಿಯೋ ಒಂದೇ ದಿನದಲ್ಲಿ 19.3 ಮಿಲಿಯನ್ ಅಂದರೆ 1ಕೋಟಿಯ 93ಲಕ್ಷ ​​​ ವೀಕ್ಷಣೆಯನ್ನು ಪಡೆದುಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Thu, 8 August 24

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ