AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿ ಮಾಡಿದ ಕಿತಾಪತಿಯಿಂದ ಹೊತ್ತಿ ಉರಿದ ಮನೆ; ವಿಡಿಯೋ ಇಲ್ಲಿದೆ ನೋಡಿ

ಮನೆಯೊಳಗೆ ಆಟವಾಡುತ್ತಿದ್ದ ನಾಯಿ ಸೋಫಾದ ಮೇಲೆ ಇರಿಸಲಾದ ಲಿಥಿಯಂ ಬ್ಯಾಟರಿಯನ್ನು ಅಗಿಯಲು ಪ್ರಾರಂಭಿಸಿದೆ. ಇದಕ್ಕಿದ್ದಂತೆ ಬ್ಯಾಟರಿಯಿಂದ ಸ್ಪಾರ್ಕ್ ಉಂಟಾಗಿದ್ದು, ಕೆಲ ಕ್ಷಣದಲ್ಲಿ ಹಾಸಿಗೆ ಸೋಫಾ ಸುಟ್ಟು ಭಸ್ಮವಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on:Aug 09, 2024 | 11:15 AM

Share

ಅನೇಕರಿಗೆ ಮನೆಯಲ್ಲಿ ಎಲ್ಲೆಂದರಲ್ಲಿ ವಸ್ತುಗಳನ್ನು ಇಡುವ ಅಭ್ಯಾಸವಿರುತ್ತದೆ. ನಿಮಗೂ ಇಂತಹ ಅಭ್ಯಾಸವಿದ್ದರೆ ಜಾಗರೂಕರಾಗಿರಿ. ಏಕೆಂದರೆ, ಇದು ಗಂಭೀರ ಪರಿಣಾಮಗಳನ್ನೂ ಉಂಟುಮಾಡಬಹುದು. ಅಮೆರಿಕದ ಒಕ್ಲಹೋಮಾದಿಂದ ಇಂತಹದೊಂದು ವಿಡಿಯೋ ಹೊರಬಿದ್ದಿದ್ದು, ಒಂದು ಕ್ಷಣ ಎದೆ ನಡುಕ ಹುಟ್ಟಿಸುವುದಂತೂ ಖಂಡಿತಾ.

ಅಮೆರಿಕದ ಒಕ್ಲಹೋಮ ರಾಜ್ಯದ ತುಲ್ಸಾ ನಗರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ವೀಡಿಯೊದ ಆರಂಭದಲ್ಲಿ, ಎರಡು ಸಾಕು ನಾಯಿಗಳು ಮತ್ತು ಬೆಕ್ಕು ಲಿವಿಂಗ್ ರೂಮ್‌ನಲ್ಲಿ ಆಟವಾಡುತ್ತಿರುವುದು ಕಂಡುಬಂದಿದೆ. ಈ ಮಧ್ಯೆ, ನಾಯಿಯೊಂದು ಸೋಫಾದ ಮುಂಭಾಗದ ಹಾಸಿಗೆಯ ಮೇಲೆ ಇರಿಸಲಾದ ಲಿಥಿಯಂ ಬ್ಯಾಟರಿಯನ್ನು ಅಗಿಯಲು ಪ್ರಾರಂಭಿಸುತ್ತದೆ. ಇದಕ್ಕಿದ್ದಂತೆ ಬ್ಯಾಟರಿಯಿಂದ ಸ್ಪಾರ್ಕ್ ಉಂಟಾಗಿದ್ದು, ಕೆಲ ಕ್ಷಣದಲ್ಲಿ ಹಾಸಿಗೆ ಸೋಫಾ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ನಾಯಿ ಹಾಗೂ ಬೆಕ್ಕಿಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ಇದನ್ನೂ ಓದಿ: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ

ಈ 37 ಸೆಕೆಂಡುಗಳ ವೀಡಿಯೊ ಕ್ಲಿಪ್ ಅನ್ನು ತುಲ್ಸಾ ಅಗ್ನಿಶಾಮಕ ಇಲಾಖೆ ಬಿಡುಗಡೆ ಮಾಡಿದೆ. ಇದರೊಂದಿಗೆ ಲಿಥಿಯಂ-ಐಯಾನ್ ಬ್ಯಾಟರಿಗಳ ಅಪಾಯದ ಬಗ್ಗೆಯೂ ಇಲಾಖೆ ಜನರಿಗೆ ಅರಿವು ಮೂಡಿಸಿದೆ. ಅಗಸ್ಟ್​​​ 7ರಂದು ಹಂಚಿಕೊಂಡಿರುವ ಈ ವಿಡಿಯೋ ಒಂದೇ ದಿನದಲ್ಲಿ 19.3 ಮಿಲಿಯನ್ ಅಂದರೆ 1ಕೋಟಿಯ 93ಲಕ್ಷ ​​​ ವೀಕ್ಷಣೆಯನ್ನು ಪಡೆದುಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Thu, 8 August 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ