AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತ್ಯಾಗಕ್ಕೆ ಇನ್ನೊಂದು ಹೆಸರೇ ತಾಯಿ; ಬಿಸಿಲಿನ ತಾಪದಿಂದ ಕಂದಮ್ಮನನ್ನು ರಕ್ಷಿಸಲು ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ತಾಯಿ ಪಾರಿವಾಳ

ಮನುಷ್ಯರಿಗಿಂತ ಮೂಕ ಪ್ರಾಣಿ-ಪಕ್ಷಿಗಳ ಮಾತೃ ವಾತ್ಸಲ್ಯ, ಪ್ರೀತಿ ಕೂಡಾ ಭಿನ್ನವಲ್ಲ. ಮೂಕ ಜೀವಿಗಳು ಸಹ ತಮ್ಮ ಜೀವದ ಹಂಗು ತೊರೆದು ಅಪಾಯಕ್ಕೆ ಸಿಲುಕಿದ ತಮ್ಮ ಕರುಳ ಕುಡಿಯನ್ನು ರಕ್ಷಿಸಿದ ಅನೇಕ ಉದಾಹರಣೆಗಳಿವೆ. ಇದೀಗ ಅದೇ ರೀತಿಯ ವಿಡಿಯೋವೊಂದು ವೈರಲ್‌ ಆಗಿದ್ದು, ಬಿಸಿಲ ತಾಪದಿಂದ ಕಂದಮ್ಮನನ್ನು ರಕ್ಷಿಸುವ ಸಲುವಾಗಿ ತಾಯಿ ಪಾರಿವಾಳ ತನ್ನ ಪ್ರಾಣವನ್ನೇ ತ್ಯಾಗ ಮಾಡಿದೆ.

Viral Video: ತ್ಯಾಗಕ್ಕೆ ಇನ್ನೊಂದು ಹೆಸರೇ ತಾಯಿ; ಬಿಸಿಲಿನ ತಾಪದಿಂದ ಕಂದಮ್ಮನನ್ನು ರಕ್ಷಿಸಲು  ತನ್ನ ಪ್ರಾಣವನ್ನೇ ತ್ಯಾಗ ಮಾಡಿದ  ತಾಯಿ ಪಾರಿವಾಳ
ಮಾಲಾಶ್ರೀ ಅಂಚನ್​
| Edited By: |

Updated on: Jun 02, 2024 | 4:48 PM

Share

ತನ್ನ ಕರುಳ ಕುಡಿಯ ರಕ್ಷಣೆಗಾಗಿ ತಾಯಿಯಾದವಳು ಏನು ಬೇಕಾದರೂ ಮಾಡಬಲ್ಲಳು. ತನ್ನ ಪ್ರಾಣ ಹೋಗುವ ಸಂದರ್ಭ ಬಂದರೂ ಸರಿ, ಜೀವ ಕೊಟ್ಟಾದರೂ ತನ್ನ ಕರುಳ ಬಳ್ಳಿಯ ರಕ್ಷಣೆ ಮಾಡುತ್ತಾಳೆ. ಹೌದು ತಾಯಿಯು ಮಗುವಿನ ರಕ್ಷಣೆಗಾಗಿ ತನ್ನಿಂದ ಏನು ಸಾಧ್ಯವೋ ಅದೆಲ್ಲವನ್ನೂ ಮಾಡುತ್ತಾಳೆ. ಇದೇ ಕಾರಣಕ್ಕೆ ತಾಯಿಯ ಪ್ರೀತಿ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದು ಹೇಳುವುದು. ಮನುಷ್ಯರಿಗಿಂತ ಮೂಕ ಪ್ರಾಣಿ-ಪಕ್ಷಿಗಳ ಮಾತೃ ವಾತ್ಸಲ್ಯ ಕೂಡಾ ಭಿನ್ನವಲ್ಲ. ಮೂಕ ಜೀವಿಗಳು ಸಹ ತಮ್ಮ ಜೀವದ ಹಂಗು ತೊರೆದು ಅಪಾಯಕ್ಕೆ ಸಿಲುಕಿದ ತಮ್ಮ ಕಂದಮ್ಮನನ್ನು ರಕ್ಷಿಸಿದ ಅದೆಷ್ಟೋ ಉದಾಹರಣೆಗಳಿವೆ. ಹಾಗೆಯೇ ಇಲ್ಲೊಂದು ಪಾರಿವಾಳ ತನ್ನ ಪ್ರಾಣವನ್ನೇ ಕೊಟ್ಟು ಕಂದಮ್ಮನನ್ನು ಬಿಸಿಲ ತಾಪದಿಂದ ರಕ್ಷಿಸಿದೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ವಿಡಿಯೋವನ್ನು ಅನಿತಾ ಶರ್ಮಾ (@anita_suresh_sharma) ಎಂಬವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ವಿಡಿಯೋದಲ್ಲಿ ತಾಯಿ ಪಾರಿವಾಳವು ತನ್ನ ಕಂದಮ್ಮನ್ನು ರೆಕ್ಕೆಯ ಒಳಗೆ ಬಚ್ಚಿಟ್ಟು, ರಕ್ಷಿಸುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಬಿಸಿಲ ತಾಪದಿಂದ ಕಂದಮ್ಮನನ್ನು ರಕ್ಷಿಸುವ ಸಲುವಾಗಿ ತಾಯಿ ಪಾರಿವಾಳ ತನ್ನ ಜೀವವನ್ನೇ ತ್ಯಾಗ ಮಾಡಿದೆ.

ಇದನ್ನೂ ಓದಿ: ಬೀಚ್‌ನಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಬಡಿದ ಸಿಡಿಲು; ಆಘಾತಕಾರಿ ವಿಡಿಯೋ ವೈರಲ್‌

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5.7 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಪ್ರಪಂಚದಲ್ಲಿ ತಾಯಿ ಪ್ರೀತಿಗಿಂದ ಮಿಗಿಲಾದುದು ಯಾವುದು ಇಲ್ಲ ಎನ್ನುತ್ತಾ ನೆಟ್ಟಿಗರು ಈ ವಿಡಿಯೋ ನೋಡಿ ಭಾವುಕರಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ