AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತ್ಯಾಗಕ್ಕೆ ಇನ್ನೊಂದು ಹೆಸರೇ ತಾಯಿ; ಬಿಸಿಲಿನ ತಾಪದಿಂದ ಕಂದಮ್ಮನನ್ನು ರಕ್ಷಿಸಲು ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ತಾಯಿ ಪಾರಿವಾಳ

ಮನುಷ್ಯರಿಗಿಂತ ಮೂಕ ಪ್ರಾಣಿ-ಪಕ್ಷಿಗಳ ಮಾತೃ ವಾತ್ಸಲ್ಯ, ಪ್ರೀತಿ ಕೂಡಾ ಭಿನ್ನವಲ್ಲ. ಮೂಕ ಜೀವಿಗಳು ಸಹ ತಮ್ಮ ಜೀವದ ಹಂಗು ತೊರೆದು ಅಪಾಯಕ್ಕೆ ಸಿಲುಕಿದ ತಮ್ಮ ಕರುಳ ಕುಡಿಯನ್ನು ರಕ್ಷಿಸಿದ ಅನೇಕ ಉದಾಹರಣೆಗಳಿವೆ. ಇದೀಗ ಅದೇ ರೀತಿಯ ವಿಡಿಯೋವೊಂದು ವೈರಲ್‌ ಆಗಿದ್ದು, ಬಿಸಿಲ ತಾಪದಿಂದ ಕಂದಮ್ಮನನ್ನು ರಕ್ಷಿಸುವ ಸಲುವಾಗಿ ತಾಯಿ ಪಾರಿವಾಳ ತನ್ನ ಪ್ರಾಣವನ್ನೇ ತ್ಯಾಗ ಮಾಡಿದೆ.

Viral Video: ತ್ಯಾಗಕ್ಕೆ ಇನ್ನೊಂದು ಹೆಸರೇ ತಾಯಿ; ಬಿಸಿಲಿನ ತಾಪದಿಂದ ಕಂದಮ್ಮನನ್ನು ರಕ್ಷಿಸಲು  ತನ್ನ ಪ್ರಾಣವನ್ನೇ ತ್ಯಾಗ ಮಾಡಿದ  ತಾಯಿ ಪಾರಿವಾಳ
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ|

Updated on: Jun 02, 2024 | 4:48 PM

Share

ತನ್ನ ಕರುಳ ಕುಡಿಯ ರಕ್ಷಣೆಗಾಗಿ ತಾಯಿಯಾದವಳು ಏನು ಬೇಕಾದರೂ ಮಾಡಬಲ್ಲಳು. ತನ್ನ ಪ್ರಾಣ ಹೋಗುವ ಸಂದರ್ಭ ಬಂದರೂ ಸರಿ, ಜೀವ ಕೊಟ್ಟಾದರೂ ತನ್ನ ಕರುಳ ಬಳ್ಳಿಯ ರಕ್ಷಣೆ ಮಾಡುತ್ತಾಳೆ. ಹೌದು ತಾಯಿಯು ಮಗುವಿನ ರಕ್ಷಣೆಗಾಗಿ ತನ್ನಿಂದ ಏನು ಸಾಧ್ಯವೋ ಅದೆಲ್ಲವನ್ನೂ ಮಾಡುತ್ತಾಳೆ. ಇದೇ ಕಾರಣಕ್ಕೆ ತಾಯಿಯ ಪ್ರೀತಿ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದು ಹೇಳುವುದು. ಮನುಷ್ಯರಿಗಿಂತ ಮೂಕ ಪ್ರಾಣಿ-ಪಕ್ಷಿಗಳ ಮಾತೃ ವಾತ್ಸಲ್ಯ ಕೂಡಾ ಭಿನ್ನವಲ್ಲ. ಮೂಕ ಜೀವಿಗಳು ಸಹ ತಮ್ಮ ಜೀವದ ಹಂಗು ತೊರೆದು ಅಪಾಯಕ್ಕೆ ಸಿಲುಕಿದ ತಮ್ಮ ಕಂದಮ್ಮನನ್ನು ರಕ್ಷಿಸಿದ ಅದೆಷ್ಟೋ ಉದಾಹರಣೆಗಳಿವೆ. ಹಾಗೆಯೇ ಇಲ್ಲೊಂದು ಪಾರಿವಾಳ ತನ್ನ ಪ್ರಾಣವನ್ನೇ ಕೊಟ್ಟು ಕಂದಮ್ಮನನ್ನು ಬಿಸಿಲ ತಾಪದಿಂದ ರಕ್ಷಿಸಿದೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ವಿಡಿಯೋವನ್ನು ಅನಿತಾ ಶರ್ಮಾ (@anita_suresh_sharma) ಎಂಬವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ವಿಡಿಯೋದಲ್ಲಿ ತಾಯಿ ಪಾರಿವಾಳವು ತನ್ನ ಕಂದಮ್ಮನ್ನು ರೆಕ್ಕೆಯ ಒಳಗೆ ಬಚ್ಚಿಟ್ಟು, ರಕ್ಷಿಸುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಬಿಸಿಲ ತಾಪದಿಂದ ಕಂದಮ್ಮನನ್ನು ರಕ್ಷಿಸುವ ಸಲುವಾಗಿ ತಾಯಿ ಪಾರಿವಾಳ ತನ್ನ ಜೀವವನ್ನೇ ತ್ಯಾಗ ಮಾಡಿದೆ.

ಇದನ್ನೂ ಓದಿ: ಬೀಚ್‌ನಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಬಡಿದ ಸಿಡಿಲು; ಆಘಾತಕಾರಿ ವಿಡಿಯೋ ವೈರಲ್‌

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5.7 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಪ್ರಪಂಚದಲ್ಲಿ ತಾಯಿ ಪ್ರೀತಿಗಿಂದ ಮಿಗಿಲಾದುದು ಯಾವುದು ಇಲ್ಲ ಎನ್ನುತ್ತಾ ನೆಟ್ಟಿಗರು ಈ ವಿಡಿಯೋ ನೋಡಿ ಭಾವುಕರಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ