AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತ್ಯಾಗಕ್ಕೆ ಇನ್ನೊಂದು ಹೆಸರೇ ತಾಯಿ; ಬಿಸಿಲಿನ ತಾಪದಿಂದ ಕಂದಮ್ಮನನ್ನು ರಕ್ಷಿಸಲು ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ತಾಯಿ ಪಾರಿವಾಳ

ಮನುಷ್ಯರಿಗಿಂತ ಮೂಕ ಪ್ರಾಣಿ-ಪಕ್ಷಿಗಳ ಮಾತೃ ವಾತ್ಸಲ್ಯ, ಪ್ರೀತಿ ಕೂಡಾ ಭಿನ್ನವಲ್ಲ. ಮೂಕ ಜೀವಿಗಳು ಸಹ ತಮ್ಮ ಜೀವದ ಹಂಗು ತೊರೆದು ಅಪಾಯಕ್ಕೆ ಸಿಲುಕಿದ ತಮ್ಮ ಕರುಳ ಕುಡಿಯನ್ನು ರಕ್ಷಿಸಿದ ಅನೇಕ ಉದಾಹರಣೆಗಳಿವೆ. ಇದೀಗ ಅದೇ ರೀತಿಯ ವಿಡಿಯೋವೊಂದು ವೈರಲ್‌ ಆಗಿದ್ದು, ಬಿಸಿಲ ತಾಪದಿಂದ ಕಂದಮ್ಮನನ್ನು ರಕ್ಷಿಸುವ ಸಲುವಾಗಿ ತಾಯಿ ಪಾರಿವಾಳ ತನ್ನ ಪ್ರಾಣವನ್ನೇ ತ್ಯಾಗ ಮಾಡಿದೆ.

Viral Video: ತ್ಯಾಗಕ್ಕೆ ಇನ್ನೊಂದು ಹೆಸರೇ ತಾಯಿ; ಬಿಸಿಲಿನ ತಾಪದಿಂದ ಕಂದಮ್ಮನನ್ನು ರಕ್ಷಿಸಲು  ತನ್ನ ಪ್ರಾಣವನ್ನೇ ತ್ಯಾಗ ಮಾಡಿದ  ತಾಯಿ ಪಾರಿವಾಳ
ಮಾಲಾಶ್ರೀ ಅಂಚನ್​
| Edited By: |

Updated on: Jun 02, 2024 | 4:48 PM

Share

ತನ್ನ ಕರುಳ ಕುಡಿಯ ರಕ್ಷಣೆಗಾಗಿ ತಾಯಿಯಾದವಳು ಏನು ಬೇಕಾದರೂ ಮಾಡಬಲ್ಲಳು. ತನ್ನ ಪ್ರಾಣ ಹೋಗುವ ಸಂದರ್ಭ ಬಂದರೂ ಸರಿ, ಜೀವ ಕೊಟ್ಟಾದರೂ ತನ್ನ ಕರುಳ ಬಳ್ಳಿಯ ರಕ್ಷಣೆ ಮಾಡುತ್ತಾಳೆ. ಹೌದು ತಾಯಿಯು ಮಗುವಿನ ರಕ್ಷಣೆಗಾಗಿ ತನ್ನಿಂದ ಏನು ಸಾಧ್ಯವೋ ಅದೆಲ್ಲವನ್ನೂ ಮಾಡುತ್ತಾಳೆ. ಇದೇ ಕಾರಣಕ್ಕೆ ತಾಯಿಯ ಪ್ರೀತಿ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದು ಹೇಳುವುದು. ಮನುಷ್ಯರಿಗಿಂತ ಮೂಕ ಪ್ರಾಣಿ-ಪಕ್ಷಿಗಳ ಮಾತೃ ವಾತ್ಸಲ್ಯ ಕೂಡಾ ಭಿನ್ನವಲ್ಲ. ಮೂಕ ಜೀವಿಗಳು ಸಹ ತಮ್ಮ ಜೀವದ ಹಂಗು ತೊರೆದು ಅಪಾಯಕ್ಕೆ ಸಿಲುಕಿದ ತಮ್ಮ ಕಂದಮ್ಮನನ್ನು ರಕ್ಷಿಸಿದ ಅದೆಷ್ಟೋ ಉದಾಹರಣೆಗಳಿವೆ. ಹಾಗೆಯೇ ಇಲ್ಲೊಂದು ಪಾರಿವಾಳ ತನ್ನ ಪ್ರಾಣವನ್ನೇ ಕೊಟ್ಟು ಕಂದಮ್ಮನನ್ನು ಬಿಸಿಲ ತಾಪದಿಂದ ರಕ್ಷಿಸಿದೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ವಿಡಿಯೋವನ್ನು ಅನಿತಾ ಶರ್ಮಾ (@anita_suresh_sharma) ಎಂಬವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ವಿಡಿಯೋದಲ್ಲಿ ತಾಯಿ ಪಾರಿವಾಳವು ತನ್ನ ಕಂದಮ್ಮನ್ನು ರೆಕ್ಕೆಯ ಒಳಗೆ ಬಚ್ಚಿಟ್ಟು, ರಕ್ಷಿಸುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಬಿಸಿಲ ತಾಪದಿಂದ ಕಂದಮ್ಮನನ್ನು ರಕ್ಷಿಸುವ ಸಲುವಾಗಿ ತಾಯಿ ಪಾರಿವಾಳ ತನ್ನ ಜೀವವನ್ನೇ ತ್ಯಾಗ ಮಾಡಿದೆ.

ಇದನ್ನೂ ಓದಿ: ಬೀಚ್‌ನಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಬಡಿದ ಸಿಡಿಲು; ಆಘಾತಕಾರಿ ವಿಡಿಯೋ ವೈರಲ್‌

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5.7 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಪ್ರಪಂಚದಲ್ಲಿ ತಾಯಿ ಪ್ರೀತಿಗಿಂದ ಮಿಗಿಲಾದುದು ಯಾವುದು ಇಲ್ಲ ಎನ್ನುತ್ತಾ ನೆಟ್ಟಿಗರು ಈ ವಿಡಿಯೋ ನೋಡಿ ಭಾವುಕರಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?