Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತ್ಯಾಗಕ್ಕೆ ಇನ್ನೊಂದು ಹೆಸರೇ ತಾಯಿ; ಬಿಸಿಲಿನ ತಾಪದಿಂದ ಕಂದಮ್ಮನನ್ನು ರಕ್ಷಿಸಲು ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ತಾಯಿ ಪಾರಿವಾಳ

ಮನುಷ್ಯರಿಗಿಂತ ಮೂಕ ಪ್ರಾಣಿ-ಪಕ್ಷಿಗಳ ಮಾತೃ ವಾತ್ಸಲ್ಯ, ಪ್ರೀತಿ ಕೂಡಾ ಭಿನ್ನವಲ್ಲ. ಮೂಕ ಜೀವಿಗಳು ಸಹ ತಮ್ಮ ಜೀವದ ಹಂಗು ತೊರೆದು ಅಪಾಯಕ್ಕೆ ಸಿಲುಕಿದ ತಮ್ಮ ಕರುಳ ಕುಡಿಯನ್ನು ರಕ್ಷಿಸಿದ ಅನೇಕ ಉದಾಹರಣೆಗಳಿವೆ. ಇದೀಗ ಅದೇ ರೀತಿಯ ವಿಡಿಯೋವೊಂದು ವೈರಲ್‌ ಆಗಿದ್ದು, ಬಿಸಿಲ ತಾಪದಿಂದ ಕಂದಮ್ಮನನ್ನು ರಕ್ಷಿಸುವ ಸಲುವಾಗಿ ತಾಯಿ ಪಾರಿವಾಳ ತನ್ನ ಪ್ರಾಣವನ್ನೇ ತ್ಯಾಗ ಮಾಡಿದೆ.

Viral Video: ತ್ಯಾಗಕ್ಕೆ ಇನ್ನೊಂದು ಹೆಸರೇ ತಾಯಿ; ಬಿಸಿಲಿನ ತಾಪದಿಂದ ಕಂದಮ್ಮನನ್ನು ರಕ್ಷಿಸಲು  ತನ್ನ ಪ್ರಾಣವನ್ನೇ ತ್ಯಾಗ ಮಾಡಿದ  ತಾಯಿ ಪಾರಿವಾಳ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Jun 02, 2024 | 4:48 PM

ತನ್ನ ಕರುಳ ಕುಡಿಯ ರಕ್ಷಣೆಗಾಗಿ ತಾಯಿಯಾದವಳು ಏನು ಬೇಕಾದರೂ ಮಾಡಬಲ್ಲಳು. ತನ್ನ ಪ್ರಾಣ ಹೋಗುವ ಸಂದರ್ಭ ಬಂದರೂ ಸರಿ, ಜೀವ ಕೊಟ್ಟಾದರೂ ತನ್ನ ಕರುಳ ಬಳ್ಳಿಯ ರಕ್ಷಣೆ ಮಾಡುತ್ತಾಳೆ. ಹೌದು ತಾಯಿಯು ಮಗುವಿನ ರಕ್ಷಣೆಗಾಗಿ ತನ್ನಿಂದ ಏನು ಸಾಧ್ಯವೋ ಅದೆಲ್ಲವನ್ನೂ ಮಾಡುತ್ತಾಳೆ. ಇದೇ ಕಾರಣಕ್ಕೆ ತಾಯಿಯ ಪ್ರೀತಿ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದು ಹೇಳುವುದು. ಮನುಷ್ಯರಿಗಿಂತ ಮೂಕ ಪ್ರಾಣಿ-ಪಕ್ಷಿಗಳ ಮಾತೃ ವಾತ್ಸಲ್ಯ ಕೂಡಾ ಭಿನ್ನವಲ್ಲ. ಮೂಕ ಜೀವಿಗಳು ಸಹ ತಮ್ಮ ಜೀವದ ಹಂಗು ತೊರೆದು ಅಪಾಯಕ್ಕೆ ಸಿಲುಕಿದ ತಮ್ಮ ಕಂದಮ್ಮನನ್ನು ರಕ್ಷಿಸಿದ ಅದೆಷ್ಟೋ ಉದಾಹರಣೆಗಳಿವೆ. ಹಾಗೆಯೇ ಇಲ್ಲೊಂದು ಪಾರಿವಾಳ ತನ್ನ ಪ್ರಾಣವನ್ನೇ ಕೊಟ್ಟು ಕಂದಮ್ಮನನ್ನು ಬಿಸಿಲ ತಾಪದಿಂದ ರಕ್ಷಿಸಿದೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ವಿಡಿಯೋವನ್ನು ಅನಿತಾ ಶರ್ಮಾ (@anita_suresh_sharma) ಎಂಬವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ವಿಡಿಯೋದಲ್ಲಿ ತಾಯಿ ಪಾರಿವಾಳವು ತನ್ನ ಕಂದಮ್ಮನ್ನು ರೆಕ್ಕೆಯ ಒಳಗೆ ಬಚ್ಚಿಟ್ಟು, ರಕ್ಷಿಸುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಬಿಸಿಲ ತಾಪದಿಂದ ಕಂದಮ್ಮನನ್ನು ರಕ್ಷಿಸುವ ಸಲುವಾಗಿ ತಾಯಿ ಪಾರಿವಾಳ ತನ್ನ ಜೀವವನ್ನೇ ತ್ಯಾಗ ಮಾಡಿದೆ.

ಇದನ್ನೂ ಓದಿ: ಬೀಚ್‌ನಲ್ಲಿ ಆಟವಾಡುತ್ತಿದ್ದ ವೇಳೆ ಮೂವರು ಮಕ್ಕಳ ಮೇಲೆ ಬಡಿದ ಸಿಡಿಲು; ಆಘಾತಕಾರಿ ವಿಡಿಯೋ ವೈರಲ್‌

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5.7 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಪ್ರಪಂಚದಲ್ಲಿ ತಾಯಿ ಪ್ರೀತಿಗಿಂದ ಮಿಗಿಲಾದುದು ಯಾವುದು ಇಲ್ಲ ಎನ್ನುತ್ತಾ ನೆಟ್ಟಿಗರು ಈ ವಿಡಿಯೋ ನೋಡಿ ಭಾವುಕರಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ