AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ಪೈಲಟ್; ಕಂಗಾಲಾದ ಪ್ರಯಾಣಿಕರು

@RestrictedVids ಎಂಬ ಟ್ವಿಟರ್​​ ಖಾತೆಯಲ್ಲಿ ಜೂನ್​​ 15ರಂದು ಪೈಲಟ್ ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ನಾಲ್ಕು ದಿನಗಳಲ್ಲಿ 11.6 ಮಿಲಿಯನ್​​​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Viral Video: ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ಪೈಲಟ್; ಕಂಗಾಲಾದ ಪ್ರಯಾಣಿಕರು
ಅಕ್ಷತಾ ವರ್ಕಾಡಿ
|

Updated on:Jun 19, 2024 | 2:39 PM

Share

ಆಕಾಶದಲ್ಲಿ ಮೂರ್ಛೆ ಹೋದಂತೆ ನಟಿಸಿದ ಪೈಲಟ್ ಒಬ್ಬರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ವಿಡಿಯೋದಲ್ಲಿ ಪೈಲಟ್​​ ಜೊತೆಗೆ ದಂಪತಿಯೊಂದು ಹೆಲಿಕಾಪ್ಟರ್​​ನಲ್ಲಿ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಇದಕ್ಕಿದ್ದಂತೆ ಪೈಲಟ್​​​ ಮೂರ್ಛೆ ಹೋದಂತೆ ನಟಿಸಿದ್ದು, ಇದನ್ನು ಕಂಡು ಹಿಂದೆ ಕುಳಿತಿದ್ದ ಜೋಡಿ ಹೆದರಿ ಹೋಗಿದ್ದಾರೆ. ಅವರು ಪೈಲಟ್​​ನ್ನು ಎಚ್ಚರಿಸಲು ಸಾಹಸ ಪಡುತ್ತಿರುವುದನ್ನು ಕಾಣಬಹುದು. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

@RestrictedVids ಎಂಬ ಟ್ವಿಟರ್​​ ಖಾತೆಯಲ್ಲಿ ಜೂನ್​​ 15ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ನಾಲ್ಕು ದಿನಗಳಲ್ಲಿ 11.6 ಮಿಲಿಯನ್​​​ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ವೀಡಿಯೋಗೆ ಮಿಶ್ರ ಪ್ರತಿಕ್ರಿಯೆ ಬಂದಿರುವುದನ್ನು ಕಾಣಬಹುದು. “ಇದು ತಮಾಷೆಯಲ್ಲ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಮೇಜಾನ್‌ ಪಾರ್ಸೆಲ್​​ನಲ್ಲಿ ಬಂದ ನಾಗಪ್ಪ, ಬುಸುಗುಟ್ಟುತ್ತಿರುವ ಹಾವು ಕಂಡು ಬೆಚ್ಚಿಬಿದ್ದ ದಂಪತಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಪೈಲಟ್​​​ ಮೂರ್ಛೆ ಹೋದಂತೆ ನಟಿಸಿದ್ದು, ಇದು ದಂಪತಿಗಳಿಗೆ ತಿಳಿದಿಲ್ಲ. ಕೆಲ ಹೊತ್ತಿನ ಬಳಿಕ ಪೈಲಂಟ್​​ ಏಳದೇ ಇರುವ ಕಾರಣ ದಂಪತಿಗಳಿಗೆ ಭಯ ಹುಟ್ಟಿದೆ. ಮಹಿಳೆಯಂತೂ ಅಳುತ್ತಿರುವುದನ್ನು ಕಾಣಬಹುದು. ಆಕೆಯ ಗಂಡ ಪೈಲೆಟ್​​​ನ್ನು ಎಬ್ಬಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:56 pm, Wed, 19 June 24

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ