AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಆಸ್ಪತ್ರೆಯಲ್ಲಿದ್ದ ತನ್ನ ಅಭಿಮಾನಿಯನ್ನು ಭೇಟಿಯಾಗಿ ಸರ್ಪ್ರೈಸ್ ಕೊಟ್ಟ ಸುನಿಲ್ ಛೆಟ್ರಿ

ಫುಟ್‌ಬಾಲ್‌ ದಿಗ್ಗಜ ಸುನಿಲ್ ಛೆಟ್ರಿ ಆಸ್ಪತ್ರೆಯಲ್ಲಿದ್ದ ತನ್ನ ಅಭಿಮಾನಿಯೊಬ್ಬರನ್ನು ದಿಢೀರ್ ಭೇಟಿಯಾಗಿ ಸರ್ಪ್ರೈಸ್ ಕೊಟ್ಟಿದ್ದಾರೆ. ಬೆಂಗಳೂರು ಫುಟ್ಬಾಲ್ ಕ್ಲಬ್ ನ ಅಧಿಕೃತ ಇನ್ಸ್ಟಾಗ್ರಾಮ್​​ ಖಾತೆ(@bengalurufc) ಈ ವಿಡಿಯೋವನ್ನು ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

Video Viral: ಆಸ್ಪತ್ರೆಯಲ್ಲಿದ್ದ ತನ್ನ ಅಭಿಮಾನಿಯನ್ನು ಭೇಟಿಯಾಗಿ ಸರ್ಪ್ರೈಸ್ ಕೊಟ್ಟ ಸುನಿಲ್ ಛೆಟ್ರಿ
ಆಸ್ಪತ್ರೆಯಲ್ಲಿದ್ದ ತನ್ನ ಅಭಿಮಾನಿಯನ್ನು ಭೇಟಿಯಾದ ಸುನಿಲ್ ಛೆಟ್ರಿ
ಅಕ್ಷತಾ ವರ್ಕಾಡಿ
|

Updated on:May 29, 2024 | 10:59 AM

Share

ಫುಟ್‌ಬಾಲ್‌ ದಿಗ್ಗಜ ಹಾಗೂ ಭಾರತ ಫುಟ್‌ಬಾಲ್‌ ತಂಡದ ನಾಯಕ ಸುನಿಲ್ ಛೆಟ್ರಿ(Sunil Chhetri) ಇತ್ತೀಚಿಗಷ್ಟೇ ಅಂತಾರಾಷ್ಟ್ರೀಯ ಫುಟ್‌ಬಾಲ್‌ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಆಸ್ಪತ್ರೆಯಲ್ಲಿದ್ದ ತನ್ನ ಅಭಿಮಾನಿಯೊಬ್ಬರನ್ನು ಸುನಿಲ್ ಛೆಟ್ರಿ ಭೇಟಿ ನೀಡಿ ಸರ್ಪ್ರೈಸ್ ಕೊಟ್ಟ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿದ್ದ ತನ್ನ ಅಭಿಮಾನಿ ತೇಜಸ್‌ ಎಂಬ ಯುವಕನನ್ನು ಭೇಟಿ ಮಾಡಿ ಆತನ ಆಸೆ ಈಡೇರಿಸಿದ್ದಾರೆ.

ಬೆಂಗಳೂರು ಫುಟ್ಬಾಲ್ ಕ್ಲಬ್ ನ ಅಧಿಕೃತ ಇನ್ಸ್ಟಾಗ್ರಾಮ್​​ ಖಾತೆ(@bengalurufc) ಈ ವಿಡಿಯೋವನ್ನು ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 41,495 ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದಲ್ಲದೇ ಈ ವಿಡಿಯೋ 5ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ ಛೆಟ್ರಿಯ ಹೃದಯವಂತಿಕೆಗೆ ಸಾಕಷ್ಟು ನೆಟ್ಟಿಗರಿಂದ ಕಾಮೆಂಟ್​​ ಮೂಲಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅನಂತ್ ಅಂಬಾನಿಯ 2ನೇ ಪ್ರೀ ವೆಡ್ಡಿಂಗ್ ಸಂಭ್ರಮದ ಐಷಾರಾಮಿ ಹಡಗು ಹೇಗಿದೆ ನೋಡಿ

ದೇಶದ ಅತ್ಯುತ್ತಮ ಫುಟ್‌ಬಾಲ್ ಆಟಗಾರನಾಗಿ ಹೆಸರು ಗಳಿಸಿರುವ ಸುನಿಲ್ ಛೆಟ್ರಿ ಭಾರತಕ್ಕಾಗಿ ಆಡಿದ 150 ಪಂದ್ಯಗಳಲ್ಲಿ 94 ಗೋಲುಗಳನ್ನು ಗಳಿಸಿದ್ದಾರೆ. 39 ವರ್ಷ ವಯಸ್ಸಿನ ಅವರು, ಭಾರತೀಯ ಫುಟ್‌ಬಾಲ್‌ ತಂಡದ ಪ್ರಮುಖ ಭಾಗವಾಗಿದ್ದಾರೆ. ಇತ್ತೀಚಿಗಷ್ಟೇ ಜೂನ್ 6 ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಕುವೈತ್ ವಿರುದ್ಧ ವಿಶ್ವಕಪ್ ಅರ್ಹತಾ ಪಂದ್ಯಗಳ ಎರಡನೇ ಸುತ್ತಿನಲ್ಲಿ ಸುನಿಲ್ ಛೆಟ್ರಿ ದೇಶಕ್ಕಾಗಿ ತಮ್ಮ ಕೊನೆಯ ಪಂದ್ಯವನ್ನು ಆಡಲು ಸಿದ್ಧವಾಗಿರುವುದಾಗಿ ಘೋಷಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:49 am, Wed, 29 May 24

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ