Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೆಲ್ಫಿ ಕ್ರೇಜ್: ಕೂದಲೆಳೆ ಅಂತರದಲ್ಲಿ ಭಾರೀ ಅಪಘಾತದಿಂದ ಪಾರಾದ ಮಹಿಳೆ

ಚಲಿಸುತ್ತಿದ್ದ ರೈಲಿನ ಮುಂದೆ ಸೆಲ್ಫಿ ತೆಗೆಯಲು ಯತ್ನಿಸಿದ ಮಹಿಳೆಯೊಬ್ಬಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತೈವಾನ್‌ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೆಲ್ಫಿ ಮತ್ತು ರೀಲ್ಸ್‌ಗಳ ಹುಚ್ಚು ಜನರನ್ನು ಅಪಾಯಕ್ಕೆ ತಳ್ಳುತ್ತಿದೆ ಎಂದು ಈ ಘಟನೆ ಎತ್ತಿ ತೋರಿಸುತ್ತದೆ. ಸದ್ಯ ವಿಡಿಯೋ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ.

Viral Video: ಸೆಲ್ಫಿ ಕ್ರೇಜ್: ಕೂದಲೆಳೆ ಅಂತರದಲ್ಲಿ ಭಾರೀ ಅಪಘಾತದಿಂದ ಪಾರಾದ ಮಹಿಳೆ
Video Viral
Follow us
ಅಕ್ಷತಾ ವರ್ಕಾಡಿ
|

Updated on: Dec 18, 2024 | 12:11 PM

ಸೆಲ್ಫಿ, ರೀಲ್ಸ್​ ಕ್ರೇಜ್ ಜನರಲ್ಲಿ ಹೆಚ್ಚಾಗಿದ್ದು, ಅದಕ್ಕಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಾರೆ. ಸಾಮಾಜಿಕ ಮಾಧ್ಯಮದ ಈ ಯುಗದಲ್ಲಿ, ಈ ಪ್ರವೃತ್ತಿಯು ಅನೇಕ ಜನರ ಪ್ರಾಣವನ್ನು ತೆಗೆದುಕೊಂಡಿದೆ. ಇದಕ್ಕೆ ಹಲವಾರು ಉದಾಹರಣೆಗಳನ್ನು ನಾವು ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ನೋಡುತ್ತಿರುತ್ತೇವೆ. ಇದೀಗ ತೈವಾನ್‌ನಲ್ಲೇ ಅಂತದ್ದೇ ಪ್ರಕರಣ ದಾಖಲಾಗಿದೆ. ಚಲಿಸುವ ರೈಲಿನ ಮುಂದೆ ನಿಂತು ಮಹಿಳೆಯೊಬ್ಬಳು ಸೆಲ್ಫಿ ತೆಗೆಯಲು ಹೋಗಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅಪಘಾತದಿಂದ ಪಾರಾಗಿದ್ದಾಳೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಡಿಸೆಂಬರ್ 14 ರಂದು ಲುಯಿ ಎಂಬ ಮಹಿಳೆ ರಜೆಗಾಗಿ ತೈವಾನ್‌ನ ಚಿಯಾಯ್‌ನಲ್ಲಿರುವ ಅಲಿಶಾನ್ ಫಾರೆಸ್ಟ್ ರೈಲ್ವೆ ಬಳಿ ಹೋಗಿದ್ದಾಳೆ. ದೂರದಿಂದ ರೈಲು ಬರುತ್ತಿರುವುದನ್ನು ಕಂಡು ತಕ್ಷಣ ಮಹಿಳೆ ಸೆಲ್ಫಿ ತೆಗೆದುಕೊಳ್ಳಲು ರೈಲಿನ ಹಳಿಯ ಪಕ್ಕದಲ್ಲಿ ನಿಂತಿದ್ದಾಳೆ. ಆದರೆ ಬಂದ ರಭಸಕ್ಕೆ ಆಕೆಗೆ ಡಿಕ್ಕಿ ಹೊಡೆದಿದೆ. ಸದ್ಯ ಸಣ್ಣಪುಟ್ಟ ಗಾಯಗಳಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಡಿಕ್ಕಿಯ ರಭಸಕ್ಕೆ ಲೂಯಿಸ್ ಅವರ ಎಡಗಾಲಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ರೈಲಿನ ಮಹಿಳಾ ಬೋಗಿಗೆ ನಗ್ನವಾಗಿ ನುಗ್ಗಿದ ವ್ಯಕ್ತಿ; ಗಾಬರಿಗೊಂಡು ಕಿರುಚಾಡಿದ ಮಹಿಳಾ ಪ್ರಯಾಣಿಕರು

ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯವನ್ನು @Bubblebathgirl ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಡಿಸೆಂಬರ್​ 16ರಂದು ಹಂಚಿಕೊಂಡಿರುವ ವಿಡಿಯೋ ಸದ್ಯ ಎಲ್ಲೆಡೆ ವ್ಯಾಪಕವಾಗಿ ಹರಿದಾಡುತ್ತಿದೆ. ಘಟನೆಯಿಂದಾಗಿ ರೈಲು ಸಂಚಾರದಲ್ಲಿ 60 ನಿಮಿಷಗಳ ವಿಳಂಬವಾಗಿದ್ದು, ಸಾವಿರಾರೂ ಪ್ರಯಾಣಿಕರ ಮೇಲೆ ಪರಿಣಾಮ ಬೀರಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್