AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವಿನ ವಿಷ ಮಾನವನ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಗೊತ್ತಾ? ವಿಡಿಯೋ ವೈರಲ್​

ಈ ವೈರಲ್ ವೀಡಿಯೊದಲ್ಲಿ ಪ್ರಯೋಗವೊಂದನ್ನು ತೋರಿಸಲಾಗಿದೆ. ಈ ಪ್ರಯೋಗವು ಹಾವು ಮಾನವ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತೋರಿಸುತ್ತದೆ. ಒಂದು ಹನಿ ವಿಷವು ನಿಮ್ಮ ರಕ್ತದ ಮೇಲೆ ಎಷ್ಟು ಆಳವಾಗಿ ಪರಿಣಾಮ ಬೀರುತ್ತದೆ ಎಂಬುದನ್ನು ವೀಡಿಯೊದಲ್ಲಿ ಕಾಣಬಹುದು.

ಹಾವಿನ ವಿಷ ಮಾನವನ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಗೊತ್ತಾ? ವಿಡಿಯೋ ವೈರಲ್​
Video Viral
ಅಕ್ಷತಾ ವರ್ಕಾಡಿ
|

Updated on: Mar 08, 2024 | 9:28 PM

Share

ಹಾವಿನ ವಿಷ ನೇರವಾಗಿ ಮನುಷ್ಯನ ದೇಹ ಪ್ರವೇಶಿಸಿದರೆ ಪ್ರಾಣ ಕಳೆದುಕೊಳ್ಳುವುದಂತೂ ಖಂಡಿತಾ. ಹಾಗಾಗಿ ಸಾಕಷ್ಟು ಜನರಿಗೆ ಹಾವುಗಳೆಂದರೆ ಭಯ. ಹಾವು ಯಾರಿಗಾದರೂ ಕಚ್ಚಿದರೆ ಅವರ ಜೀವ ಉಳಿಸುವುದು ತುಂಬಾ ಕಷ್ಟ. ಹಾವಿನ ವಿಷ ನಮ್ಮ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಗೊತ್ತಾ? ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಹಾವಿನ ವಿಷವು ಮಾನವನ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಈ ವೈರಲ್ ವೀಡಿಯೊದಲ್ಲಿ ತೋರಿಸಲಾಗಿದೆ.ಈ ವಿಡಿಯೋ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

ಈ ವೈರಲ್ ವೀಡಿಯೊದಲ್ಲಿ ಪ್ರಯೋಗವೊಂದನ್ನು ತೋರಿಸಲಾಗಿದೆ. ಈ ಪ್ರಯೋಗವು ಹಾವು ಮಾನವ ರಕ್ತದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತೋರಿಸುತ್ತದೆ. ಈ ವೈರಲ್ ವೀಡಿಯೊದಲ್ಲಿ ತಜ್ಞರು ಹಾವಿನ ವಿಷವನ್ನು ಗಾಜಿನ ಪಾತ್ರೆಯಲ್ಲಿ ಸಂಗ್ರಹಿಸುವುದನ್ನು ಕಾಣಬಹುದು. ಬಳಿಕ ಈ ವಿಷವನ್ನು ಇದೀಗಾಗಲೇ ಸಂಗ್ರಹಿಸಿಟ್ಟಿದ್ದ ಮಾನವ ರಕ್ತದೊಂದಿಗೆ ಸಂಗ್ರಹಿಸುತ್ತಿರುವುದನ್ನು ಕಾಣಬಹುದು. ಹಾವಿನ ವಿಷ ರಕ್ತದೊಂದಿಗೆ ಸೇರುತ್ತಿದ್ದಂತೆ ರಕ್ತ ಹೆಪ್ಪುಗಟ್ಟುವುದನ್ನು ಕಾಣಬಹುದು. ಒಂದು ಹನಿ ವಿಷವು ನಿಮ್ಮ ರಕ್ತದ ಮೇಲೆ ಎಷ್ಟು ಆಳವಾಗಿ ಪರಿಣಾಮ ಬೀರುತ್ತದೆ ಎಂಬುದನ್ನು ವೀಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿ: ಇಲ್ಲಿ ಪುರುಷರು ಕಡ್ಡಾಯವಾಗಿ ಎರಡು ಮದುವೆಯಾಗಲೇಬೇಕು! ʼನೋʼ ಅಂದ್ರೆ ಕಠಿಣ ಶಿಕ್ಷೆ

ಈ ವೀಡಿಯೊವನ್ನು @cooltechtipz ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅನೇಕ ಬಳಕೆದಾರರು ವೀಡಿಯೊಗೆ ಪ್ರತಿಕ್ರಿಯಿಸಿದ್ದಾರೆ. ಒಬ್ಬ ಬಳಕೆದಾರನು ವಿಡಿಯೋ ವೀಕ್ಷಿಸಲು ಭಯಾನಕವಾಗಿದೆ ಎಂದು ಬರೆದರೆ, ಇನ್ನೊಬ್ಬ ಹಾವು ಕಚ್ಚಿದಾಗ ರಕ್ತ ಹೆಪ್ಪುಗಟ್ಟುತ್ತದೆಯೇ..? ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ